2014ಕ್ಕಿಂತ ಮತದಾನ ತುಸು ಹೆಚ್ಚು: ಸಂಜೀವ್‌ಕುಮಾರ್‌


Team Udayavani, Apr 24, 2019, 3:35 AM IST

2014kkinta

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಮತದಾನದಲ್ಲೂ ಮತದಾರನಿಂದ ತಕ್ಕ ಮಟ್ಟಿಗೆ ಉತ್ತರ ಸಿಕ್ಕಿಲ್ಲ. 14 ಕ್ಷೇತ್ರದಲ್ಲಿ ಒಟ್ಟಾರೆ ಅಂದಾಜು ಶೇ.67.21ರಷ್ಟು ಮತದಾನವಾಗಿದ್ದು, ಕಳೆದ ಬಾರಿಗಿಂತ ಅಲ್ಪ ಪ್ರಮಾಣದ ಏರಿಕೆ ಕಂಡಿದೆ.

ರಾತ್ರಿ 8 ಗಂಟೆವರೆಗಿನ ಮಾಹಿತಿ ಪ್ರಕಾರ ಒಟ್ಟು 14 ಕ್ಷೇತ್ರಗಳಲ್ಲಿ ಸರಾಸರಿ ಶೇ.67.21ರಷ್ಟು ಮತದಾನ ಆಗಿದೆ. ಜಿಲ್ಲಾ ಚುನಾವಣಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ಇನ್ನೂ ಪ್ರಗತಿಯಲ್ಲಿದ್ದು, ಒಟ್ಟಾರೆ ಸರಾಸರಿ ಶೇ.ಪ್ರಮಾಣ ಬುಧವಾರವಷ್ಟೇ ಲಭ್ಯವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಈ 14 ಕ್ಷೇತ್ರಗಳಲ್ಲಿ ಸರಾಸರಿ ಶೇ.66.82ರಷ್ಟು ಮತದಾನ ಆಗಿತ್ತು. ಈ ಬಾರಿ ಈವರೆಗಿನ ಮಾಹಿತಿಯಂತೆ ಶೇ.67.21ರಷ್ಟು ಮತದಾನ ಆಗಿದೆ. ಮೊದಲ ಹಂತದಲ್ಲಿ ಮತದಾನ ನಡೆದ 14 ಕ್ಷೇತ್ರಗಳಲ್ಲಿ ಶೇ.68.81ರಷ್ಟು ಮತದಾನ ನಡೆದಿದೆ.

ಒಟ್ಟಾರೆ ಎರಡೂ ಹಂತಗಳಲ್ಲಿ ಸರಾಸರಿ ಶೇ.68ರಷ್ಟು ಮತದಾನ ನಡೆದಿದ್ದು, 2014ರಲ್ಲಿ 67.20 ರಷ್ಟು ಮತದಾನವಾಗಿತ್ತು. ಎರಡನೇ ಹಂತದಲ್ಲಿ ಇಡೀ ದೇಶದ ಗಮನ ಸೆಳೆದಿದ್ದ ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ನೀರಸ ಮತದಾನ ನಡೆದಿದ್ದು, ಅತ್ಯಂತ ಕಡಿಮೆ ಶೇ.57.58ರಷ್ಟು ಮತದಾನ ಆಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ.57.96ರಷ್ಟು ಮತದಾನವಾಗಿತ್ತು. ಜತೆಗೆ, ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಶೇ.57.85ರಷ್ಟು ಕಡಿಮೆ ಮತದಾನ ಆಗಿದೆ. ಕಳೆದ ಬಾರಿ ಇಲ್ಲಿ ಶೆ.58.32ರಷ್ಟು ಮತದಾನ ಆಗಿತ್ತು ಎಂದು ತಿಳಿಸಿದರು.

ಎರಡನೇ ಹಂತದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಅತಿ ಹೆಚ್ಚು ಶೇ.76.28ರಷ್ಟು ಮತದಾನ ಆಗಿದ್ದು, ಕಳೆದ ಚುನಾವಣೆಯಲ್ಲಿ ಇಲ್ಲಿ ಶೇ.72.36ರಷ್ಟು ಮತದಾನ ಆಗಿತ್ತು. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಮತದಾನ ಅಗಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿಯಲ್ಲಿ ಅತಿ ಹೆಚ್ಚು ಶೇ.74.29ರಷ್ಟು ಮತದಾನ ಆಗಿತ್ತು ಎಂದರು. ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೆ.ಆರ್‌. ರಮೇಶ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಹೈ-ಕ ಹಿಂದೆ: ಎರಡನೇ ಹಂತದಲ್ಲಿ ಹೈ-ಕ ಭಾಗದ ಕಲಬುರಗಿ, ಬೀದರ್‌, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಕ್ಷೇತ್ರಗಳಲ್ಲಿ ಕಡಿಮೆ ಮತದಾನ ಅಗಿದೆ. ಕಲಬುರಗಿಯಲ್ಲಿ ಶೇ.57.58, ಬೀದರ್‌ನಲ್ಲಿ ಶೇ.61.40, ರಾಯಚೂರು ಶೇ.57.85, ಕೊಪ್ಪಳ ಶೇ.68.38, ಬಳ್ಳಾರಿಯಲ್ಲಿ ಶೇ.66.06ರಷ್ಟು ಮತದಾನ ಆಗಿದೆ.

ಗಂಟೆವಾರು ಮತ ಪ್ರಮಾಣ
ಬೆಳಿಗ್ಗೆ 9- ಶೇ.7.38
ಬೆಳಿಗ್ಗೆ 11- ಶೇ.20.65
ಮಧ್ಯಾಹ್ನ 1- ಶೇ.36.61
ಮಧ್ಯಾಹ್ನ 3- ಶೇ.49.96
ಸಂಜೆ 5- ಶೇ.60.48
ಸಂಜೆ 6- ಶೇ.67.21

ಹಣ ಜಪ್ತಿ
ಎರಡೂ ಹಂತಗಳಲ್ಲಿ ಜಪ್ತಿ ಮಾಡಿದ್ದು
* 39.4 ಕೋಟಿ ನಗದು.
* 37.8 ಕೋಟಿ ಮೌಲ್ಯದ ಮದ್ಯ (9.6 ಲಕ್ಷ ಲೀ).
* 12.1 ಲಕ್ಷ ಮೌಲ್ಯದ ಮಾದಕ ದ್ರವ್ಯ.
* 9.5 ಕೋಟಿ ರೂ.ಬೆಲೆಬಾಳುವ ಆಭರಣ.
* 1.35 ಕೋಟಿ ರೂ.ಇತರ ರ್ಗೃಹೋಪಯೋಗಿ ವಸ್ತುಗಳು.
ಒಟ್ಟು – 88.26 ಕೋಟಿ ರೂ.

ಎರಡನೇ ಹಂತದ ಚುನಾವಣೆಯಲ್ಲಿ ಮೂಲಸೌಕರ್ಯ ಕೊರತೆ, ಅಕ್ರಮ ಮದ್ಯ ಮಾರಾಟ ಸೇರಿದಂತೆ ಮತ್ತಿತರ ವಿಷಯಗಳಿಗೆ ಬೇಸರಗೊಂಡು 12 ಜಿಲ್ಲೆಗಳ ವಿವಿಧ ಗ್ರಾಮಗಳ ಜನ ಮತದಾನ ಬಹಿಷ್ಕರಿಸಲು ಮುಂದಾಗಿದ್ದರು. ಈ ವೇಳೆ, ಸ್ಥಳೀಯ ಚುನಾವಣಾಧಿಕಾರಿಗಳು ಸ್ಥಳೀಯ ಮುಖಂಡರೊಂದಿಗೆ ಮಾತನಾಡಿ, ಬಹಿಷ್ಕಾರ ಕರೆಯನ್ನು ವಾಪಸ್ಸು ಪಡೆದು ಮತದಾನ ಮಾಡುವಂತೆ ಮನವೊಲಿಸಿ ಮತಗಟ್ಟೆಗೆ ಕರೆ ತಂದರು.
-ಸಂಜೀವ್‌ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.