ನಮಗೆ ಅಭಿವೃದ್ಧಿ ಮಂತ್ರ: ನಾಡಗೌಡ


Team Udayavani, Apr 11, 2019, 6:05 AM IST

Venkata-Rao-Nadagouda

ಉಡುಪಿ: ಬಿಜೆಪಿ ಭಾವನಾತ್ಮಕ ವಿಷಯಗಳನ್ನು ನಂಬಿಕೊಂಡು ಚುನಾವಣೆ ಎದುರಿಸುತ್ತಿದೆ. ಆದರೆ ನಾವು ಅಭಿವೃದ್ಧಿ ಮಂತ್ರದಲ್ಲಿ ನಂಬಿಕೆ ಇಟ್ಟಿದ್ದೇವೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಯಾರದಾಗುತ್ತದೆ ಎನ್ನುವುದು ಕಾದು ನೋಡಬೇಕು ಎಂದು ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ಮೋದಿ ಭಾವನಾತ್ಮಕ ವಿಚಾರ ಪ್ರಸ್ತಾವಿಸು ತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಹಿಂದುತ್ವದ ಬಗ್ಗೆ ಮಾತನಾಡಿಲ್ಲ. ಆದರೆ ಈ ಬಾರಿ ಅದನ್ನೂ ಪ್ರಸ್ತಾವಿಸುತ್ತಿದ್ದಾರೆ. ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎನ್ನುತ್ತಾರೆ. ಅದಕ್ಕೆ ಯೋಜನೆ ಪ್ರಕಟಿಸಿಲ್ಲ. ಕಳೆದ ಬಾರಿ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಈಡೇರಿಲ್ಲ ಎಂದರು.

ಪ್ರಜಾಪ್ರಭುತ್ವ ಆತಂಕದಲ್ಲಿ
ಮೋದಿ ನೇತೃತ್ವದ ಬಿಜೆಪಿ ಸರಕಾರದಿಂದ ಆಡಳಿತ ವ್ಯವಸ್ಥೆಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ ಇದೆ. ಸಂವಿಧಾನಕ್ಕೆ ಧಕ್ಕೆಯಾಗುವ ಲಕ್ಷಣ ಎದ್ದು ಕಾಣುತ್ತಿರುವ ಹಿನ್ನಲೆಯಲ್ಲಿ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೇ ದೇಶದಲ್ಲಿ 20ಕ್ಕೂ ಹೆಚ್ಚಿನ ರಾಜಕೀಯ ಪಕ್ಷಗಳು ಒಂದಾಗಿ ಬಿಜೆಪಿ ವಿರುದ್ಧ ಸಮರ ಸಾರಿವೆ ಎಂದರು.

ಮಲ್ಪೆ 7 ಮಂದಿ ಮೀನುಗಾರರು ನಾಪತ್ತೆಯಾದ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಹುಡುಕಲು ಎಲ್ಲ ಪ್ರಯತ್ನಗಳನ್ನು ಮಾಡಿವೆ. ಆದರೆ ಅವರೇನಾಗಿದ್ದಾರೆ ಯಾವುದೇ ಖಚಿತ ಮಾಹಿತಿ ಲಭಿಸಿಲ್ಲ. ಪ್ರಮೋದ್‌ ಮಧ್ವರಾಜ್‌ ಸ್ಥಳೀಯ ಮಾಹಿತಿ ಆಧಾರದಲ್ಲಿ ಸೇನಾ ಪಡೆಯ ಹಡಗು ಢಿಕ್ಕಿಯಾಗಿದೆ ಎಂದಿರಬಹುದು ಎಂದರು.

ಮೀನುಗಾರರು ನನ್ನ ಮತದಾರರಲ್ಲ
ಸಿಎಂ ಕುಮಾರಸ್ವಾಮಿ ಉಡುಪಿಗೆ ಬಂದಾಗ ಮೀನುಗಾರರ ಕುಟುಂಬವನ್ನು ಭೇಟಿ ಮಾಡಿಲ್ಲ ಎಂಬ ಆರೋಪದ ಬಗ್ಗೆ ಮಾತನಾಡಿ, ಸುವರ್ಣ ತ್ರಿಭುಜದಲ್ಲಿ ಇದ್ದ 7 ಮಂದಿಯಲ್ಲಿ ಉತ್ತರ ಕನ್ನಡದ 5 ಮಂದಿ ಮೀನುಗಾರರು ಸಹ ನಾಪತ್ತೆಯಾಗಿದ್ದಾರೆ. ಆದರೆ ಅಲ್ಲಿನ ಸಂಸದ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ಅವರು ಇಂದಿಗೂ ಆ ಕುಟುಂಬವನ್ನು ಭೇಟಿ ಮಾಡಿಲ್ಲ. ಆ ಮೀನುಗಾರರು ಅವರ ಮತದಾರರು ಹೊರತು ನನ್ನ ಮತದಾರರಲ್ಲ. ಮಂತ್ರಿಯಾಗಿ ಎಲ್ಲ ಜವಾಬ್ದಾರಿ ನಿರ್ವಹಿಸಿದ್ದೇನೆ ಎಂದು ಸಚಿವ ನಾಡಗೌಡ ತಿಳಿಸಿದರು.

ಯೋಗೀಶ್‌ ಶೆಟ್ಟಿ, ವಾಸುದೇವ ರಾವ್‌, ಯು.ಆರ್‌. ಸಭಾಪತಿ, ಮಹಾಬಲ ಕುಂದರ್‌, ರಫೀಕ್‌, ರೋಹಿತ್‌ ಕರಂಬಳ್ಳಿ ಉಪಸ್ಥಿತರಿದ್ದರು.

ಕಡ್ಡಾಯ ಎನ್‌ಎಂಆರ್‌
ಸಮುದ್ರದಲ್ಲಿ ಬೋಟ್‌ ಅವಘಡ ಸಂಭವಿಸಿದಾಗ ಮೀನುಗಾರರ ರಕ್ಷಣೆಗಾಗಿ ಇಸ್ರೋ ಸಂಸ್ಥೆ ನೇವಿ ಮೆಸೇಜಿಂಗ್‌ ರಿಸೀವರ್‌ (ಎನ್‌ಎಂಆರ್‌) ಯಂತ್ರವನ್ನು ಆಳ ಸಮುದ್ರ ಬೋಟ್‌ಗಳಿಗೆ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದೆ. ಈ ಯೋಜನೆ ಜಾರಿಗೆ ರಾಜ್ಯ ಸರಕಾರ ಬಜೆಟ್‌ನಲ್ಲಿ 3 ಕೋ. ರೂ. ಮೀಸಲಿಟ್ಟಿದೆ. ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಎಲ್ಲ ಬೋಟ್‌ಗಳಿಗೆ ಅಳವಡಿಸುವಂತೆ ಆದೇಶ ಹೊರಡಿಸಲಾಗುವುದು ಎಂದು ಸಚಿವ ವೆಂಕಟರಾವ್‌ ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.