ಮೈತ್ರಿ ಏರ್ಪಡದ ಬಂಗಾಲದಲ್ಲಿ ಜಯ ಯಾರಿಗೆ ?


Team Udayavani, Mar 24, 2019, 11:28 AM IST

mamata

ದೇಶದಲ್ಲಿ ಏಕೈಕ ಮಹಿಳಾ ಮುಖ್ಯಮಂತ್ರಿ ಇರುವ ಪಶ್ಚಿಮ ಬಂಗಾಲದಲ್ಲಿ ಲೋಕ ಸಮರಕ್ಕೆ ಸಿದ್ಧತೆ ಸಮರೋಪಹಾದಿಯಲ್ಲೇ ನಡೆಯುತ್ತಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ಪಶ್ಚಿಮ ಬಂಗಾಲ ಬಲಿಷ್ಠ ನೆಲೆ. ಕಾಂಗ್ರೆಸ್‌, ಎಡರಂಗ ಪಕ್ಷಗಳು ಅಸಿತ್ವದಲ್ಲಿದೆ. ಬಿಜೆಪಿ ಬಂಗಾಲದಲ್ಲಿ ಅಷ್ಟೇನು ಬಲಿಷ್ಠವಾಗಿಲ್ಲದಿದ್ದರೂ ನಿರ್ಲಕ್ಷಿಸುವಂತಿಲ್ಲ.

ಎಡರಂಗ ಮತ್ತು ಟಿಎಂಸಿ ರಾಜ್ಯದಲ್ಲಿ ಅತ್ಯಂತ ಬಲಿಷ್ಠವಾಗಿದೆ. 25 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಜ್ಯೋತಿ ಬಸು ಕಮ್ಯುನಿಸ್ಟ್‌ ಪಕ್ಷದ ನಾಯಕ. ಈ ಒಂದೇ ಇತಿಹಾಸ ಬಂಗಾಲದಲ್ಲಿ ಎಡರಂಗದ ಬಲಾ-ಬಲವನ್ನು ಹೇಳುತ್ತದೆ. ಆದರೆ ಕಮ್ಯನಿಸ್ಟ್‌ ಸಾಮರ್ಥ್ಯವನ್ನು ಮಣಿಸಿ ಕಾಂಗ್ರೆಸ್‌ ಕೆಲವು ಅವಧಿಗೆ ಸರಕಾರವನ್ನು ನೀಡಿದ್ದರೆ, ಬಳಿಕ ಮಮತಾ ಬ್ಯಾನರ್ಜಿ ನಾಯಕತ್ವದ ತೃಣಮೂಲ ಕಾಂಗ್ರೆಸ್‌ ರಾಜ್ಯದ ಚುಕ್ಕಾಣಿ ಹಿಡಿದಿತ್ತು. ಮಹಾಘಟ್‌ಬಂಧನ್‌ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌ ಪ್ರತ್ಯೇಕವಾಗಿಯೇ ಚುನಾವಣೆ ಎದುರಿಸುತ್ತಿವೆ.

ಏರ್ಪಡದ ಮೈತ್ರಿ
ಪಶ್ಚಿಮ ಬಂಗಾಲ ಈ ಬಾರಿ ತೀವ್ರ ಹಣಾ ಹಣಿಗೆ ಸಾಕ್ಷಿಯಾಗಲಿದೆ. ಕಾಂಗ್ರೆಸ್‌ ಮತ್ತು ಎಡರಂಗ ಮೈತ್ರಿ ಮಾತುಕತೆ ನಡೆಸಿತ್ತಾದರೂ ಸೀಟು ಹಂಚಿಕೆಯಲ್ಲಿ ಒಮ್ಮತ ಮೂಡದ ಕಾರಣ ಬರೀ ಕೈಯಲ್ಲಿ ಹಿಂದಿರುಗಿದವು. ಬಂಗಾಲದಲ್ಲಿ ಯಾವುದೇ ಮೈತ್ರಿ ಏರ್ಪಡದೆ ಇರುವುದು ಟಿಎಂಸಿಗೆ ರಹದಾರಿಯಾಗುವ ಸಾಧ್ಯತೆ ಹೆಚ್ಚು.

ಮಮತಾಗೆ ಬಿಜೆಪಿಯ ಚಿಂತೆ
2016ರ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿ ನೆಲೆ ಕಂಡುಕೊಂಡಿದೆ. ಇದು ಸಹಜವಾಗಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ನಿದ್ದೆ ಕೆಡಿಸಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಶೇ. 17 ಮತಗಳಿಸಿ, 2 ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಇದಾದ 2 ವರ್ಷಗಳ ಬಳಿಕ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತಗಳಿಕೆಯ ಪ್ರಮಾಣ ಶೇ. 10ಕ್ಕೆ ಇಳಿದರೂ 3 ಕ್ಷೇತ್ರಗಳಲ್ಲಿ ವಿಜಯದ ಪತಾಕೆ ಹಾರಿಸಿತ್ತು.

ಈ ಚುನಾವಣೆಯಲ್ಲಿ ಟಿಎಂಸಿ ಪ್ರಚಂಡ ಬಹುಮತ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಏರಿತ್ತು. 294 ವಿಧಾನಸಭಾ ಕ್ಷೇತ್ರಗಳ ಬಲಾಬಲವಿರುವ ಬಂಗಾಲದಲ್ಲಿ 211 ಸ್ಥಾನಗಳು ಟಿಎಂಸಿ ಪಾಲಾದರೆ, 74 ಕ್ಷೇತ್ರಗಳನ್ನು ಕಾಂಗ್ರೆಸ್‌-ಎಡರಂಗ ಹಂಚಿಕೊಂಡಿತ್ತು. ಆದರೆ ಬಿಜೆಪಿ 3 ಸ್ಥಾನಗಳಿಸುವ ಮೂಲಕ ವಿಪಕ್ಷ ಸ್ಥಾನದಲ್ಲಿ ಕುಳಿತುಕೊಂಡಿತ್ತು ಎಂಬುದು ಗಮನಾರ್ಹ.

ಮದರಿಹತ್‌, ಕಾಂಘಾಪುರ್‌ ಸದರ್‌, ಬಸಿನಾಬ್‌ ನಗರ್‌ ಅಧಿಕ ವೋಟ್‌ ಶೇರ್‌ ಗಳಿಸುವ ಮೂಲಕ ಕಮಲ ಪಾಳಯದಲ್ಲಿ ಗೆಲುವಿನ ನಗೆ ಕಂಡರು. ಉತ್ತರ ಬಂಗಾಳದ ಮದರಿಹತ್‌ ವಿಧಾನಸಭಾ ಕ್ಷೇತ್ರದಲ್ಲಿ 44 ಶೇ. ಮತಗಳಿಸುವ ಮೂಲಕ ಮನೋಜ್‌ ಟಿಗ್ಗ ಎಂಬವರು ದಾಖಲೆ ನಿರ್ಮಿಸಿದ್ದರು. ಇದು ಎಡರಂಗದ “ರೆವಲ್ಯೂಶನರಿ ಸೋಷಿಯಲ್‌ ಪಾರ್ಟಿ’ಯ ಕೈಯಲ್ಲಿತ್ತು.

ಬಳಿಕ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟಿಎಂಸಿ ಅನ್ನು ಕೆಲವೆಡೆ ಪರಾಜಯ ಗೊಳಿಸಿದರೆ, ಕೆಲವೆಡೆ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾ ಯಿತು. ವಿಧಾನಸಭೆಗೆ ನಡೆದ ಮಹಾಸ್ಥಳ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಎಂಸಿ ಜಯಗಳಿಸಿದ್ದರೆ, ಬಿಜೆಪಿ ಕೇವಲ 62,827 ಮತಗಳ ಅಂತರದಲ್ಲಿ ಸೋಲೊಪ್ಪಿಕೊಳ್ಳುವುದರ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಈ ಮೂಲಕ ಕಾಂಗ್ರೆಸ್‌ ಹಾಗೂ ಎಡರಂಗವನ್ನು ಮೂರನೇ ಸ್ಥಾನಕ್ಕೆ ದೂಡಿತ್ತು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.