ಪ್ರಮೋದ್‌ ಚುನಾವಣೋತ್ತರ ನಡೆ ಏನು: ಭಟ್‌


Team Udayavani, Mar 29, 2019, 6:00 AM IST

k-raghupathi-bhat

ಉಡುಪಿ: ಜೆಡಿಎಸ್‌-ಕಾಂಗ್ರೆಸ್‌ ಅಭ್ಯರ್ಥಿ ಎಂದು ಹೇಳುತ್ತಿರುವ ಪ್ರಮೋದ್‌ ಮಧ್ವರಾಜ್‌ ಅವರು ಚುನಾವಣೋತ್ತರದಲ್ಲಿ ಯಾವ ಪಕ್ಷದಲ್ಲಿರುತ್ತಾರೆಂಬುದನ್ನು ಈಗಲೇ ಮತದಾರರಿಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿರುವ ಶಾಸಕ ಕೆ. ರಘುಪತಿ ಭಟ್‌ ಅವರು, ಜಿಲ್ಲೆಯಲ್ಲಿ ಮರಳು ಸಮಸ್ಯೆಗೆ ಇವರೇ ಮೂಲ ಕಾರಣ ಎಂದು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಶಾಸಕರಾದಾಗ ಸಂಸದೀಯ ಕಾರ್ಯದರ್ಶಿ, ರಾಜ್ಯ ಮಂತ್ರಿ, ಸಂಪುಟ ದರ್ಜೆ ಸಚಿವ ಹುದ್ದೆಯನ್ನು ನೀಡಿದ ಕಾಂಗ್ರೆಸ್‌ಗೆ ಪ್ರಮೋದ್‌ ಈಗ ಅಧಿಕಾರದ ಆಸೆಯಿಂದ ದ್ರೋಹ ಮಾಡಿದ್ದಾರೆಂದು ನೈಜ ಕಾಂಗ್ರೆಸಿಗರು ಹೇಳುತ್ತಿದ್ದಾರೆ ಎಂದರು.

ಜೆಡಿಎಸ್‌ನವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಕೃಷ್ಣ ಬೈರೇಗೌಡ, ಬಿಎಲ್‌ ಶಂಕರ್‌ ಅವರಿಗೂ ತಮ್ಮ ಚಿಹ್ನೆಯಿಂದ ನಿಲ್ಲಲು ಹೇಳಿದ್ದರು. ಆದರೆ ಅವರಾರೂ ಮಣಿಯಲಿಲ್ಲ. ಇಲ್ಲಿಯೂ ಬೇರೆ ಕಾಂಗ್ರೆಸ್‌ ನಾಯಕರಿಗೆ ಜೆಡಿಎಸ್‌ನವರು ತಮ್ಮ ಚಿಹ್ನೆಯಿಂದ ನಿಲ್ಲಲು ಹೇಳಿದ್ದರು. ಆದರೆ ಪ್ರಮೋದ್‌ ಮಾತ್ರ ಒಪ್ಪಿದರು. ಈಗ ನೈಜ ಕಾಂಗ್ರೆಸಿಗರಿಗೆ ಮತ ಹಾಕಲಾಗದ ಸ್ಥಿತಿ ಇದೆ. ಹಿಂದೆ ಬಿಜೆಪಿಯವರು ಗೇಟ್‌ ಹಾಕಿದರು ಎನ್ನುತ್ತಿದ್ದರು. ಈಗ ಹೀಗೆ ಮಾಡಿದ್ದಾರೆ ಎಂದು ಭಟ್‌ ಲೇವಡಿ ಮಾಡಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ, ಬಿಹಾರದಲ್ಲಿ ಜೆಡಿಯು ಬಿಜೆಪಿ ಮೈತ್ರಿ ಮಾಡಿಕೊಂಡಿಲ್ಲವೆ ಎಂದು ಪ್ರಮೋದ್‌ ಪ್ರಶ್ನಿಸುತ್ತಾರೆ. ಆ ರಾಜ್ಯಗಳಲ್ಲಿ ಆಯಾ ಪಕ್ಷಗಳ ಅಭ್ಯರ್ಥಿಗಳು ಆಯಾ ಚಿಹ್ನೆಯಡಿ ಮಾತ್ರ ಸ್ಪರ್ಧಿಸುತ್ತಾರೆ. ಇಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ. ಎರಡೂ ಪಕ್ಷಗಳು ವಿಲೀನವಾಗಲಿಲ್ಲ. ಎರಡೂ ಪಕ್ಷಗಳ ನೀತಿ ಸಿದ್ಧಾಂತ ಬೇರೆ ಇದೆ. ಚುನಾವಣೆ ಬಳಿಕವೂ ಎರಡೂ ಚಿಹ್ನೆಗಳ ಶಾಲು ಹೊದ್ದು ಇರುತ್ತಾರಾ? ಉಡುಪಿ ಮತದಾರರು ಬುದ್ಧಿ ಇಲ್ಲದವರೆಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಂದ ಪ್ರಮೋದ್‌ ಸ್ಪಷ್ಟನೆ ಕೊಡಿಸಬೇಕು ಎಂದರು.

ತನ್ನ ಅವಧಿಯಲ್ಲಿ 2,000 ಕೋ.ರೂ. ಅನುದಾನ ತಂದಿದ್ದೇನೆ ಎಂದು ಪ್ರಮೋದ್‌ ಹೇಳುತ್ತಿದ್ದಾರೆ. ಇದರಲ್ಲಿ ರಾ.ಹೆ. ಕಾಮಗಾರಿ, ಪಡಿತರದ ಅಕ್ಕಿ, ರೈತರ ವಿದ್ಯುತ್‌ ಇತ್ಯಾದಿಗಳೂ ಸೇರಿವೆ. ಇಂತಹ ಸುಳ್ಳು ಹೇಳಿದವರಿಗೆ ಮತದಾರರು ಒಮ್ಮೆ ಬುದ್ಧಿ ಕಲಿಸಿದ್ದಾರೆಂದರು.

ವೈಮನಸ್ಸು ಇಲ್ಲ
ಪ್ರಶ್ನೆಗೆ ಉತ್ತರಿಸಿದ ಭಟ್‌ ಅವರು, ಟಿ.ಜೆ.ಅಬ್ರಹಾಂ ಅವರ ಆರೋಪಕ್ಕೂ ತಮಗೂ ಸಂಬಂಧವಿಲ್ಲ. ಅವರು ಬಿಜೆಪಿ ನಾಯಕರ ವಿರುದ್ಧವೂ ಆರೋಪಿಸಿದ್ದರು ಎಂದರು. ಸಂಸದೆ ಜತೆ ಇದ್ದ ವೈಮನಸ್ಸಿನ ಬಗ್ಗೆ ಪ್ರಶ್ನಿಸಿದಾಗ ಸಂಸದೆ ಉತ್ತಮ ಕೆಲಸ ಮಾಡಿದ್ದಾರೆ. ನಮ್ಮೊಳಗೆ ಯಾವುದೇ ವೈಮನಸ್ಸು ಇಲ್ಲ ಎಂದರು. ಗೋಷ್ಠಿಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ, ನಾಯಕರಾದ ಮಹೇಶ ಠಾಕೂರ್‌, ಪೆರ್ಣಂಕಿಲ ಶ್ರೀಶ ನಾಯಕ್‌, ಉಪೇಂದ್ರ ನಾಯಕ್‌, ಜಗದೀಶ ಆಚಾರ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.