ಎಲ್ಲಿಂದ ಸ್ಪರ್ಧಿಸಲಯ್ಯಾ ನಾನು?


Team Udayavani, Mar 16, 2019, 12:30 AM IST

deve.jpg

ಬೆಂಗಳೂರು: ಸ್ವಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್‌ಗೆ ಬಿಟ್ಟುಕೊಟ್ಟಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ತಾವು ಯಾವ ಕ್ಷೇತ್ರದಲ್ಲಿ ಸ್ಪರ್ಧೆಮಾಡಬೇಕು ಹಾಗೂ ಸ್ಪರ್ಧೆ ಮಾಡಲೇ ಬೇಕೆ-ಬೇಡವೇ ಎಂಬ ಜಿಜ್ಞಾಸೆ ಮೂಡಿದೆ. ಜತೆಗೆ ತಮ್ಮದೇ ಒಕ್ಕಲಿಗ ಸಮುದಾಯದ ಮುದ್ದಹನುಮೇಗೌಡ ಅವರಿಗೆ ಕ್ಷೇತ್ರ ತಪ್ಪಿಸಿದ ಅಪವಾದಕ್ಕೆ ಗುರಿಯಾಗುವ ಧರ್ಮಸಂಕಟವೂ ಎದುರಾಗಿದೆ. ಸೀಟು ಹಂಚಿಕೆ ನಂತರ ಬೆಂಗಳೂರು ಉತ್ತರ ಕ್ಷೇತ್ರವೋ, ತುಮಕೂರು ಕ್ಷೇತ್ರವೋ ಎಂಬ ಪ್ರಶ್ನೆ ಎದುರಾಗಿತ್ತಾದರೂ ಇದೀಗ ತುಮಕೂರು ಕ್ಷೇತ್ರ ಬಿಟ್ಟುಕೊಡುವಂತೆ ಹಾಲಿ ಸಂಸದ ಮುದ್ದಹನುಮೇಗೌಡ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ದುಂಬಾಲು ಬಿದ್ದಿರುವುದರಿಂದ ದೇವೇಗೌಡರ ಮನಸ್ಸಿನ ತುಮುಲಕ್ಕೆ ಅವಕಾಶ ಕಲ್ಪಿಸಿದೆ. 

ಒಂದು ಹಂತದಲ್ಲಿ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವ ಬಯಕೆ ಹೊಂದಿದ್ದ ದೇವೇಗೌಡರು ಕಾಂಗ್ರೆಸ್‌ ಹೈಕಮಾಂಡ್‌ಗೂ ಆ ಬಗ್ಗೆ ತಿಳಿಸಿದ್ದರಾದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಠದಿಂದ ಮೈಸೂರು ಕಾಂಗ್ರೆಸ್‌ಗೆ ಬಿಟ್ಟು ಕೊಡುವಂತಾಯಿತು. ಹೀಗಾಗಿ, ಉಳಿದಿರು ವುದು ಬೆಂಗಳೂರು ಉತ್ತರ ಹಾಗೂ ತುಮಕೂರು ಕ್ಷೇತ್ರ ಮಾತ್ರ. ಎರಡರಲ್ಲಿ ಯಾವುದು ಸೂಕ್ತ ಎಂಬ ಗೊಂದಲ ದೇವೇಗೌಡರನ್ನು ಕಾಡುತ್ತಿರುವಂತಿದೆ. ಇತ್ತ ಬೆಂಗಳೂರು ಉತ್ತರದಲ್ಲಿಯೂ ಐವರು ಕಾಂಗ್ರೆಸ್‌ ಶಾಸಕರಿದ್ದಾರೆ. ಒಕ್ಕಲಿಗ ಸಮುದಾಯದ ಮತದಾರರು ಹೆಚ್ಚಾಗಿದ್ದರೂ ಬೆಂಗ ಳೂರು ನಗರ ವ್ಯಾಪ್ತಿಯಲ್ಲಿ ಜೆಡಿಎಸ್‌ಗೆ ಎಂದೂ ಉತ್ತಮ ಸ್ಪಂದನೆ ಸಿಕ್ಕಿಲ್ಲ. ಹಾಲಿ ಕಾಂಗ್ರೆಸ್‌ ಶಾಸಕರು ಮನಃಪೂರ್ವಕವಾಗಿ ಕೆಲಸ ಮಾಡುತ್ತಾರಾ ಎಂಬ ಅನುಮಾನವೂ ಇದೆ.

ಈ ಎಲ್ಲ ವಿದ್ಯಮಾನಗಳ ಹಿನ್ನೆಲೆಯಲ್ಲಿ ಇದೀಗ ಸ್ಪರ್ಧೆ ಮಾಡಬೇಕೋ ಬೇಡವೋ ಎಂಬ ಗೊಂದಲವೂ ಅವರನ್ನು ಕಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಕುಟುಂಬದಿಂದ ಪ್ರಜ್ವಲ್‌ ರೇವಣ್ಣ ಹಾಸನ ಹಾಗೂ ನಿಖೀಲ್‌ ಮಂಡ್ಯ ದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕುಟುಂಬದಲ್ಲಿ ಮೂವರ ಸ್ಪರ್ಧೆ ಬಗ್ಗೆ ಆಕ್ರೋಶವೂ ವ್ಯಕ್ತವಾಗುತ್ತಿದೆ. ಇದರಿಂದ ಬೇಸರಗೊಂಡಿರುವ ದೇವೇಗೌಡರು, ಸ್ಪರ್ಧೆ ಮಾಡದಿರುವ ಬಗ್ಗೆಯೂ ಗಂಭೀರ ಚಿಂತನೆ ನಡೆಸುತ್ತಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಹೀಗಾಗಿಯೇ ಸ್ಪರ್ಧೆ ಬಗ್ಗೆ ಇನ್ನೂ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಅಂತಿಮ ವಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್‌ ನಾಯಕರ ಜತೆ ಸಮಾಲೋಚನೆ ನಡೆಸಿದ ನಂತರ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಈ ಮಧ್ಯೆ, ದೇವೇಗೌಡರು ಸ್ಪರ್ಧೆ ಮಾಡದಿದ್ದರೆ ತುಮಕೂರಿನಿಂದ ಸುರೇಶ್‌ ಬಾಬು ಅಥವಾ ರಮೇಶ್‌ ಬಾಬು, ಬೆಂಗಳೂರು ಉತ್ತರದಿಂದ ಹನುಮಂತೇ ಗೌಡ, ಜವರಾಯಿಗೌಡ ಅವರ ಹೆಸರು ಕೇಳಿಬರುತ್ತಿದೆ. ದೇವೇಗೌಡರ ತೀರ್ಮಾನದತ್ತ ಎಲ್ಲರೂ ಚಿತ್ತ ಹರಿಸಿದ್ದಾರೆ.

ಬದಲಾಗುತ್ತಾ?: ತುಮಕೂರು, ಉತ್ತರ ಕನ್ನಡ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಮತ್ತೆ ಕಾಂಗ್ರೆಸ್‌ಗೆ ಕೊಟ್ಟು ಬೇರೆ ಕ್ಷೇತ್ರ ಪಡೆಯುವ ಕೊನೇ ಹಂತದ ಪ್ರಯತ್ನಗಳುಇನ್ನೂ ಚಾಲ್ತಿಯಲ್ಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಗೌಡರ ಮೌನ

ಮೂರು ದಿನಗಳಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮೌನ ವಾಗಿದ್ದಾರೆ. ಕಾರ್ಯಕರ್ತರು ಹಾಗೂ ಮುಖಂಡರ ಜತೆ ಆಂತರಿಕ ಚರ್ಚೆಯಲ್ಲಿ ತೊಡಗಿರುವ ಅವರು ಸ್ಪರ್ಧೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಡುತ್ತಿಲ್ಲ. ಸೀಟುಹಂಚಿಕೆ ವಿಚಾರದಲ್ಲಿ ಮೈಸೂರು ಕ್ಷೇತ್ರ ಸಿಗದಿರುವ ಬಗ್ಗೆ ಅವರಿಗೆ ತೀವ್ರ ಅಸಮಾಧಾನ ವಿದೆ. ಹೀಗಾಗಿಯೇ ದೆಹಲಿ ಮಟ್ಟದಲ್ಲಿ ದೇವೇಗೌಡರು-ರಾಹುಲ್‌ಗಾಂಧಿ ಜತೆಗೂಡಿ ಸೀಟು ಹಂಚಿಕೆ ಬಗ್ಗೆ ಘೋಷಿಸಲು ಉದ್ದೇಶಿಸ ಲಾಗಿತ್ತು. ಆದರೆ, ಸೀಟು ಹಂಚಿಕೆಯಲ್ಲಿ ತಮಗೆ ಬೇಕಾದ ಕ್ಷೇತ್ರಗಳು ಸಿಗಲಿಲ್ಲ ಎಂಬ ಕಾರಣಕ್ಕೆ ಡ್ಯಾನಿಶ್‌ ಅಲಿ ಅವರನ್ನು ರಾಹುಲ್‌ಗಾಂಧಿಯವರ ಬಳಿ ಕಳುಹಿಸಿದರು. ಹಾಲಿ ಕಾಂಗ್ರೆಸ್‌ ಸಂಸದರು ಇರುವ ಕ್ಷೇತ್ರಕ್ಕೆ ಬೇಡಿಕೆ ಇಡದಿದ್ದರೂ ತುಮಕೂರು ಸೇರಿ ಎಂಟು ಸೀಟು ಬಿಟ್ಟುಕೊಟ್ಟು ಇದೀಗ ತಮ್ಮನ್ನು ವಿಲನ್‌ನಂತೆ ಕಾಂಗ್ರೆಸ್‌ನ ಕೆಲ ನಾಯಕರು ಚಿತ್ರಿಸುತ್ತಿದ್ದಾರೆಎಂದು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನನಗೆ ಕ್ಷೇತ್ರ ಯಾಕೆ ಮತ್ತು ಹೇಗೆ ತಪ್ಪಿತು ಎನ್ನುವುದು ಗೊತ್ತಿಲ್ಲ. ಕ್ಷೇತ್ರ ನನಗೇಸಿಗುತ್ತದೆ ಎನ್ನುವ  ವಿಶ್ವಾಸ ಇದೆ. ಸಂಸತ್ತಿನ ಕೊನೆ ಕಲಾಪದವರೆಗೂ ನಾನುಕೆಲಸ ಮಾಡಿದ್ದೇನೆ. ದೇವೇ ಗೌಡರು ಸ್ಪರ್ಧೆ ಮಾಡದಿದ್ದರೆ, ಕ್ಷೇತ್ರ ಬಿಟ್ಟುಕೊಡುವಂತೆಕೇಳಿದ್ದೇವೆ. ಹೆಚ್ಚಿಗೆ ಈಗಲೇ ನಾನೇನು ಮಾಡಲು ಆಗುವುದಿಲ್ಲ.
● ಮುದ್ದಹನುಮೇಗೌಡ, ತುಮಕೂರು ಸಂಸದ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.