ಪಿಎಂ ಅಭ್ಯರ್ಥಿ ಹೆಸರು ಕೇಳಲು ಮೋದಿ ಯಾರು?
Team Udayavani, Apr 1, 2019, 6:10 AM IST
“ನಮ್ಮ ಪ್ರಧಾನಿ ಅಭ್ಯರ್ಥಿ ಯಾರು ಎಂದು ಕೇಳಲು ಮೋದಿ ಯಾರು? ಮಿಸ್ಟರ್ ಮೋದಿಯವರೇ, ನೀವು ತಲೆಕೆಡಿಸಿಕೊಳ್ಳಬೇಡಿ. ಜನರಿಗೆ ಏನನ್ನು ಕೊಡಬೇಕೆಂದು ನಮಗೆ ಗೊತ್ತು. ನಾಯಕನನ್ನು ಆಯ್ಕೆ ಮಾಡುವುದೂ ಗೊತ್ತು. ದೇಶವನ್ನು ಆಳಲು ಯಾರಾದರೊಬ್ಬರು ಇದ್ದೇ ಇರುತ್ತಾರೆ.’
ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಬಗ್ಗೆ ಪ್ರಶ್ನೆ ಮಾಡಿದ ಬಿಜೆಪಿಗೆ ಈ ರೀತಿಯಾಗಿ ಖಾರ ಮಾತುಗಳಿಂದ ಉತ್ತರಿಸಿದ್ದು ಬೇರಾರೂ ಅಲ್ಲ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.
ರವಿವಾರ ವಿಶಾಖಪಟ್ಟಣದಲ್ಲಿ ನಡೆದ ಟಿಡಿಪಿ ಬೃಹತ್ ರ್ಯಾಲಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಸಾಥ್ ನೀಡಿದರು. ಈ ವೇಳೆ ಮಾತನಾಡಿದ ದೀದಿ, “ಪ್ರಧಾನಿ ಮೋದಿ ಒಬ್ಬ ಸುಳ್ಳುಗಾರ. ಕರ್ನಾಟಕ, ಪ.ಬಂಗಾಳ, ಆಂಧ್ರ, ಒಡಿಶಾ… ಹೀಗೆ ಎಲ್ಲ ರಾಜ್ಯಗಳಿಗೂ ಬೆದರಿಕೆ ಹಾಕುವವರು’ ಎಂದು ಆರೋಪಿಸಿದ್ದಾರೆ.
ಇದೇ ವೇಳೆ, ಮಾತನಾಡಿದ ಸಿಎಂ ಕೇಜ್ರಿವಾಲ್, “ಭಾರತವನ್ನು ಧರ್ಮದ ಆಧಾರದಲ್ಲಿ ಒಡೆಯಬೇಕು ಎಂದು ಪಾಕಿಸ್ತಾನ ಪ್ರಯತ್ನಿಸುತ್ತಲೇ ಬಂದಿತ್ತು. ಆದರೆ, ಕಳೆದ 70 ವರ್ಷಗಳಲ್ಲಿ ಪಾಕಿಸ್ತಾನಕ್ಕೆ ಮಾಡಲು ಸಾಧ್ಯವಾಗದ್ದನ್ನು ಕೇವಲ 5 ವರ್ಷಗಳಲ್ಲಿ ಮೋದಿ-ಅಮಿತ್ ಶಾ ಮಾಡಿ ತೋರಿಸಿದರು. ದೇಶವನ್ನು ಧರ್ಮದ ಆಧಾರದಲ್ಲಿ ವಿಭಜಿಸಿಬಿಟ್ಟರು’ ಎಂದು ಆರೋಪಿಸಿದ್ದಾರೆ. ಜತೆಗೆ, ಪ್ರಧಾನಿ ಮೋದಿ ನೇತೃತ್ವದ ಸರಕಾರವು ಸ್ವಾತಂತ್ರಾéನಂತರ ದೇಶ ಕಂಡ ಅತಿ ಭ್ರಷ್ಟ ಸರಕಾರ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ