ಮಿಲಿಟರಿ ಯಶಸ್ಸು ಮತಗಳಾಗಿ ಬದಲಾಗುತ್ತದಾ?


Team Udayavani, Mar 5, 2019, 1:00 AM IST

military.jpg

ರಾಷ್ಟ್ರೀಯ ಭದ್ರತೆಗೆ ಸಂಬಂಧಪಟ್ಟ ವಿಚಾರ ಚುನಾವಣಾ ಫ‌ಲಿತಾಂಶಗಳ ಮೇಲೆ ಪ್ರಭಾವ ಬೀರಬಲ್ಲದೇ? ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದ ಬಳಿಕ ಈ ವಿಷಯದ ಬಗ್ಗೆ ಚರ್ಚೆ ಆರಂಭವಾಗಿದೆ. ಮುಂದೆ ಚುನಾವಣೆಯಲ್ಲಿ ಏನಾಗಬಹುದು ಎನ್ನುವುದನ್ನು ತಿಳಿದುಕೊಳ್ಳಲು ಹಿಂದೆ ಏನಾಗಿತ್ತು ಎಂದು ತಿರುಗಿ ನೋಡಿದರೆ ಉತ್ತರ ದೊರೆಯಬಹುದೇನೋ. 

ಸ್ವಾತಂತ್ರಾÂನಂತರ ಭಾರತ ನಾಲ್ಕು ಪೂರ್ಣಪ್ರಮಾಣದ ಯುದ್ಧಗಳಲ್ಲಿ ಹೋರಾಡಿದೆ. 1948ರಲ್ಲಿ ಪಾಕ್‌ ವಿರುದ್ಧ, 1962ರಲ್ಲಿ ಚೀನಾ ವಿರುದ್ಧ, 1965 ಮತ್ತು 1971ರಲ್ಲಿ ಪಾಕಿಸ್ತಾನದ ವಿರುದ್ಧ. 1999ರಲ್ಲಿ ಕಾರ್ಗಿಲ್‌ನಲ್ಲೂ ಎರಡೂ ರಾಷ್ಟ್ರಗಳ ವಿರುದ್ಧ ಮಿಲಿಟರಿ ಹೋರಾಟ ನಡೆಯಿತಾದರೂ, ಅದು ಪೂರ್ಣಯುದ್ಧವಾಗಿರಲಿಲ್ಲ. 

1962ರ ಚೀನಾ ವಿರುದ್ಧದ ಯುದ್ಧವನ್ನು ಹೊರತುಪಡಿಸಿದರೆ, ಉಳಿದೆಲ್ಲದರಲ್ಲೂ ಭಾರತವೇ ಗೆದ್ದಿದೆ. ಆದಾಗ್ಯೂ, ಈ ಯುದ್ಧಗಳ ಫ‌ಲಿತಾಂಶವು ಆಡಳಿತ ಪಕ್ಷಗಳ ಪರ ಕೆಲಸ ಮಾಡಿದಂತೇನೂ ಕಾಣಿಸುವುದಿಲ್ಲ. 1962 ಮತ್ತು 1967ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಭಾರತ ಒಂದು ಯುದ್ಧದಲ್ಲಿ ಗೆದ್ದರೆ (1965) ಇನ್ನೊಂದರಲ್ಲಿ ಸೋತಿತ್ತು(1962). ಎರಡೂ ಯುದ್ಧಗಳ ವೇಳೆಯೂ ಆಡಳಿತ ಪಕ್ಷವಾಗಿದ್ದ ಕಾಂಗ್ರೆಸ್‌, ಎರಡೂ ಚುನಾವಣೆಗಳಲ್ಲೂ ಮತ ಮತ್ತು ಸೀಟ್‌ ಗಳಿಕೆಯಲ್ಲಿ ಹಾನಿ ಅನುಭವಿಸಿತು. 

1971ರಲ್ಲಿ ನಡೆದ ಯುದ್ಧವು ಬಾಂಗ್ಲಾದೇಶದ ಉಗಮಕ್ಕೆ ಕಾರಣವಾಯಿತು. ಈ ಯುದ್ಧ ಭಾರತದ ಪಾಲಿಗಂತೂ ಅತ್ಯಂತ ಮಹತ್ವದ್ದಾಗಿತ್ತು. ಇಂದಿರಾ ಗಾಂಧಿಯವರಿಗೆ ಪಾಕ್‌ ವಿರುದ್ಧದ ಈ ಗೆಲುವು ಬಹಳ ಹೆಸರು ತಂದುಕೊಟ್ಟಿತಾದರೂ ಅದರಿಂದ ಮುಂದೆ ಅವರಿಗೇನೂ ರಾಜಕೀಯವಾಗಿ ಲಾಭವಾಗಲಿಲ್ಲ(ಬಹುಶಃ ತುರ್ತುಪರಿಸ್ಥಿತಿ ಹೇರಿದ್ದು ಇದಕ್ಕೆ ಕಾರಣವಿರಬಹುದು).

ಬಿಜೆಪಿ ನೇತೃತ್ವದ ಸರ್ಕಾರವಿರುವಾಗಲೇ ದೇಶವು ಕಾರ್ಗಿಲ್‌ ಯುದ್ಧಕ್ಕೆ ಸಾಕ್ಷಿಯಾಯಿತು. ಭಾರತ ಈ ಯುದ್ಧದಲ್ಲಿ ಯಶಸ್ವಿಯಾಗಿ, ಕಾರ್ಗಿಲ್‌ ಅನ್ನು ಮರುವಶಕ್ಕೆ ಪಡೆಯಿತು. ಇದಾದ ಕೆಲವೇ ತಿಂಗಳಲ್ಲಿ ಚುನಾವಣೆಗಳು ನಡೆದವು. ಆದಾಗ್ಯೂ 1999ರಲ್ಲಿ ಬಿಜೆಪಿಯೇ ಮತ್ತೂಮ್ಮೆ ಅಧಿಕಾರಕ್ಕೆ ಬಂದಿತಾದರೂ, ಅದರ ಸ್ಥಾನಗಳಲ್ಲಿ ಮಾತ್ರ ಏರಿಕೆಯಾಗಿರಲಿಲ್ಲ. 2016ರ ಸರ್ಜಿಕಲ್‌ ಸ್ಟ್ರೈಕ್‌ ನಂತರ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಯಶಸ್ಸು ಪಡೆಯಿತು, ತದ ನಂತರದ ಚುನಾವಣೆಗಳಲ್ಲಿ ಅದು ಹಲವು ರಾಜ್ಯಗಳನ್ನು ಕಳೆದುಕೊಂಡಿತು. ಹೀಗಾಗಿ, ಈ ಬಾರಿಯ ಮಿಲಿಟರಿ ಯಶಸ್ಸು ಮೋದಿ ನೇತೃತ್ವದ ಬಿಜೆಪಿಗೆ ಯಾವ ಪ್ರಮಾಣದಲ್ಲಿ ಸಹಾಯ ಮಾಡಲಿದೆ ಎನ್ನುವುದು ಕುತೂ ಹಲದ ವಿಷಯ. ಈ ವಿಷಯದಲ್ಲಿ ಹಳೆಯ ಸಂಪ್ರದಾಯವೇ ಮುಂದುವರಿಯಲಿದೆಯೋ ಅಥವಾ ನಿಜಕ್ಕೂ ಬಿಜೆಪಿಗೆ ಲಾಭ ತರಲಿದೆಯೋ ಕಾದು ನೋಡಬೇಕಿದೆ. 

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.