ಓಟಿನ ಮೂಲಕ ಅಮ್ಮನ ವಿರೋಧಿಗಳಿಗೆ ಏಟು ಕೊಡಿ

ಅಂಬರೀಶ್‌ ಅಭಿಮಾನಿಗಳಿಗೆ ಯಶ್‌, ದರ್ಶನ್‌ ಮನವಿ

Team Udayavani, Apr 4, 2019, 6:06 AM IST

190403kpn38

ಮಂಡ್ಯ: ಮಂಡ್ಯದಲ್ಲಿ ಚುನಾವಣಾ ಪ್ರಚಾರದ ಕಾವು ಜೋರಾಗಿದ್ದು, ಬುಧವಾರವೂ ಸುಮಲತಾ ಪರ ನಟರಾದ ಯಶ್‌ ಮತ್ತು ದರ್ಶನ್‌ ಪ್ರಚಾರ ಕಾರ್ಯ ನಡೆಸಿದರು. ಇದೇ ವೇಳೆ, ಅನಿತಾ ಕುಮಾರಸ್ವಾಮಿಯವರು ಪುತ್ರ ನಿಖೀಲ್‌ ಪರವಾಗಿ ಮತ ಯಾಚಿಸಿದರು.

ಮಂಡ್ಯ, ಮದ್ದೂರು ತಾಲೂಕಿನ ವಿವಿಧೆಡೆ ಪ್ರಚಾರ ನಡೆಸಿದ ಸುಮಲತಾ ಸಿಎಂ ವಿರುದ್ಧ ಟೀಕಾಪ್ರಹಾರ ಮುಂದುವರಿಸಿದರು. ಅಂಬರೀಶ್‌ಗೆ ಅಭಿಮಾನಿಗಳು ನೀಡಿರುವ ಬೆಳ್ಳಿ ಗದೆ, ಚಿನ್ನದ ಕಿರೀಟಗಳನ್ನು ಮಾರಾಟ ಮಾಡಿ ಆ ಹಣದಿಂದ ಸುಮಲತಾ ಆಭರಣ ಮಾಡಿಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ನಮ್ಮದು ದಾನಶೂರ ಕರ್ಣನ ಮನೆ. ಅಂಬರೀಶ್‌ಗೆ ಕೊಟ್ಟ ಗದೆ, ಚಿನ್ನದ ಕಿರೀಟಗಳನ್ನು ಮಾರಿಕೊಳ್ಳುವಷ್ಟು ದರಿದ್ರ ನಮಗೆ ಬಂದಿಲ್ಲ. ಅಂಬರೀಶ್‌ ಬದುಕಿದ್ದಾಗಲೇ ಅವುಗಳನ್ನು ಶ್ರೀ ಆಂಜನೇಯಸ್ವಾಮಿ, ಶ್ರೀ ಶಿರಡಿ ಸಾಯಿಬಾಬ ಮಂದಿರಗಳಿಗೆ ದಾನವಾಗಿ ನೀಡಿದ್ದಾರೆಎಂದರು.

ಸುಮಲತಾಗೆ 10 ಸಾವಿರ ರೂ. ದೇಣಿಗೆ:
ಮದ್ದೂರಿನ ಶಿವಪುರದಲ್ಲಿ ರೋಡ್‌ ಶೋ ಮೂಲಕ ಮತಯಾಚನೆ ಮಾಡುವ ವೇಳೆ ಸ್ಥಳೀಯ ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರು, ಪುರಸಭೆ ಸದಸ್ಯರು ಸೇರಿ 10 ಸಾವಿರ ರೂ.ಗಳ ದೇಣಿಗೆ ನೀಡಿ ಅಂಬರೀಶ್‌ ಹಾಗೂ ಸುಮಲತಾ ಪರ ಘೋಷಣೆ ಕೂಗಿ ತಮ್ಮ ಬೆಂಬಲ ವ್ಯಕ್ತಪಡಿಸಿದರು.

ರಾಕಿ ಬಾಯ್‌ ಪ್ರಚಾರ:
ಈ ಮಧ್ಯೆ, ಪಾಂಡವಪುರ, ಶ್ರೀರಂಗಪಟ್ಟಣ ಸುತ್ತಮುತ್ತ ಯಶ್‌ ಪ್ರಚಾರ ನಡೆಸಿ, ಅಮ್ಮ ಸುಮಲತಾ ನಮ್ಮ ಜಿಲ್ಲೆಯ ಸೊಸೆ ಎಂದು ಹೆಮ್ಮೆಯಿಂದ ಮತ ಹಾಕಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ರೈತನಾಯಕಿ ಸುನೀತಾ ಪುಟ್ಟಣ್ಣಯ್ಯ ಸಾಥ್‌ ನೀಡಿದರು. ಗಂಜಾಂನಲ್ಲಿ ಮಹಿಳೆಯೊಬ್ಬರು ಯಶ್‌ ಇದ್ದ ವಾಹನಕ್ಕೆ ಆರತಿ ಬೆಳಗಿದರೆ, ಯುವಕರು ಮೈಸೂರು ಪೇಟ ತೊಡಿಸಿದರು.

ಅಮ್ಮ ಸುಮಲತಾಗೆ ಜಯಮಾಲೆ ತೊಡಿಸಿ:
ಕೆ.ಆರ್‌.ಪೇಟೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ಅಮ್ಮ ಸುಮಲತಾಗೆ ಮತ ನೀಡಿ ಜಯಮಾಲೆ ತೊಡಿಸುವ ಮೂಲಕ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿ ಎಂದು ಮನವಿ ಮಾಡಿದರು. ದರ್ಶನ್‌ ರೋಡ್‌ ಶೋನಲ್ಲಿ ಹಲವು ಸ್ಥಳೀಯ ಕಾಂಗ್ರೆಸ್‌ ಮುಖಂಡರು ಪಾಲ್ಗೊಂಡರು.

ಜೋಡೆತ್ತಿನ ಗಾಡಿ ಓಡಿಸಿದ ನಿಖೀಲ್‌:
ಇದೇ ವೇಳೆ, ಮಂಡ್ಯ ತಾಲೂಕಿನ ವಿವಿಧೆಡೆ ನಿಖೀಲ್‌ ಕುಮಾರಸ್ವಾಮಿಯವರು ಬೈಕ್‌ ಹಾಗೂ ಜೋಡೆತ್ತಿನ ಗಾಡಿ ಓಡಿಸುವ ಮೂಲಕ ಮತದಾರರ ಗಮನ ಸೆಳೆದರು. ಸಚಿವ ಪುಟ್ಟರಾಜು, ಸ್ಥಳೀಯ ಜೆಡಿಎಸ್‌ ಮುಖಂಡರು ಸಾಥ್‌ ನೀಡಿದರು. ಹೊಳಲುವಿನಲ್ಲಿ ಪ್ರಚಾರ ನಡೆಸುತ್ತಿದ್ದ ನಿಖೀಲ್‌ಗೆ ಅಭಿಮಾನಿಯೊಬ್ಬ ಮುತ್ತು ಕೊಟ್ಟಿದ್ದು ವಿಶೇಷವಾಗಿತ್ತು. ಮದ್ದೂರು ತಾಲೂಕಿನ ವಿವಿಧೆಡೆ ಪುತ್ರನ ಪರ ಪ್ರಚಾರ ನಡೆಸಿದ ಅನಿತಾ ಕುಮಾರಸ್ವಾಮಿ, ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿಗೆ ನಿಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿರುವಂತೆ ನಿಖೀಲ್‌ಗ‌ೂ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.