ಹೆಲಿಕಾಪ್ಟರ್ ಬುಕ್ ಮಾಡಿದ ಯಡಿಯೂರಪ್ಪ
Team Udayavani, Mar 17, 2019, 12:49 AM IST
ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರ ರಂಗೇರುತ್ತಿದ್ದು, ರಾಜಕೀಯ ನಾಯಕರು ರಾಜ್ಯ ಪ್ರವಾಸಕ್ಕಾಗಿ ಹೆಲಿಕಾಪ್ಟರ್ ಮುಂಗಡ ಬುಕ್ಕಿಂಗ್ ಆರಂಭಿಸಿದ್ದಾರೆ.ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸಕ್ಕೆ ಹೆಲಿಕಾಪ್ಟರ್ಗಳನ್ನು ಮುಂಗಡ ಬುಕ್ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ರಾಜ್ಯದ 28 ಕ್ಷೇತ್ರಕ್ಕೂ ರಾಜ್ಯಾಧ್ಯಕ್ಷರು ಪ್ರಚಾರ ಮಾಡಬೇಕಾಗುತ್ತದೆ. ಅಲ್ಲದೆ, ಒಂದೇ ದಿನ ಎರಡು ಮೂರು ಕಡೆಗಳಲ್ಲಿ ರ್ಯಾಲಿ ನಡೆಸಬೇಕಾಗುತ್ತದೆ. ಪ್ರಧಾನಿ ಮೋದಿ ಅಥವಾ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅವರೊಂದಿಗೆ ಇರಬೇಕಾಗುತ್ತದೆ. ಹೀಗಾಗಿ, ರಾಜಧಾನಿಯಿಂದ ರಾಜ್ಯದ ಬೇರೆ, ಬೇರೆ ಕಡೆಗಳಿಗೆ ತುರ್ತು ಪ್ರವಾಸ ಮಾಡಬೇಕಾಗುತ್ತದೆ. ಈ ಎಲ್ಲ ಉದ್ದೇಶದಿಂದ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಭ್ಯರ್ಥಿ ಪಟ್ಟಿ ಅಂತಿಮವಾದ ನಂತರ ರ್ಯಾಲಿಗಳ ದಿನಾಂಕ ನಿಗದಿಯಾಗುತ್ತಿದ್ದಂತೆ ಹೆಲಿಕಾಪ್ಟರ್ನಲ್ಲಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಪ್ರವಾಸ ಆರಂಭ ಮಾಡಲಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ಭಟ್ ಅವರು ಶನಿವಾರ ಭೇಟಿ ಮಾಡಿ, ಕೆಲಕಾಲ ಚರ್ಚೆ ನಡೆಸಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವಿಚಾರ ಸೇರಿದಂತೆ ರಾಜಕೀಯ ಹಾಗೂ ರಾಜಕೀಯೇತರ ವಿಷಯಗಳನ್ನು ಕೆಲಕಾಲ ಚರ್ಚಿಸಿದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು