ಸಿಂಧಿಯಾಗೆ ಜೈ ಅನ್ನುತ್ತಾ ಗುಣಾ?


Team Udayavani, May 12, 2019, 10:10 AM IST

kankana-1

ಮಧ್ಯಪ್ರದೇಶದ ಗುಣಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ. ರಾಜ ವಂಶಸ್ಥರಾದ ಸಿಂಧಿಯಾ ಕುಟುಂಬ ಈ ಕ್ಷೇತ್ರದಲ್ಲಿ ಎಂದಿಗೂ ಸೋಲು ಕಂಡಿಲ್ಲ. ಕಾಂಗ್ರೆಸ್‌ನಲ್ಲಿ ತಾರಾ ವರ್ಚಸ್ಸು ಹೊಂದಿರುವ, ಸತತ 4 ಬಾರಿ ಸಂಸದರಾಗಿರುವ ಜೋತಿರಾದಿತ್ಯ ಸಿಂಧಿಯಾಗೆ ಈ ಬಾರಿ ತುಸು ಸವಾಲು ಎದುರಾಗಿದೆ. ಅವರ ಪರಮ ಆಪ್ತ ಡಾ. ಯಾದವ್‌ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಆದರೆ, ತಮ್ಮನ್ನು ಕ್ಷೇತ್ರದ ಜನ ಕೈಬಿಡುವುದಿಲ್ಲ ಎಂಬ ವಿಶ್ವಾಸದೊಂದಿಗೆ ಸಿಂಧಿಯಾ ಉತ್ತರ ಪ್ರದೇಶದಲ್ಲಿ ಹೆಚ್ಚು ಕಾಂಗ್ರೆಸ್‌ ಸ್ಥಾನ ಗೆಲ್ಲಿಸಲು ಅಲ್ಲೇ ಠಿಕಾಣಿ ಹೂಡಿ ರಣತಂತ್ರ ರೂಪಿಸುತ್ತಿದ್ದಾರೆ.

ಸಿಂಧಿಯಾ ಸೋಲಿಲ್ಲದ ಸರದಾರ: ಗುಣಾ ಕ್ಷೇತ್ರದಲ್ಲಿ 2002ರಿಂದ ಸಂಸದ ರಾಗಿರುವ ಜೋತಿರಾದಿತ್ಯ ಸಿಂಧಿಯಾ 5ನೇ ಬಾರಿಗೆ ಆಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ. ಇತ್ತೀಚೆಗಷ್ಟೇ ನಡೆದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷವನ್ನು ಗೆಲುವಿನ ದಡ ಸೇರಿಸುವಲ್ಲಿ ಸಿಂಧಿಯಾ ಕೊಡುಗೆ ಸಾಕಷ್ಟಿದೆ. ಅವರೇ ಸಿಎಂ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದರು. ಆದರೆ, ಹಿರಿಯ ನಾಯಕ ಕಮಲನಾಥೆ ಈ ಹುದ್ದೆ ನೀಡಿ ಸಿಂಧಿಯಾರನ್ನು ಸಮಾಧಾನಪಡಿಸಿ, ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗುವಂತೆ ಮಾಡುವಲ್ಲಿ ಕಾಂಗ್ರೆಸ್‌ ಯಶಸ್ವಿ ಯಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿಂಧಿಯಾ, 39 ಲೋಕಸಭಾ ಕ್ಷೇತ್ರವಿರುವ ಉ.ಪ್ರದೇಶದ ಪಶ್ಚಿಮ ವಲಯದ ಉಸ್ತುವಾರಿ ಹೊತ್ತಿದ್ದಾರೆ. ಪ್ರಿಯಾಂಕಾರಷ್ಟೇ ಹೊಣೆ ಹೊತ್ತು ಹೆಚ್ಚು ಸ್ಥಾನ ಗೆಲ್ಲಿಸಲು ಇಲ್ಲೇ ಬೀಡುಬಿಟ್ಟಿದ್ದಾರೆ. ತವರು ಗುಣಾ ಕ್ಷೇತ್ರದಲ್ಲಿ ಸಿಂಧಿಯಾ ಅವರು ತಮ್ಮ ಪತ್ನಿ ಹಾಗೂ ಪಕ್ಷದ ಮುಖಂಡರಿಗೆ ಜವಾಬ್ದಾರಿ ವಹಿಸಿದ್ದಾರೆ. ಪತ್ನಿ ಪ್ರಿಯದರ್ಶಿನಿ ರಾಜೆ ರ್ಯಾಲಿ, ಸಭೆಗಳನ್ನು ನಡೆಸುತ್ತಾ ಮತಬೇಟೆಗೆ ಇಳಿದಿದ್ದಾರೆ. ಕ್ಷೇತ್ರದಲ್ಲಿ ಸಿಂಧಿಯಾ ಕುಟುಂಬದ ಬಗ್ಗೆ ಮತದಾರರಲ್ಲಿ ಅಭಿಮಾನವಿದೆ. ಇದೇ ಕ್ಷೇತ್ರದಿಂದ ಅವರ ತಂದೆ ಮಧರಾವ್‌, ಅಜ್ಜಿ ವಿಜಯ ರಾಜೆ ಸಿಂಧಿಯಾ ಕೂಡ ಸಂಸದರಾಗಿದ್ದಾರೆ.

ಮಾಯಾ ಕೆಂಗಣ್ಣು: ರಾಜ್ಯದಲ್ಲಿ ತನ್ನದೇ ಆದ ಪ್ರಭಾವ ಹೊಂದಿರುವ ಬಿಎಸ್ಪಿ, ಲೋಕೇಂದ್ರ ಸಿಂಗ್‌ ರಜಪೂತ್‌ ಅವರನ್ನು ಕಣಕ್ಕಿಳಿಸಿತ್ತು. ಆದರೆ, ಅವರು ನಾಮಪತ್ರ ವಾಪಸ್‌ ಪಡೆಯುವ ದಿನದಂದೇ ಕಣದಿಂದ ನಿವೃತ್ತಿ ಹೊಂದಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ. ಈ ನಡೆ ಬಿಎಸ್ಪಿ ನೇತಾರೆ ಮಾಯಾವತಿ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ಕಾರಣಕ್ಕೆ ಅವರು ಕಾಂಗ್ರೆಸ್‌ ವಿರುದ್ಧ ಹರಿಹಾಯುತ್ತಿದ್ದಾರೆ.

ಅರಳುತ್ತಾ ಕಮಲ?: ಗುಣಾ ಕ್ಷೇತ್ರದಲ್ಲಿ ಸಿಂಧಿಯಾಗೆ ಪೈಪೋಟಿ ನೀಡುವಷ್ಟು ಸಮರ್ಥ ನಾಯಕರು ಬಿಜೆಪಿಯಲ್ಲಿ ಇಲ್ಲ. ಹೀಗಾಗಿ ಆಪ್ತ ಡಾ.ಯಾದವ್‌ ಅವರನ್ನು ಪಕ್ಷಕ್ಕೆ ಕರೆ ತಂದು ಅಭ್ಯರ್ಥಿಯನ್ನಾಗಿಸಲಾಗಿದೆ. ಗುಣಾ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದಲ್ಲಿ 5 ಸ್ಥಾನ ಕಾಂಗ್ರೆಸ್‌ ಹಾಗೂ ಬಿಜೆಪಿ 3 ಸ್ಥಾನ ಪಡೆದಿದೆ. ಬಿಜೆಪಿ ಮತ ಪ್ರಮಾಣ ಕೂಡ ಹೆಚ್ಚಾಗಿದೆ. ಅಲ್ಲದೇ ಸಿಂಧಿಯಾ ಗೆಲುವಿನ ಅಂತರ ಕೂಡ ಕಡಿಮೆಯಾಗುತ್ತಿದೆ. ಗೆಲುವಿನ ಅದಮ್ಯ ವಿಶ್ವಾಸದೊಂದಿಗೆ ಕ್ಷೇತ್ರದಲ್ಲಿ ಸಿಂಧಿಯಾ ಕಾಣಿಸಿಕೊಳ್ಳದೇ ಉತ್ತರಪ್ರದೇಶದಲ್ಲಿ ಸಕ್ರಿಯರಾಗಿರುವುದು ಇಲ್ಲಿನ ಕಾರ್ಯಕರ್ತರಲ್ಲಿ ಅಸಮಧಾನ ಮೂಡಿಸಿದೆ. ಆಡಳಿತರೂಢ ಅಲೆ ಕೈಹಿಡಿದರೆ ಬಿಜೆಪಿ ಚೊಚ್ಚಲ ಗೆಲುವಿನ ನಗೆ ಬೀರಲಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lead

ವಾರಾಣಸಿಯತ್ತ ದೇಶದ ಗಮನ, ಮತ್ತೆ ಮೋದಿಗೇ ಕಾಶಿವಾಸಿಗಳ ನಮನ?

Ravi-Shankar-Prasad,-Shatrughan-Sinha

ಪಾಟ್ನಾಗೆ ಯಾರು ಸಾಹೇಬ್‌?

38

ಸ್ಲಂ, ಅನಧಿಕೃತ ಕಾಲನಿಗಳಲ್ಲೇ ಕದನ

28

ವಾಯವ್ಯ ದೆಹಲಿಯಲ್ಲಿ ಯಾರ ಪರ ಒಲವು?

saran

ಸರಣ್‌ನಲ್ಲಿ ಕುತೂಹಲದ ಹೋರಾಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.