ಬಿಹಾರ ಚುನಾವಣೆ 2020: ಚಿರಾಗ್ ಪಾಸ್ವಾನ್ ಗೆ ತೇಜಸ್ವಿ ಬೆಂಬಲ, ನಿತೀಶ್ ಗೆಲುವಿಗೆ ಅಡ್ಡಗಾಲು?

ಮೈತ್ರಿಯಿಂದ ಹೊರನಡೆದಿರುವ ಚಿರಾಗ್ ಪಾಸ್ವಾನ್ ಕೂಡಾ ಸವಾಲಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

Team Udayavani, Oct 19, 2020, 4:05 PM IST

ಬಿಹಾರ ಚುನಾವಣೆ 2020: ಚಿರಾಗ್ ಪಾಸ್ವಾನ್ ಗೆ ತೇಜಸ್ವಿ ಬೆಂಬಲ, ನಿತೀಶ್ ಗೆಲುವಿಗೆ ಅಡ್ಡಗಾಲು?

ಪಾಟ್ನಾ:ಬಿಹಾರ ವಿಧಾನಸಭಾ ಚುನಾವಣಾ ಅಖಾಡ ರಂಗೇರತೊಡಗಿದ್ದು ಮಹಾಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ಚಿರಾಗ್ ಪಾಸ್ವಾನ್ ಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಮತ್ತಷ್ಟು ಚಿಂತೆಗೆ ಕಾರಣವಾಗಿರುವುದಾಗಿ ವರದಿ ತಿಳಿಸಿದೆ.

ಚುನಾವಣಾ ಪ್ರಚಾರದಲ್ಲಿ ತೇಜಸ್ವಿ ಯಾದವ್ ಸವಾಲನ್ನು ನಿತೀಶ್ ಕುಮಾರ್ ಎದುರಿಸುತ್ತಿರುವ ನಡುವೆಯೇ ಮೈತ್ರಿಯಿಂದ ಹೊರನಡೆದಿರುವ ಚಿರಾಗ್ ಪಾಸ್ವಾನ್ ಕೂಡಾ ಸವಾಲಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ನಿತೀಶ್ ಕುಮಾರ್ ಅವರ ಚಿಂತೆಗೆ ಕಾರಣವಿದೆ. ತೇಜಸ್ವಿ ಯಾದವ್ ಸೋಮವಾರ (ಅಕ್ಟೋಬರ್ 19, 2020)ದಂದು ಮಾತನಾಡುತ್ತ, ಲೋಕ್ ಜನಶಕ್ತಿ ಪಕ್ಷ(ಎಲ್ ಜೆಪಿ)ದ ಮುಖಂಡ ಚಿರಾಗ್ ಪಾಸ್ವಾನ್ ಅವರು ಆಡಳಿತಾರೂಢ ಎನ್ ಡಿಎಯಿಂದ ಹೊರಬಂದು ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದಾರೆ. ಅಷ್ಟೇ ಅಲ್ಲ ಚುನಾವಣೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸುತ್ತಿದ್ದರು ಕೂಡಾ ತಾವು ಬಿಜೆಪಿ ಮೈತ್ರಿಯ ಭಾಗವಾಗಿರಬೇಕೆಂದು ಬಯಸಿರುವುದಾಗಿ ಹೇಳಿದ್ದರು.

“ನಿತೀಶ್ ಕುಮಾರ್ ಜೀ…ಚಿರಾಗ್ ಪಾಸ್ವಾನ್ ಉತ್ತಮ ಅಭ್ಯರ್ಥಿಯಲ್ಲವೇ? ಈ ಮೊದಲಿಗಿಂತಲೂ ಈಗ ಚಿರಾಗ್ ಗೆ ತಂದೆಯ ಅಗತ್ಯತೆ ಹೆಚ್ಚಿದೆ. ಆದರೆ ರಾಮ್ ವಿಲಾಸ್ ಪಾಸ್ವಾನ್ ಅವರು ಈಗ ನಮ್ಮೊಂದಿಗೆ ಇಲ್ಲ. ಈ ಬಗ್ಗೆ ಬೇಸರವಿದೆ. ಇಂತಹ ಸಂದರ್ಭದಲ್ಲಿ ನಿತೀಶ್ ಕುಮಾರ್ ಅವರ ವರ್ತನೆಯಿಂದ ಚಿರಾಗ್ ಗೆ ಅನ್ಯಾಯವಾಗಿದೆ ಎಂದು ತೇಜಸ್ವಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಇದನ್ನೂ ಓದಿ:ಲಡಾಖ್‌: ಸೆರೆಸಿಕ್ಕ ಚೀನ ಸೈನಿಕ ಪ್ರೋಟೋಕಾಲ್ ಅನುಸಾರ ಹಸ್ತಾಂತರ ಸಾಧ್ಯತೆ!

ಕೇಂದ್ರ ಮಾಜಿ ಸಚಿವ, ನನ್ನ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಬಳಿಕ ನಿತೀಶ್ ಕುಮಾರ್ ಅವರ ನಿಲುವು ತಮ್ಮ ಮನಸ್ಸಿಗೆ ನೋವು ತಂದಿರುವುದಾಗಿ ಎನ್ ಡಿಟಿವಿಗೆ ಚಿರಾಗ್ ನೀಡಿದ್ದ ಸಂದರ್ಶನದಲ್ಲಿ ನೀಡಿದ್ದ ಮೂರು ದಿನದ ನಂತರ ತೇಜಸ್ವಿ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

ಇದೀಗ ಚಿರಾಗ್ ಪಾಸ್ವಾನ್ ಗೆ ತೇಜಸ್ವಿ ಯಾದವ್ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಹಲವು ತಂತ್ರಗಾರಿಕೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ತೇಜಸ್ವಿ ತಂದೆ ಲಾಲುಪ್ರಸಾದ್, ಚಿರಾಗ್ ತಂದೆ ಪಾಸ್ವಾನ್ ಹಳೆಯ ಮಿತ್ರರು, ಅಲ್ಲದೇ ಇಬ್ಬರು ನಿತೀಶ್ ಕುಮಾರ್ ಜತೆ ಸಮಾಜವಾದಿ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

2015ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ಯಾದವ್ ಅವರನ್ನು ತೇಜಸ್ವಿ ಯಾದವ್ ಪರಾಜಯಗೊಳಿಸಿದ್ದರು.  ರಜಪೂತ್ ಸಮುದಾಯದ ಮತಗಳು ಸಾಮಾನ್ಯವಾಗಿ ಬಿಜೆಪಿಗೆ ಹೋಗಲಿದ್ದು, ಒಂದು ವೇಳೆ ಚಿರಾಗ್ ಪಾಸ್ವಾನ ಆಡಳಿತರೂಢ ಮೈತ್ರಿಕೂಟದ ಮತಗಳನ್ನು ಸೆಳೆದಲ್ಲಿ ತೇಜಸ್ವಿ ಯಾದವ್ ಲೆಕ್ಕಾಚಾರ ಸಲೀಸಲಾಗಿದೆ ಎಂದು ವರದಿ ತಿಳಿಸಿದೆ.

243 ಸದಸ್ಯ ಬಲದ ವಿಧಾನಸಭೆಯ ಮೊದಲ ಹಂತದ ಚುನಾವಣೆ ಅಕ್ಟೋಬರ್ 28ರಂದು, ನವೆಂಬರ್ 3ರಂದು ನಡೆಯಲಿದ್ದು, ನವೆಂಬರ್ 7ರಂದು ಮೂರನೇ ಹಂತದ ಚುನಾವಣೆ. ನ.10ರಂದು ಫಲಿತಾಂಶ ಪ್ರಕಟವಾಗಲಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.