ಬಿಹಾರ ಚುನಾವಣೆ: ನಿತೀಶ್ ಗೆ ಮುಳುವಾಗಲಿದೆಯಾ ವಲಸೆ ಕಾರ್ಮಿಕರ, ಯುವ ಮತದಾರರ ಆಕ್ರೋಶ?

ಇದೇ ಕೆಲಸವನ್ನು ಖಾಸಗಿ ಗುತ್ತಿಗೆದಾರನ ಬಳಿ ಮಾಡಿದಲ್ಲಿ 300, 400 ರೂಪಾಯಿ ಸಂಬಳ ಸಿಗುತ್ತದೆ.

Team Udayavani, Oct 12, 2020, 6:22 PM IST

ಬಿಹಾರ ಚುನಾವಣೆ: ನಿತೀಶ್ ಗೆ ಮುಳುವಾಗಲಿದೆಯಾ ವಲಸೆ ಕಾರ್ಮಿಕರ, ಯುವ ಮತದಾರರ ಆಕ್ರೋಶ?

ಮಣಿಪಾಲ:ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ದೇಶಾದ್ಯಂತ ಹರಡಿದ್ದ ಕೋವಿಡ್ 19 ಸೋಂಕಿನಿಂದಾಗಿ 2020ರ ಜೂನ್ ಹೊತ್ತಿಗೆ ಬಿಹಾರಕ್ಕೆ ಬರೋಬ್ಬರಿ 32 ಲಕ್ಷ ವಲಸೆ ಕಾರ್ಮಿಕರು ವಾಪಸ್ ಆಗಿದ್ದರು. ಹೀಗೆ ಕೆಲಸ ಕಳೆದುಕೊಂಡು ಬಿಹಾರಕ್ಕೆ ವಾಪಸ್ ಆದ ಕಾರ್ಮಿಕರು ವಾಸ್ತವ್ಯ ಹೂಡಲಷ್ಟೇ ಶಕ್ತರಾಗಿದ್ದು ಬಿಟ್ಟರೆ ಯಾವುದೇ ಕೆಲಸವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಲಸೆ ಕಾರ್ಮಿಕರ ಆರ್ಥಿಕ ಸಂಕಷ್ಟವೇ ಚುನವಾಣೆಯ ಪ್ರಮುಖ ಅಸ್ತ್ರವಾಗುವ ಸಾಧ್ಯತೆ ಹೆಚ್ಚಾಗಿದ್ದು, ಈ ಕುರಿತು ರಾಜ್ಯಾದ್ಯಂತ ಸುತ್ತಾಟ ನಡೆಸಿ ಮಾಹಿತಿ ಕಲೆಹಾಕಿರುವ ಫಸ್ಟ್ ಪೋಸ್ಟ್ ಹಲವಾರು ವಿಷಯಗಳನ್ನು ಬಿಚ್ಚಿಟ್ಟಿದೆ.

ಯಾರಾದರೂ ಯಾಕೆ ಮನ್ರೇಗಾದಡಿಯಲ್ಲಿ ದೈಹಿಕವಾಗಿ ಕೆಲಸ ಮಾಡಿ 170, 200 ರೂಪಾಯಿ ತೆಗೆದುಕೊಳ್ಳಬೇಕು? ಇದೇ ಕೆಲಸವನ್ನು ಖಾಸಗಿ ಗುತ್ತಿಗೆದಾರನ ಬಳಿ ಮಾಡಿದಲ್ಲಿ 300, 400 ರೂಪಾಯಿ ಸಂಬಳ ಸಿಗುತ್ತದೆ. ಹೀಗಾಗಿ ಮನ್ರೇಗಾ ಉಪಯೋಗವಿಲ್ಲದ ಯೋಜನೆಯಾಗಿದೆ…ಇದು ಬಿಹಾರದ ಭೋಜ್ ಪುರ್ ಜಿಲ್ಲೆಯ ಕಾಕಿಲಾ ಪಂಚಾಯತ್ ನ ಜಗದೀಶ್ ಪುರ್ ಬ್ಲಾಕ್ ನ ಮುಖ್ಯಸ್ಥ ಜಮೀಲ್ ಅಖ್ತರ್ ಆಕ್ರೋಶದ ನುಡಿಗಳು.

ರಾಜ್ಯದ ಹಲವೆಡೆ ಆಡಳಿತಾರೂಢ ಜೆಡಿಯು ಸರ್ಕಾರದ ವಿರುದ್ಧ ವಲಸೆ ಕಾರ್ಮಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವುದಾಗಿ ವರದಿ ಹೇಳಿದೆ ದೇಶಾದ್ಯಂತ ಬಿಹಾರದ ವಲಸೆ ಕಾರ್ಮಿಕರ ಸಂಖ್ಯೆಯೇ ಬಹುಪಾಲನ್ನು ಹೊಂದಿದೆ. ಕೋವಿಡ್ 19 ಲಾಕ್ ಡೌನ್ ನಿಂದಾಗಿ ಲಕ್ಷಾಂತರ ವಲಸೆ ಕಾರ್ಮಿಕರು ವಾಪಸ್ ಆಗಿದ್ದರು. ಇದರಿಂದಾಗಿ 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಲಸೆ ಕಾರ್ಮಿಕರ ಸಂಕಷ್ಟವೇ ಪ್ರಮುಖ ವಿಷಯವಾಗಲಿದೆ. ಕಳೆದ ಆರು ತಿಂಗಳಿನಿಂದ ಚುನಾವಣಾ ಆಯೋಗ 6.5 ಲಕ್ಷ ಹೊಸ ಮತದಾರರನ್ನು ಸೇರ್ಪಡೆ ಮಾಡಿಕೊಂಡಿದೆ. ಅಕ್ಟೋಬರ್ 28ರಿಂದ ಬಿಹಾರ ವಿಧಾನಸಭಾ ಚುನಾವಣೆ ಆರಂಭವಾಗಲಿದೆ.

ಇದನ್ನೂ ಓದಿ:ನೀಟ್ 2020 ಫಲಿತಾಂಶದ ದಿನಾಂಕ ಘೋಷಿಸಿದ ಕೇಂದ್ರ ಶಿಕ್ಷಣ ಸಚಿವ ರಮೇಶ್ ಫೋಖ್ರಿಯಾಲ್

ಜೂನ್ ವರೆಗೆ ಕನಿಷ್ಠ 32 ಲಕ್ಷ ವಲಸೆ ಕಾರ್ಮಿಕರು ಬಿಹಾರಕ್ಕೆ ಹಿಂದಿರುಗಿದ್ದರು. ಅವರು ವಾಪಸ್ ಆದ ಸಂದರ್ಭದಿಂದ ಹಿಡಿದು ಈವರೆಗೆ ಬಿಹಾರ ಸರ್ಕಾರ ಅವರ ಕೌಶಲ್ಯವನ್ನು ದಾಖಲಿಸಿಕೊಂಡಿತ್ತು. ಕೆಲಸಗಾರರಿಗೆ ಬೇರೆ ಆಯ್ಕೆಯೂ ಇಲ್ಲದಂತಾಗಿತ್ತು. ಹೀಗಾಗಿ ತಮ್ಮ, ತಮ್ಮ ಹಳ್ಳಿಗಳಲ್ಲಿ ಕೂಲಿ ಕೆಲಸ ಮಾಡಲು ನರೇಗಾದಡಿ ಸೇರ್ಪಡೆಗೊಳ್ಳುವುದು ಅನಿವಾರ್ಯವಾಗಿತ್ತು.

ಪೀಪಲ್ಸ್ ಆ್ಯಕ್ಷನ್ ಫಾರ್ ಎಂಪ್ಲಾಯ್ ಮೆಂಟ್ ಗ್ಯಾರಂಟಿ (ಪಿಎಇಜಿ) 2004ರಿಂದ ನರೇಗಾದಡಿ ಕಾರ್ಯನಿರ್ವಹಿಸುತ್ತಿರುವ ಸ್ವತಂತ್ರ ಸಂಸ್ಥೆಯಾಗಿದೆ. 2020ರ ಏಪ್ರಿಲ್ 1ರಿಂದ ಈವರೆಗೆ ಬಿಹಾರ 11.01 ಲಕ್ಷ ಜಾಬ್ ಕಾರ್ಡ್ಸ್ ಅನ್ನು ವಿತರಿಸಿದೆ. ಇಡೀ ದೇಶಾದ್ಯಂತ 83 ಲಕ್ಷ ಜಾಬ್ ಕಾರ್ಡ್ಸ್ ವಿತರಿಸಲಾಗಿದೆ ಎಂದು ವರದಿ ಹೇಳಿದೆ.

ಸರ್ಕಾರದ ವಿರುದ್ಧ ನಿರುದ್ಯೋಗಿ ಮತದಾರರ ಆಕ್ರೋಶ:

ಜಮೀಲ್ ಅವರ ಪ್ರಕಾರ, ನರೇಗಾದಡಿ ಕಾನೂನು ದೋಷಪೂರಿತವಾಗಿದೆ. ಇದರಿಂದ ಕಾರ್ಮಿಕರಾಗಲಿ ಅಥವಾ ಉದ್ಯೋಗದಾತರಿಗೆ ಲಾಭವಾಗುವುದಿಲ್ಲ. ನರೇಗಾದಡಿ ಹೆಸರು ನೋಂದಾಯಿಸಲು ಎಷ್ಟು ಕಷ್ಟ ಇದೆ ಎಂಬುದು ಜನಪ್ರತಿನಿಧಿಗಳಿಗೆ ಮಾತ್ರ ಚೆನ್ನಾಗಿ ತಿಳಿದಿದೆ. ನಾನು 2016ರಲ್ಲಿ ನನ್ನ ಹಳ್ಳಿಯ ಕೆಲವು ಯುವಕರನ್ನು ನರೇಗಾದಡಿ ಸೇರಿಸಿದ್ದೆ. ನಾನೊಂದು ಸಣ್ಣ ಯೋಜನೆಯನ್ನು ಆರಂಭಿಸಿದ್ದೆ. ಆದರೆ ಸಮರ್ಪಕವಾಗಿ ನಡೆಯಲೇ ಇಲ್ಲ. ಅಷ್ಟೇ ಅಲ್ಲ ಸೂಕ್ತ ಸಮಯಕ್ಕೆ ಕೂಲಿ (ಸಂಬಳ) ಬರುವುದೇ ಇಲ್ಲ. ಹೀಗಾಗಿ ಕಾರ್ಮಿಕರು ತಮಗೆ ಬರುವ ಪುಡಿಗಾಸಿಗಾಗಿ ಐದಾರು ತಿಂಗಳು ಯಾಕೆ ಕಾಯಬೇಕು ಎಂಬುದಾಗಿ ಜಮೀಲ್ ಪ್ರಶ್ನಿಸುತ್ತಾರೆ.

ಇದನ್ನೂ ಓದಿ:ಜಪಾನ್‌ ಕಡಲ ಗಡಿ ಪ್ರವೇಶಿಸಿದ ಚೀನದ ಹಡಗುಗಳು; ಎಚ್ಚರಿಕೆ ಬಳಿಕ ವಾಪಾಸಾದವು

ಬಿಹಾರ ಸರ್ಕಾರದಿಂದ ನಮಗೆ ಜಾಬ್ ಕಾರ್ಡ್ ಸಿಕ್ಕಿದೆ. ಆದರೆ ನಮಗೆ ಈವರೆಗೂ ಯಾವುದೇ ಕೆಲಸ ಸಿಕ್ಕಿಲ್ಲ. ನಮಗೂ ಉದ್ಯೋಗ ಕೊಡಿ ಎಂದು ಅಲವತ್ತುಕೊಂಡು ಸಾಕಾಗಿ ಹೋಗಿದೆ. ನಮ್ಮ ಸ್ಥಿತಿ ಭಿಕ್ಷುಕರಿಗಿಂತಲೂ ಕಡೆಯಾಗಿ ಹೋಗಿದೆ ಎಂದು 50 ವರ್ಷದ ಕೃಷ್ಣಾ ದೇವಿ ಆಕ್ರೋಶ ಹೊರಹಾಕಿದ್ದು ಈ ರೀತಿ!

ಉದ್ಯೋಗವಿಲ್ಲದೆ ಹಸಿವಿನಿಂದ ವಲಸೆ ಕಾರ್ಮಿಕರ ಸಾವು!

ಚುನಾವಣೆ ನಡೆಯಲಿರುವ ಬಿಹಾರದ 32 ಜಿಲ್ಲೆಗಳಲ್ಲಿ ವೈಶಾಲಿ ಕೂಡಾ ಒಂದಾಗಿದೆ. 2020ರ ಜೂನ್ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಇದರ ಮುಖ್ಯ ಉದ್ದೇಶ ವಲಸೆ ಕಾರ್ಮಿಕರಿಗೆ ಉದ್ಯೋಗ ಒದಗಿಸಿಕೊಡುವುದು. ಕೋವಿಡ್ 19 ಸೋಂಕು ಮತ್ತು ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡು ಬಿಹಾರಕ್ಕೆ ವಾಪಸ್ ಆಗಿದ್ದ ವಲಸೆ ಕಾರ್ಮಿಕರಿಗೆ ತುಸು ನಿರಾಳತೆ ಸಿಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಲಾಕ್ ಡೌನ್ ನಿಂದಾಗಿ ದೆಹಲಿ, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾನ್, ಮಧ್ಯಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಸುಮಾರು 24,19,052 ವಲಸೆ ಕಾರ್ಮಿಕರು ಬಿಹಾರಕ್ಕೆ ವಾಪಸ್ ಆಗಿದ್ದರು. ವಲಸೆ ಕಾರ್ಮಿಕರಿಗೆ ಉದ್ಯೋಗದ ಅವಕಾಶ ನೀಡಲು 12 ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳು ಜತೆಗೂಡಿ ಕಾರ್ಯನಿರ್ವಹಿಸಿದ್ದವು. ಆದರೆ ಯಾರಿಗೂ ಉದ್ಯೋಗ ಸಿಕ್ಕಿರಲಿಲ್ಲ!

ಇದನ್ನೂ ಓದಿ:ಅದೃಷ್ಟದ ಕೆಕೆಆರ್‌ಗೆ ಆರ್‌ಸಿಬಿ ಸವಾಲು: ಕಾರ್ತಿಕ್- ಕೊಹ್ಲಿ ಕಾಳಗದಲ್ಲಿ ಗೆಲುವು ಯಾರಿಗೆ?

ಲಾಕ್ ಡೌನ್ ನಂತರ ನಿತೀಶ್ ಕುಮಾರ್ ಮತ್ತು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿಹಾರಕ್ಕೆ ವಾಪಸ್ ಆದ ಎಲ್ಲಾ ಕಾರ್ಮಿಕರಿಗೆ ಉದ್ಯೋಗ ಕೊಡುವುದಾಗಿ ಭರವಸೆ ನೀಡಿರುವುದಾಗಿ ಆರ್ ಟಿಐ ಕಾರ್ಯಕರ್ತ ನಿಖಿಲೇಶ್ ತಿಳಿಸಿದ್ದಾರೆ. ಆದರೆ ಆರು ತಿಂಗಳ ನಂತರ ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗ ಹಸಿವಿನಿಂದ ಸಾವನ್ನಪ್ಪತೊಡಗಿದ್ದರು. ಇದರಲ್ಲಿ ಬಹುಪಾಲು ಹಿಂದುಳಿದ ಜಾತಿ ಮತ್ತು ಮಹಾದಲಿತ್ ಸಮುದಾಯಕ್ಕೆ ಸೇರಿದವರು ಎಂದು ವಿವರಿಸಿದ್ದಾರೆ.

ಇದರಿಂದಾಗಿ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಯುವ ನಿರುದ್ಯೋಗಿ ಮತದಾರರು ತಂಡವನ್ನು ಕಟ್ಟಿಕೊಂಡು ವಿರೋಧ ವ್ಯಕ್ತಪಡಿಸಲು ಸಜ್ಜಾಗುತ್ತಿದ್ದಾರೆ. ಕೆಲಸ ಇಲ್ಲದೆ ಒತ್ತಡಕ್ಕೆ ಒಳಗಾಗಿರುವ ವಲಸೆ ಕಾರ್ಮಿಕರು, ಯುವ ಸಮುದಾಯ ನಿತೀಶ್ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದು, ಚುನಾವಣೆ ಹತ್ತಿರವಾಗುವವರೆಗೂ ಈ ಸರ್ಕಾರ ವಲಸೆ ಕಾರ್ಮಿಕರನ್ನು, ಯುವ ಮತದಾರರನ್ನು ಗಮನಿಸಿಯೂ ಇಲ್ಲ ಎಂಬುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.