ಬಿಜೆಪಿ ಮೈತ್ರಿಧರ್ಮ ಪಾಲಿಸುತ್ತಿದೆ: ಚಿರಾಗ್
Team Udayavani, Oct 19, 2020, 1:20 AM IST
ಪಟ್ನಾ: ಬಿಹಾರದಲ್ಲಿ ಎಲ್ಜೆಪಿ ಜತೆ ಯಾವುದೇ ಸಖ್ಯ ಇಲ್ಲ ಎಂದು ಬಿಜೆಪಿ ಅಧಿಕೃತವಾಗಿ ಘೋಷಿಸಿದ್ದರೂ, ಎಲ್ಜೆಪಿ ನಾಯಕ ಚಿರಾಗ್ ಪಾಸ್ವಾನ್ ಮಾತ್ರ ತಮ್ಮ ರಾಜಕೀಯ ತಂತ್ರವನ್ನು ಮುಂದುವರಿಸಿದ್ದಾರೆ.
ತಮ್ಮ ವಿರುದ್ಧ ಬಿಜೆಪಿ ಟೀಕಿಸಿರುವುದಕ್ಕೆ ರವಿವಾರ ಪ್ರತಿಕ್ರಿಯಿಸಿರುವ ಚಿರಾಗ್, “ಸಿಎಂ ನಿತೀಶ್ ಕುಮಾರ್ ಜತೆ ಮೈತ್ರಿ ಮಾಡಿಕೊಂಡಿರುವ ಕಾರಣ ಬಿಜೆಪಿ ಕೇವಲ ತನ್ನ ಮೈತ್ರಿಧರ್ಮ ಪಾಲಿಸುತ್ತಿದೆ. ಪ್ರಧಾನಿ ಮೋದಿ ಜತೆಗಿನ ನನ್ನ ಸಂಬಂಧವನ್ನು ಎಲ್ಲರೆದುರು ಪ್ರದರ್ಶಿಸ ಬೇಕಾದ ಅಗತ್ಯವಿಲ್ಲ’ ಎಂದಿದ್ದಾರೆ.
ಇದೇ ವೇಳೆ, ಬಂಕೀಪುರ ಕ್ಷೇತ್ರದಲ್ಲಿ 3 ಬಾರಿ ಗೆದ್ದಿರುವ ಬಿಜೆಪಿ ಶಾಸಕನ ವಿರುದ್ಧ ಕಾಂಗ್ರೆಸ್ನಿಂದ ನಟ ಶತ್ರುಘ್ನ ಸಿನ್ಹಾ ಅವರ ಪುತ್ರ ಲವ ಸಿನ್ಹಾ ಕಣಕ್ಕಿಳಿಯ ಲಿದ್ದಾರೆ. ಈ ಕ್ಷೇತ್ರ ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಕಳೆದ ಬಾರಿ ಪಟ್ನಾ ಸಾಹಿಬ್ನಲ್ಲಿ ಶತ್ರುಘ್ನ ಅವರು ಸೋಲುಂಡಿದ್ದರು. “ನಾನು ನನ್ನ ಅಪ್ಪನ ಸೋಲಿಗೆ ಪ್ರತೀಕಾರ ತೀರಿಸಲೆಂದು ಸ್ಪರ್ಧಿಸುತ್ತಿಲ್ಲ. ಬದಲಿಗೆ ಪಾಟ್ನಾದ ಜನರ ಶ್ರೇಯೋಭಿವೃದ್ಧಿಗಾಗಿ ಕಣಕ್ಕಿಳಿದಿದ್ದೇನೆ’ ಎಂದು ಲವ ಸಿನ್ಹಾ ಹೇಳಿದ್ದಾರೆ.
ಬೈಡೆನ್ ಹೇಳಿಕೆ ಪ್ರಸ್ತಾವ: ಅಮೆರಿಕದಲ್ಲಿ ಡೆಮಾ ಕ್ರಾಟ್ ಅಭ್ಯರ್ಥಿ ಜೋ ಬೈಡೆನ್ ನೀಡಿರುವ “ಭಯದ ಬದಲಿಗೆ ಭರವಸೆ, ವಿಭಜನೆ ಬದಲಿಗೆ ಏಕತೆ’ ಹೇಳಿಕೆಯನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ ಚಿದಂಬರಂ, ಬಿಹಾರ, ಮಧ್ಯಪ್ರದೇಶದ ಮತದಾರರು ಕೂಡ ಇಂಥದ್ದೇ ಶಪಥ ಮಾಡಬೇಕಾದ ಅಗತ್ಯವಿದೆ ಎಂದಿದ್ದಾರೆ.
ಎಲ್ಜೆಪಿ ಬಿಜೆಪಿಯ “ಬಿ’ ಟೀಂ ಆಗಿದ್ದು, ಮತಗಳನ್ನು ವಿಭಜಿಸುವುದು ಅವರ ಯೋಜನೆ ಆಗಿದೆ.
ತೇಜಸ್ವಿ ಯಾದವ್, ಆರ್ಜೆಡಿ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ
ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್
ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?
ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ
ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ