ಬಿಹಾರ:ಕೋವಿಡ್ ಲಸಿಕೆ ಉಚಿತ ಭರವಸೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಆಯೋಗ
ಆರ್ ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಸಲ್ಲಿಸಿರುವ ಅರ್ಜಿಗೆ ಆಯೋಗ ಉತ್ತರ
Team Udayavani, Oct 31, 2020, 4:36 PM IST
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೋವಿಡ್ 19 ಸೋಂಕು ಗುಣಪಡಿಸಬಲ್ಲ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಭಾರತೀಯ ಜನತಾ ಪಕ್ಷ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಪಿಟಿಐ ವರದಿ ಪ್ರಕಾರ, ಕೋವಿಡ್ ಗುಣಪಡಿಸಬಲ್ಲ ಲಸಿಕೆ ಉಚಿತವಾಗಿ ನೀಡುವ ಬಿಜೆಪಿ ಭರವಸೆ ಬಗ್ಗೆ ಆರ್ ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಸಲ್ಲಿಸಿರುವ ಅರ್ಜಿಗೆ ಉತ್ತರ ನೀಡಿರುವ ಆಯೋಗ, ಈ ವಿಚಾರದಲ್ಲಿ ಯಾವುದೇ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಚುನಾವಣೆಯಲ್ಲಿ ಬಿಜೆಪಿ ನೀಡಿರುವ ಭರವಸೆ ತಾರತಮ್ಯದ್ದಾಗಿದ್ದು ಮತ್ತು ಚುನಾವಣೆಯಲ್ಲಿ ಕೇಂದ್ರ ಸರ್ಕಾರ ತಮ್ಮ ಆಡಳಿತವನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಗೋಖಲೆ ದೂರಿನಲ್ಲಿ ಅರೋಪಿಸಿರುವುದಾಗಿ ಪಿಟಿಐ ತಿಳಿಸಿದೆ.
ಇದನ್ನೂ ಓದಿ: ದೇಶದ ಮೊದಲ ಸೀ ಪ್ಲೇನ್ ಗೆ ಪ್ರಧಾನಿ ಮೋದಿ ಚಾಲನೆ: ಏನಿದರ ವಿಶೇಷ, ಪ್ರಯಾಣ ದರ ಎಷ್ಟು?
ಚುನಾವಣಾ ನೀತಿ ಸಂಹಿತೆಯ ಭಾಗ VIIIರ ಪ್ರಕಾರ ಪ್ರಣಾಳಿಕೆಯಲ್ಲಿನ ಭರವಸೆ ನೀತಿ ಸಂಹಿತೆಯ ಉಲ್ಲಂಘನೆಯಾಗಿಲ್ಲ ಎಂಬುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿರುವುದಾಗಿ ಪಿಟಿಐ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ
ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್
ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?
ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ
ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ
MUST WATCH
ಹೊಸ ಸೇರ್ಪಡೆ
ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ