ಲಾಲು, ನಿತೀಶ್‌ ವಿದ್ಯಾರ್ಥಿಗಳಾಗಿರುವಾಗ ಪಾಸ್ವಾನ್‌ ವಿಧಾನಸಭಾ ಸದಸ್ಯ!


Team Udayavani, Oct 8, 2020, 9:34 PM IST

Lalu Nithis and paswan

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಭಾರತದ ರಾಜಕೀಯದಲ್ಲಿ ‘ಹವಾಮಾನಶಾಸ್ತ್ರಜ್ಞ’ ಅಥವ Meteorologist ಎಂದು ಕರೆಯಲ್ಪಡುವ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಪ್ರಯಾಣವು ಸುಮಾರು ಐದು ದಶಕಗಳಿಗಿಂತಲೂ ಹಳೆಯದು.

ಕಳೆದ ಎರಡು ದಶಕಗಳಲ್ಲಿ ಅವರು ಪ್ರತಿ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದವರು. ರಾಮ್ ವಿಲಾಸ್ ಪಾಸ್ವಾನ್ ಐದು ದಶಕಗಳಲ್ಲಿ 8 ಬಾರಿ ಲೋಕಸಭೆಯ ಸದಸ್ಯರಾಗಿದ್ದಾರೆ. ಲಾಲು ಪ್ರಸಾದ್ ಯಾದವ್ ಮತ್ತು ನಿತೀಶ್ ಕುಮಾರ್ ತಮ್ಮ ವಿದ್ಯಾರ್ಥಿ ಜೀವನದಲ್ಲಿದ್ದಾಗ ಪಾಸ್ವಾನ್ ಬಿಹಾರ ವಿಧಾನಸಭೆಯಲ್ಲಿ ಸದಸ್ಯರಾಗಿದ್ದರು ಎಂಬುದು ಉಲ್ಲೇಖನೀಯ.

ತುರ್ತು ಪರಿಸ್ಥಿತಿಯಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಡುವುದರಿಂದ ಹಿಡಿದು ಮುಂದಿನ ಐದು ದಶಕಗಳವರೆಗೆ ಪಾಸ್ವಾನ್ ಕಾಂಗ್ರೆಸ್ ವಿರುದ್ಧ ಹೋರಾಡುತ್ತಲೇ ಇದ್ದರು. ಈ ಅವಧಿಯಲ್ಲಿ ಅವರು ಹಲವು ಸೋಲು-ಗೆಲುವುಗಳನ್ನು ಕಂಡಿದ್ದಾರೆ. 1977 ರ ಲೋಕಸಭಾ ಚುನಾವಣೆಯಲ್ಲಿ ಹಾಜಿಪುರ ಸ್ಥಾನದಿಂದ ಜನತಾದಳ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಪಾಸ್ವಾನ್, ಸುಮಾರು 4 ಲಕ್ಷಕ್ಕೂ ಅಧಿಕ ಮತಗಳನ್ನು ಗಳಿಸಿ ದಾಖಲೆಯ ಗೆಲುವನ್ನು ಕಂಡಿದ್ದರು. ಅನಂತರ ಅವರು 2014ರ ವರೆಗೆ ಎಂಟು ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲುವು ಕಂಡಿದ್ದಾರೆ. ಪ್ರಸ್ತುತ ಅವರು ರಾಜ್ಯಸಭೆಯ ಸದಸ್ಯರಾಗಿ ಕೇಂದ್ರ ಸಚಿವರಾಗಿದ್ದಾರೆ.

1969ರಲ್ಲಿ ಪ್ರಾರಂಭವಾದ ರಾಜಕೀಯ ಪ್ರಯಾಣ
5 ಜುಲೈ 1946ರಂದು ಖಾಗೇರಿಯಾದ ದಲಿತ ಕುಟುಂಬದಲ್ಲಿ ಜನಿಸಿದ ರಾಮ್ ವಿಲಾಸ್ ಪಾಸ್ವಾನ್ ರಾಜಕೀಯಕ್ಕೆ ಸೇರುವ ಮೊದಲು ಬಿಹಾರ ಆಡಳಿತ ಸೇವೆಯಲ್ಲಿ ಅಧಿಕಾರಿಯಾಗಿದ್ದರು. ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಪ್ರಯಾಣವು 1969ರಲ್ಲಿ ಪ್ರಾರಂಭವಾಯಿತು. ಅವರು ಸಂಯುಕ್ತ ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಿಹಾರ ವಿಧಾನಸಭೆಯನ್ನು ಮೊದಲ ಬಾರಿ ಪ್ರವೇಶಿಸಿದ್ದರು. ಪಾಸ್ವಾನ್ ತುರ್ತುಪರಿಸ್ಥಿತಿಯ ಸಂಪೂರ್ಣ ಅವಧಿಯನ್ನು ಜೈಲಿನಲ್ಲಿ ಕಳೆದಿದ್ದರು. ತುರ್ತು ಪರಿಸ್ಥಿತಿ ಮುಗಿದ ಬಳಿಕ ಪಾಸ್ವಾನ್ ಜನತಾದಳ ಸೇರಿದರು. ಜನತಾದಳ ಟಿಕೆಟ್‌ನಲ್ಲಿ 1977ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಹಾಜಿಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು.

ವಿ.ಪಿ.ಸಿಂಗ್‌ ಸರಕಾರದಲ್ಲಿ ಮೊದಲ ಬಾರಿ ಸಚಿವ
1977ರ ದಾಖಲೆಯ ವಿಜಯದ ನಂತರ ರಾಮ್ ವಿಲಾಸ್ ಪಾಸ್ವಾನ್ 1980 ಮತ್ತು 1989 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಜಯಗಳಿಸಿದರು. ವಿ.ಪಿ.ಸಿಂಗ್ ಅವರ ಸರಕಾರದಲ್ಲಿ ಮೊದಲ ಬಾರಿಗೆ ಸಂಪುಟ ಸೇರಿದ ಅವರು ಯಶಸ್ವಿಯಾಗಿ ಖಾತೆಯನ್ನು ನಿಭಾಯಿಸಿದ್ದರು. ವಿಶ್ವನಾಥ್ ಪ್ರತಾಪ್ ಸಿಂಗ್ ಅವರ ಸರಕಾದಲ್ಲಿ ಅವರನ್ನು ಮೊದಲ ಬಾರಿಗೆ ಕ್ಯಾಬಿನೆಟ್ ಮಂತ್ರಿಯನ್ನಾಗಿ ಮಾಡಲಾಯಿತು. ಮುಂದಿನ ಹಲವು ವರ್ಷಗಳವರೆಗೆ ಪಾಸ್ವಾನ್‌ ರೈಲ್ವೇ ಇಲಾಖೆಯಿಂದ ಟೆಲಿಕಾಂ ಮತ್ತು ಕಲ್ಲಿದ್ದಲು ಇಲಾಖೆಯ ವರೆಗಿನ ವಿವಿಧ ಖಾತೆಗಳನ್ನು ನಿಭಾಯಿಸಿದ್ದರು.

ತಮ್ಮ ರಾಜಕೀಯ ಪ್ರಯಾಣದಲ್ಲಿ ಅವರು ಬಿಜೆಪಿ, ಕಾಂಗ್ರೆಸ್, ಆ‌ರ್‌ ಜೆಡಿ ಮತ್ತು ಜೆಡಿಯು ಜತೆ ಹಲವು ಸಂದರ್ಭದಲ್ಲಿ ಮೈತ್ರಿ ಮಾಡಿಕೊಂಡು ಕೇಂದ್ರ ಸರಕಾರದಲ್ಲಿ ಸಚಿವರಾಗಿದ್ದರು. ನರೇಂದ್ರ ಮೋದಿ ನೇತೃತ್ವದ ಎರಡೂ ಕೇಂದ್ರ ಸರಕಾರಗಳಲ್ಲಿ ಪಾಸ್ವಾನ್ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದಾರೆ.

ಡಾ. ಮನಮೋಹನ್‌ ಸಿಂಗ್‌ ಸಂಪುಟದಲ್ಲಿ ಸಚಿವ
2002ರ ಗೋಧ್ರಾ ಗಲಭೆಯ ಬಳಿಕ ಅಂದಿನ ಅಟಲ್ ಬಿಹಾರಿ ವಾಜಪೇಯಿ ಸರಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‌ಡಿಎ ತೊರೆದಿದ್ದರು. ಬದಲಾದ ರಾಜಕೀಯದ ಹಿನ್ನೆಲೆಯಲ್ಲಿ ರಾಮ್ ವಿಲಾಸ್ ಪಾಸ್ವಾನ್ ಎನ್‌ಡಿಎ ಒಕ್ಕೂಟದೊಂದಿಗಿನ ಸಂಬಂಧವನ್ನು ಮುರಿದುಕೊಂಡರು. ಅನಂತರ ಪಾಸ್ವಾನ್ ಅವರು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಗೆ ಸೇರಿದರು. ಡಾ. ಮನಮೋಹನ್ ಸಿಂಗ್ ಸಂಪುಟದಲ್ಲಿ ಎರಡು ಬಾರಿ ಸಚಿವರಾಗಿದ್ದರು. ಆದರೆ 2014 ರ ಚುನಾವಣೆಯಲ್ಲಿ ಪಾಸ್ವಾನ್ ಮತ್ತೊಮ್ಮೆ ಯುಪಿಎ ತೊರೆದು ಎನ್‌ಡಿಎಗೆ ಸೇರ್ಪಡೆಯಾದರು. 2014 ಮತ್ತು 2019ರಲ್ಲಿ ರಚನೆಗೊಂಡ ನರೇಂದ್ರ ಮೋದಿ ನೇತೃತ್ವದ ಸರಕಾರಗಳಲ್ಲಿ ಅವರಿಗೆ ಪ್ರಮುಖ ಖಾತೆಗಳನ್ನು ನೀಡಲಾಯಿತು.

ಎರಡು ಮದುವೆಯಾಗಿದ್ದರು
ಪಾಸ್ವಾನ್ ಅವರ ವೈಯಕ್ತಿಕ ಜೀವನ ತಮ್ಮ ರಾಜಕೀಯ ಜೀವನದಲ್ಲಿ ಎಲ್ಲೂ ಸದ್ದು ಮಾಡೇ ಇಲ್ಲ. ಪಾಸ್ವಾನ್ ಎರಡು ಮದುವೆಗಳನ್ನು ಮಾಡಿಕೊಂಡಿದ್ದಾರೆ. ಮೊದಲ ಹೆಂಡತಿಯಿಂದ ಇಬ್ಬರು ಹೆಣ್ಣು ಮಕ್ಕಳಿದ್ದರೆ, ಎರಡನೇ ಹೆಂಡತಿಗೆ ಚಿರಾಗ್ ಪಾಸ್ವಾನ್ ಮತ್ತು ಓರ್ವ ಪುತ್ರಿ ಇದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಅವರ ಮೊದಲ ಪತ್ನಿ ಈಗಲೂ ತಮ್ಮ ಹಳ್ಳಿಯಾದ ಶಹರ್ಬನ್ನಿಯಲ್ಲಿ ವಾಸಿಸುತ್ತಿದ್ದಾರೆ ಎಂದು ದೈನಿಕ್‌ ಭಾಸ್ಕರ್‌ ವರದಿ ಮಾಡಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.