ಜಯಚಂದ್ರರಿಗೆ ಟಿಕೆಟ್: ಹೈಕಮಾಂಡ್ ಆಕ್ಷೇಪವಿತ್ತೇ ?
ಡಿಕೆಶಿ - ಸಿದ್ದು ಚರ್ಚೆ ವೀಡಿಯೋ ಬಹಿರಂಗ
Team Udayavani, Oct 9, 2020, 6:00 AM IST
ಬೆಂಗಳೂರು: ಸುರ್ಜೇವಾಲ, ರಾಜೇಶ್ ಗೌಡಗೆ ಕೊಡಬಹುದಿತ್ತು ಅಲ್ವಾ ಅಂದ್ರು…. ಅವ್ನು ದಳದಲ್ಲೂ ಟಿಕೆಟ್ ಕೇಳ್ತಿದ್ದ, ಬಿಜೆಪಿಯಲ್ಲೂ ಕೇಳ್ತಿದ್ದ, ಸುಮ್ನೆ ನಾಮಕಾವಸ್ತೆಗೆ ನಮ್ಮಲ್ಲಿದ್ದ….
ಉಪ ಚುನಾವಣೆಯ ಬಿಸಿ ಏರುತ್ತಿರುವ ಹೊತ್ತಿನಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವಿನ ಸಂಭಾಷಣೆ ಯದ್ದು ಎನ್ನಲಾದ ಇಂಥದ್ದೊಂದು ವೀಡಿಯೋ ಬಹಿರಂಗಗೊಂಡಿದೆ. ಶಿರಾ ಕ್ಷೇತ್ರದಲ್ಲಿ ಟಿ.ಬಿ. ಜಯಚಂದ್ರರಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ಹೈಕಮಾಂಡ್ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಗೊಂದಲ ಇರುವ ವಿಷಯ ಚರ್ಚೆಗೆ ಗ್ರಾಸವಾಗಿದೆ.
ಸಂಭಾಷಣೆ ವಿವರ
ಡಿಕೆಶಿ: ಸಾಹೇಬ್ರು ಕಾಲ್ ಮಾಡಿದ್ರು, ಜಯಚಂದ್ರರಿಗೆ ಕೊಡಬಾರದಾಗಿತ್ತು, ರಾಜೇಶ್ ಗೌಡರಿಗೆ ಕೊಡಬೇಕಿತ್ತು. 1979ರಿಂದ ಅವ್ರಿಗೆ ಟಿಕೆಟ್ ಕೊಡ್ತಿದ್ದೀರಾ. ಈಗಾಗಲೇ 9 ಬಾರಿ ಟಿಕೆಟ್ ಕೊಟ್ಟಿದ್ದೇವೆ. ಮತ್ತೆ ಅವರನ್ನೇ ಆಯ್ಕೆ ಮಾಡುತ್ತಿದ್ದೀರಾ? ನಿಮಗೇನು ಕಾಮನ್ಸೆನ್ಸ್ ಇಲ್ವಾ?
ಸಿದ್ದರಾಮಯ್ಯ: ಯಾರು ಹೇಳಿದ್ದು?
ಡಿಕೆಶಿ: ಅವ್ರೇ ಸುರ್ಜೇವಾಲ. ರಾಜೇಶ್ ಗೌಡರಿಗೆ ಕೊಡಬಹುದಿತ್ತು ಅಲ್ವಾ ಅಂದ್ರು. ನಾವು ಕೂತ್ಕೊಂಡು ಮಾತಾಡಿದ್ವಿ, ಹಾಗೆಲ್ಲ ಮಾಡಕ್ಕೆ ಆಗಲ್ಲ ಅಂತ. ಈಗ ಯೋಚನೆ ಮಾಡಿ ನೋಡು ಅಂದ್ರು.
ಸಿದ್ದರಾಮಯ್ಯ: ಅವ್ನು ಬಿಜೆಪಿ ಸೇರಿ ಆಯ್ತಲ್ವ?
ಡಿಕೆಶಿ: ನಾನು ಹೇಳಿದೆ ಅವ್ರು ಬಿಜೆಪಿ ಸೇರಿದ್ರು ಅಂತ. ಲಾಸ್ಟ್ ಟೈಮೂ ದಳಕ್ಕೇ ಕೆಲಸ ಮಾಡಿದ್ರು ಅಂತ.
ಸಿದ್ದರಾಮಯ್ಯ: ಅವ್ನು ದಳದಲ್ಲೂ ಟಿಕೆಟ್ ಕೇಳ್ತಿದ್ದ, ಬಿಜೆಪಿಯಲ್ಲೂ ಕೇಳ್ತಿದ್ದ, ಸುಮ್ನೆ ನಾಮಕಾವಸ್ತೆಗೆ ನಮ್ಮಲ್ಲಿದ್ದ.
ಡಿಕೆಶಿ : ಹೇಳ್ದೆ, ನಾನು ಹೇಳ್ದೆ.
ಸಿದ್ದರಾಮಯ್ಯ : ಆಗಲ್ಲ ಆಗಲ್ಲ.
ಡಿಕೆಶಿ: ಈಗ ಫ್ಯಾಕ್ಸ್ ಹೋಗಿದೆ, ಅದನ್ನು ನೋಡಿ ಈಗ ಹೇಳ್ತಿದ್ದಾರೆ.
ಸಿದ್ದರಾಮಯ್ಯ : ಆಗಲ್ಲ ಆಗಲ್ಲ
ಡಿಕೆಶಿ: ಅಲ್ಲ, ನಿಮ್ಮ ಗಮನಕ್ಕೆ ತರ್ತಿದ್ದೀನಿ ಅಷ್ಟೇ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು