ಆರ್‌.ಆರ್‌.ನಗರದಲ್ಲಿ ಮರ್ಡರ್‌ ಸಾಧ್ಯತೆ : ಬಿಜೆಪಿ ಅಭ್ಯರ್ಥಿ ಮುನಿರತ್ನ ಕಳವಳ

ಕ್ಷೇತ್ರಕ್ಕೆ ಹೊರಗಿನಿಂದ 4 ಸಾವಿರ ಮಂದಿ ಆಗಮನ

Team Udayavani, Oct 23, 2020, 11:55 AM IST

BNG-TDY-1

ಟಿ.ದಾಸರಹಳ್ಳಿ: ರಾಜರಾಜೇಶ್ವರಿ ನಗರ ಚುನಾವಣಾ ಗೆಲುವಿಗಾಗಿ ಕೊಲೆಗಳಾಗುವ ಸಾಧ್ಯತೆ ತುಂಬಾ ಇದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಕಳವಳ ವ್ಯಕ್ತಪಡಿಸಿದರು.

ಕ್ಷೇತ್ರದ ಬಂಡಪ್ಪ ಗಾರ್ಡನ್‌ನಲ್ಲಿ ಮತಯಾಚನೆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕ್ಷೇತ್ರಕ್ಕೆ ಹೊರಗಿನಿಂದ 4 ಸಾವಿರ ಜನ ಬಂದಿದ್ದು, ಗಲಭೆ ಸೃಷ್ಟಿಸಲು ಮುಂದಾಗಿದ್ದಾರೆ.  ಈಗಾಗಲೇ ಕ್ಷೇತ್ರದಲ್ಲಿ ಭಯದ ವಾತಾವರಣ ನಿರ್ಮಿಸಿದ್ದಾರೆ. ಇದು ಎಲ್ಲಿಗೆ ಹೋಗಿ ಮುಟ್ಟುತ್ತದೋ ಗೊತ್ತಿಲ್ಲ. ಇಂಥ ಗೂಂಡಾ ಸಂಸ್ಕೃತಿಯನ್ನು ಪೋಷಿಸುವುದು ಬೇಡ 15 ದಿನಗಳಲ್ಲಿ ಚುನಾವಣೆ ಮುಕ್ತಾಯವಾಗುತ್ತದೆ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡಬೇಡಿ, ಕ್ಷೇತ್ರದಲ್ಲಿ ಅಭಿವೃದ್ಧಿ ಮಂತ್ರದ ಮೂಲಕ ಜನರನ್ನು ಒಟ್ಟುಗೂಡಿಸಲು ಶ್ರಮಿಸಲಾಗುತ್ತಿದ್ದು, ಕ್ಷೇತ್ರದಲ್ಲಿ ಮತ್ತಷ್ಟು ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದರು. ಪಾಲಿಕೆ ಮಾಜಿ ಸದಸ್ಯ ಬಿ.ಆರ್‌.ನಂಜುಂಡಪ್ಪ, ಮುಖಂಡರಾದ ಸುನಂದ ಬೋರೇಗೌಡ, ಕಿರಣ ಮತ್ತಿತರರಿದ್ದರು.

ಬಿಜೆಪಿ ಸಂಸ್ಕೃತಿಯಂತೆ ಎಲೆಕ್ಷನ್‌ :  ಕನಕಪುರದಲ್ಲಿ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್‌ ಚುನಾವಣೆ ಎಕ್ಸ್‌ಪರ್ಟ್‌ಗಳು. ಅಕ್ರಮ ಮಾಡಿ ಅವರಿಗೆ ಅಭ್ಯಾಸ. ಕಾಂಗ್ರೆಸ್‌ ಅಂದ್ರೆ ಗೂಂಡಾಗಿರಿ, ಕಾಂಗ್ರೆಸ್‌ ಗೆ ಸೋಲಿನ ಭೀತಿ ವಾಸನೆ ಬಂದಿದೆ. ಹೀಗಾಗಿ ಪೊಲೀಸ್‌ ಸ್ಟೇಷನ್‌ ಮುಂದೆ ಚುನಾವಣೆ ಮುಂದೂಡಿ ಎಂದು ಪ್ರತಿಭಟನೆ ಮಾಡಿದ್ದಾರೆ. ಆರ್‌.ಆರ್‌.ನಗರದಲ್ಲಿ ಬಿಜೆಪಿ 40 ರಿಂದ 50 ಸಾವಿರ ಅಂತರದಲ್ಲಿ ಗೆಲ್ಲಲಿದೆ. ಮುನಿರತ್ನ ಕಾಂಗ್ರೆಸ್‌ನಲ್ಲಿದ್ದಾಗ ಕಾಂಗ್ರೆಸ್‌ ಸಂಸ್ಕೃತಿಯಲ್ಲಿ ಚುನಾವಣೆ ಮಾಡಿದ್ದಾರೆ.ಈಗ ಬಿಜೆಪಿಯಲ್ಲಿದ್ದು, ಬಿಜೆಪಿ ಸಂಸ್ಕೃತಿಯಂತೆ ಚುನಾವಣೆ ಮಾಡುತ್ತಿದ್ದಾರೆ ಎಂದು ಸಚಿವ ಆರ್‌.ಅಶೋಕ್‌ ತಿಳಿಸಿದರು.

ಸೇನಾಪಡೆ ನಿಯೋಜನೆಗೆ ಪತ್ರ :  ಚುನಾವಣಾ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ತೇಜೋ ವಧೆ ಮಾಡುವುದು ಮಾಮೂಲಾಗಿದೆ. ಚುನಾವಣೆಯಲ್ಲಿ ರಾಜಕೀಯ ದ್ವೇಷವಿರಲಿ ಅದು ವೈಯಕ್ತಿಕ ದ್ವೇಷಕ್ಕೆ ಪರಿವರ್ತನೆಯಾಗುವುದು ಬೇಡ. ಶಾಂತಿಯುತ ಮತದಾನಕ್ಕೆ ಅರೆ ಮಿಲಿಟರಿ ಪಡೆ ಸಾಲದು ಸೇನಾ ಪಡೆಯನ್ನು ನಿಯೋಜಿಸಬೇಕೆಂದು ಕೇಂದ್ರ ಹಾಗೂ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಮುನಿರತ್ನ ತಿಳಿಸಿದರು.

ಪೊಲೀಸರಿಂದ ಭದ್ರತೆ  : ಆರ್‌.ಆರ್‌.ನಗರ ಉಪ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಚುನಾವಣೆ ಶಾಂತವಾಗಿ ನಡೆಯಬೇಕು. ಮತದಾರರು ನಿರ್ಭಯವಾಗಿ ಮತಚಲಾಯಿಸುವ ವಾತಾವರಣ ನಿರ್ಮಿಸಬೇಕು. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ನಿಯಂತ್ರಿಸುವ ವಿಚಾರದಲ್ಲಿ ಪೊಲೀಸರು ಕ್ರಮಕೈಗೊಳ್ಳುತ್ತಾರೆ. ಚುನಾವಣಾ ಆಯೋಗ ಮೇಲುಸ್ತುವಾರಿ ವಹಿಸಿಕೊಂಡಿದೆ. ಸಣ್ಣ-ಪುಟ್ಟ ಸಂಘರ್ಷ ಆದರೂ ಗಂಭೀರವಾಗಿ ತೆಗೆದುಕೊಂಡು ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಹೇಳಿದರು.

ಸರ್ವೀಸ್‌ ಪ್ರೊವೈಡರ್‌ಗಳೇ ಮೀರ್‌ ಸಾಧಿಕ್‌ಗಳು :

ಬೆಂಗಳೂರು: ಸರ್ವೀಸ್‌ ಪ್ರೊವೈಡರ್‌ ಮಿಸ್ಟರ್‌ಗಳೇ ಮೀರ್‌ ಸಾಧಿಕ್‌ಗಳು ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಕಿಡಿಕಾರಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವೀಸ್‌ ಪ್ರೊವೈಡರ್‌ ಯಾರು ಎಂದು ಎಲ್ಲರಿಗೂ ತಿಳಿದಿದೆ. ಆ ಮಿಸ್ಟರ್‌ಗಳೇ ನಿಜವಾದ ಮೀರ್‌ ಸಾಧಿಕ್‌ಗಳೂ ಕೂಡಾ ಆಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ವ್ಯಕ್ತಿ ಆಧಾರಿತ ರಾಜಕಾರಣ ಬಿಟ್ಟು ಪಕ್ಷ ಸಿದ್ಧಾಂತದ ಮೇಲೆ ರಾಜಕಾರಣ ಮಾಡಿದರೆ ಅರ್ಥವಿರುತ್ತದೆ. ಕೆಲವರು ನಾನು ಆಡಿದ್ದೇ ಆಟ ಎಂಬ ಮನೋ ಸ್ಥಿತಿಯಲ್ಲಿದ್ದು, ಅವರಿಗೆ ಲೆಕ್ಕ ಕೇಳುವವರೇ ಇಲ್ಲದಂತಾಗಿದೆ. ಜನರಿಗೆ ಸರಿಯಾಗಿ ಉತ್ತರ ಹೇಳದೆ ಚುನಾವಣೆಯಲ್ಲಿ ಗೆದ್ದು

ಬಂದಿದ್ದಾರೆ. ಅವರು ಎಲ್ಲಿಂದ ಬಂದಿದ್ದರು?ಹೇಗಿದ್ದವರು ಹೇಗಾದರು? ಎಂಬುದಕ್ಕೆ ಲೆಕ್ಕ ಬೇಕು. ಇನ್ನು ಮುಂದೆ ಅವರ ಆಟ ನಡೆಯುವುದಿಲ್ಲ. ಎಲ್ಲದಕ್ಕೂ ಒಂದು ಇತಿಮಿತಿ ಇರಬೇಕೆಂದು ಎಂದು ಪರೋಕ್ಷವಾಗಿ ಡಿಕೆಶಿ ಹಾಗೂ ಸುರೇಶ್‌ ಅವರ ಹೆಸರು  ಹೇಳದೆ ವಾಗ್ಧಾಳಿ ನಡೆಸಿದರು.

ತಾಯಿಗೆ ದ್ರೋಹ ಬಗೆಯುವುದು ಒಂದೇ ಪಕ್ಷಕ್ಕೆ ಮೋಸ ಮಾಡುವುದು ಒಂದೇ. ಇಂಥವರು ಸಾರ್ವಜನಿಕ ಜೀವನದಲ್ಲಿ ಇರಲು ಯೋಗ್ಯರಲ್ಲ. ನಂಬಿದ ಪಕ್ಷಕ್ಕೆ ಮೋಸ ಮಾಡಿದವರನ್ನು ಮೀರ್‌ ಸಾಧಿಕರು ಎನ್ನದೆ ಇನ್ನೇನನ್ನಬೇಕು ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.