The tiger that attacked the farmers was captured
ಗುಂಡ್ಲುಪೇಟೆ: ರೈತರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ
Team Udayavani, Jul 3, 2022, 12:53 PM IST
ಗುಂಡ್ಲುಪೇಟೆ (ಚಾಮರಾಜನಗರ): ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಲಕ್ಕಿಪುರ ಗ್ರಾಮಕ್ಕೆ ಹೊಂದಿಕೊಂಡ ಜಮೀನೊಂದರಲ್ಲಿ ಇಬ್ಬರು ರೈತರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಸುಮಾರು 10 ವರ್ಷದ ಹೆಣ್ಣು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಜಿಟಿಜಿಟಿ ಮಳೆ ನಡುವೆಯೂ ಆನೆಗಳ ಸಹಾಯದಿಂದ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಭಾನುವಾರ ಬೆಳಗ್ಗೆ ಸೆರೆ ಹಿಡಿದಿದ್ದಾರೆ.
ಹುಲಿಯು ಶನಿವಾರ ಗೋಪಾಲಪುರ ಗ್ರಾಮದ ಗವಿಯಪ್ಪ ಮತ್ತು ರಾಜಶೇಖರ್ ಹಾಗು ಒಂದು ಹಸುವಿನ ಮೇಲೆ ದಾಳಿ ನಡೆಸಿ ಶಿವಬಸಪ್ಪ ಎಂಬ ರೈತ ಬಾಳೆ ಜಮೀನಿನಲ್ಲಿ ಅಡಗಿ ಕುಳಿತಿತ್ತು. ನಂತರ ಭಾನುವಾರ ಬೆಳಗ್ಗೆ 6 ಗಂಟೆಗೆ ಅರಣ್ಯ ಇಲಾಖೆ ಸಿಬ್ಬಂದಿ ಅಭಿಮನ್ಯು ಮತ್ತು ಶ್ರೀಕಂಠ ಎಂಬ ಎರಡು ಆನೆಗಳ ಮೂಲಕ ಕೂಬಿಂಗ್ ಆರಂಭಿಸಿ, ಸತತ ಮೂರು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಹುಲಿಗೆ ಅರವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಸೆರೆ ಹಿಡಿದಿದ್ದಾರೆ.
More Videos More
Top News
Latest Additions
Woman hurls toilet cleaner on man during his pre-wedding ceremony in UP
JP Hegde promises livelihood boost for fishermen and farmers
Terrorism protected in Kerala during Congress, Left rule: Amit Shah
Former faculty of Kalakshetra arrested for sexual assault of ex-students
Ladakh’s lifeline reopens: Leh-Manali highway restored after five-month closure