45 ಸಾವಿರ ಕೋಟಿ ಸಾಲಮನ್ನಾ ವಾಸ್ತವವಲ್ಲ


Team Udayavani, Jan 31, 2019, 9:48 AM IST

31-january-20.jpg

ಹಾವೇರಿ: ರಾಜ್ಯ ಸರ್ಕಾರ 45,000 ಕೋಟಿ ರೂ. ರೈತರ ಸಾಲಮನ್ನಾ ಮಾಡಲಾಗಿದೆ ಎಂದು ಘೋಷಣೆ ಮಾಡಿಕೊಳ್ಳುವ ಮೂಲಕ ಜನರ ದಾರಿ ತಪ್ಪಿಸುತ್ತಿದೆ ಎಂದು ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಿವಾನಂದ ಗುರುಮಠ ಆರೋಪಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಹೋದ ಬಂದಲೆಲ್ಲ ತಾವು 45 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿರುವುದಾಗಿ ಹೇಳುತ್ತಿದ್ದಾರೆ. ಆದರೆ, ವಾಸ್ತವದಲ್ಲಿ ಎಷ್ಟು ಕೋಟಿ ರೂ. ಸಾಲಮನ್ನಾ ಆಗಿದೆ? ಎಷ್ಟು ರೈತರ ಸಾಲಮನ್ನಾ ಆಗಿದೆ ಎಂಬ ನಿಖರ ಮಾಹಿತಿಯೇ ಇಲ್ಲ ಎಂದರು.

ಈಗಷ್ಟೇ ಬ್ಯಾಂಕ್‌ಗಳಲ್ಲಿ ರೈತರಿಂದ ಸಾಲಮನ್ನಾಕ್ಕಾಗಿ ಅರ್ಜಿ, ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ. ರೈತರಿಂದ ಮಾಹಿತಿ ಸಂಗ್ರಹಿಸಿದ ಬಳಿಕ, ಸರ್ಕಾರ ಸಾಲಮನ್ನಾಕ್ಕೆ ವಿಧಿಸಿರುವ ಷರತ್ತುಗಳನ್ನು ಅನ್ವಯಿಸಿ ಪರಿಶೀಲನೆ ನಡೆಯಬೇಕಾಗಿದೆ. ಪರಿಶೀಲನೆ ಬಳಿಕ ರಾಜ್ಯದ ಎಷ್ಟು ರೈತರಿಗೆ, ಎಷ್ಟು ರೂ.ಗಳ ಸಾಲಮನ್ನಾ ಆಗುತ್ತದೆ ಎಂಬ ನಿಖರ ಮಾಹಿತಿ ಸಿಗುತ್ತದೆ. ಆಗ ಮಾತ್ರ ಸರ್ಕಾರ ಇಷ್ಟು ಕೋಟಿ ಸಾಲಮನ್ನಾ ಆಗಿದೆ ಎಂದು ಹೇಳಿಕೊಳ್ಳಬಹುದು. ಆದರೆ, ಈಗಲೇ ಸರ್ಕಾರ, 45 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಎಂದು ಹೇಳುತ್ತಿರುವುದು ಸೂಕ್ತವಲ್ಲ ಎಂದರು.

ಸಾಲಮನ್ನಾ ಹಣವನ್ನು ಬ್ಯಾಂಕ್‌ಗಳಿಗೆ ಮೂರು ವರ್ಷಗಳ ವರೆಗೆ ಕಂತುಗಳಲ್ಲಿ ಕೊಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿರುವುದರಿಂದ ಬ್ಯಾಂಕ್‌ಗಳು ರೈತರಿಗೆ ಮರು ಸಾಲ ಕೊಡಲು ನಿರಾಕರಿಸುತ್ತಿವೆ. ಇದೇ ರೀತಿ ಸರ್ಕಾರವು ಕೈಸಾಲ ಸಹ ಮನ್ನಾ ಮಾಡುವುದಾಗಿ ಹೇಳುತ್ತಿದ್ದು, ಕೈಸಾಲ ಕೊಡುವವರೂ ಸಾಲ ಕೊಡುವುದನ್ನು ನಿಲ್ಲಿಸಿದ್ದಾರೆ. ಇದರಿಂದ ರೈತನ ಆರ್ಥಿಕ ಚಟುವಟಿಕೆ ಸ್ಥಗಿತಗೊಳ್ಳುವ ಅಪಾಯವಿದೆ. ಆದ್ದರಿಂದ ಸರ್ಕಾರ ಈ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದರು.

ಇಂಗ್ಲಿಷ್‌ ಶಾಲೆ ಬೇಕು: ರಾಜ್ಯದಲ್ಲಿ ಒಂದು ಸಾವಿರ ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನಾಗಿ ಮಾರ್ಪಾಡು ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಜಾಗತೀಕರಣದ ಇಂದಿನ ದಿನದಲ್ಲಿ ಇಂಗ್ಲಿಷ್‌ ಕಲಿಕೆ ಅತ್ಯವಶ್ಯವಾಗಿದ್ದು, ಬಡ ವರ್ಗದ ಮಕ್ಕಳೂ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಪಡೆಯುವಂತಾಗಲು ಸರ್ಕಾರಿ ಕಾನ್ವೆಂಟ್ ಶಾಲೆಗಳ ಅತ್ಯಗತ್ಯವಿದೆ ಎಂದರು.

ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸಲು ವಿರೋಧಿಸುವ ಹಿಂದೆ ಹಲವು ಷಡ್ಯಂತ್ರಗಳಿವೆ. ಬಹುತೇಕ ರಾಜಕಾರಣಿಗಳು ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿಕೊಂಡಿದ್ದು, ಸರ್ಕಾರ ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭಿಸಿದರೆ ತಮ್ಮ ಸಂಸ್ಥೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸಬೇಕಾದೀತು ಎಂಬ ಆತಂಕದಿಂದ ಸರ್ಕಾರಿ ಕಾನ್ವೆಂಟ್ ಶಾಲೆ ಸ್ಥಾಪನೆಗೆ ರಾಜಕಾರಣಿಗಳು ವಿರೋಧಿಸುತ್ತಿದ್ದಾರೆ. ಇನ್ನು ಸಾಹಿತಿಗಳು ಮೇಲ್ನೊಟಕ್ಕೆ ಇಂಗ್ಲಿಷ್‌ ಶಾಲೆ ಆರಂಭಕ್ಕೆ ವಿರೋಧಿಸುತ್ತಿದ್ದಾರೆ. ವಾಸ್ತವದಲ್ಲಿ ಅವರ ಮಕ್ಕಳು, ಮೊಮ್ಮಕ್ಕಳನ್ನು ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೇ ಕಳುಹಿಸುತ್ತಿದ್ದಾರೆ. ತಮ್ಮ ಕಥೆ, ಕಾದಂಬರಿ ಓದಲು ಜನರು ಇಲ್ಲದಂತಾಗುತ್ತದೆ ಎಂಬ ಆತಂಕ ಅವರದ್ದಾಗಿದ್ದು ಇದಕ್ಕಾಗಿ ಅವರು ಸರ್ಕಾರಿ ಇಂಗ್ಲಿಷ್‌ ಶಾಲೆ ಆರಂಭಕ್ಕೆ ವಿರೋಧಿಸುತ್ತಿದ್ದಾರೆ ಎಂದರು.

ಇಂದು ವಿದ್ಯಾರ್ಥಿ ಪಾಲಕರೆಲ್ಲರೂ ಇಂಗ್ಲಿಷ್‌ನ ಮಹತ್ವ ಅರಿತಿದ್ದು ಎಷ್ಟೇ ಕಷ್ಟವಾದರೂ ಮಕ್ಕಳನ್ನು ಕಾನ್ವೆಂಟ್‌ಗೆ ಕಳುಹಿಸುತ್ತಿದ್ದಾರೆ. ಒಂದು ವೇಳೆ ಸಾಹಿತಿಗಳು, ಕೆಲ ಪಟ್ಟಭದ್ರರು ಗೋಕಾಕ ಮಾದರಿ ಚಳವಳಿ ಮಾಡಲು ಮುಂದಾದರೆ ಅದು ಯಶಸ್ವಿ ಆಗುವುದಿಲ್ಲ. ಏಕೆಂದರೆ ಅದಕ್ಕೆ ವಿದ್ಯಾರ್ಥಿ ಪಾಲಕರೇ ಬೆಂಬಲಿಸುವುದಿಲ್ಲ. ಸರ್ಕಾರ ಇಂಗ್ಲಿಷ್‌ ಮಾಧ್ಯಮ ಆರಂಭಿಸಿದರೆ ಬಡವರಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಿಸಿದರು. ಸಂಘಟನೆಯ ಪ್ರಮುಖರಾದ ಶಿವಯೋಗಿ ಬೆನ್ನೂರು, ಸುರೇಶ ಸಜ್ಜನ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.