ಸ್ಪರ್ಧಾ ಮನೋಭಾವ ಬೆಳೆಸಿದರೆ ಆತ್ಮವಿಶ್ವಾಸ ಹೆಚ್ಚಳ
Team Udayavani, May 22, 2017, 4:27 PM IST
ಧಾರವಾಡ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸಿದರೆ ಅವರಲ್ಲಿ ಆತ್ಮ ವಿಶ್ವಾಸ ಹೆಚ್ಚಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಜೆಎಸ್ಎಸ್ ಮಂಜುನಾಥೇಶ್ವರ ಐಟಿಐ ಹಾಗೂ ಧಾರವಾಡ ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಗಳ ಆಶ್ರಯದಲ್ಲಿ ಜನತಾ ಶಿಕ್ಷಣ ಸಮಿತಿ ಆವರಣದಲ್ಲಿ ಆಯೋಜಿಸಿದ್ದ ಸ್ಕಿಲ್ ಎಕ್ಸಪೋ 2017ರ ಸಮಾರೋಪ ಸಮಾರಂಭದಲ್ಲಿ ವಸ್ತು ಪ್ರದರ್ಶನದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಪ್ರಥಮ ಬಾರಿಗೆ ಈ ರೀತಿ ಐಟಿಐ ಕಾಲೇಜುಗಳ ತಾಂತ್ರಿಕ ಪ್ರದರ್ಶನ ಏರ್ಪಡಿಸಿರುವುದಕ್ಕೆ ಜೆಎಸ್ಎಸ್ ಶಿಕ್ಷಣ ಸಂಸ್ಥೆಯನ್ನು ಅಭಿನಂದಿಸಿದ ಹೊರಟ್ಟಿ, ಐಟಿಐ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ ಹೆಚ್ಚಾಗಿದೆ. ಪಾಲಕರು ಕೇವಲ ಪ್ರತಿಷ್ಠೆಗೆ ಕ್ಕಳಿಗೆ ಉಪಯೋಗವಿಲ್ಲದ ಶಿಕ್ಷಣ ನೀಡುವುದರ ಬದಲಿಗೆ ಅವರ ಪ್ರತಿಭೆಯನ್ನಾಧರಿಸಿ ಇಂತಹ ತಾಂತ್ರಿಕ ಕೋರ್ಸುಗಳಿಗೆ ಪ್ರವೇಶ ದೊರಕಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ವಿತ್ತಾಧಿಕಾರಿ ಡಾ|ಅಜಿತ ಪ್ರಸಾದ ಮಾತನಾಡಿ, ಕೇವಲ ಪಠ್ಯದ ಅಧ್ಯಯನದಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ. ಪಠ್ಯೇತರ ಚಟುವಟಿಕೆಗಳಲ್ಲಿ ಅವರು ಪಾಲ್ಗೊಂಡಾಗ ಮಾತ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧಿಸಲು ಸಾಧ್ಯವಿದೆ.
ಐಟಿಐ ವಿದ್ಯಾರ್ಥಿಗಳಿಗೆ ತರಬೇತಿ ವಸ್ತು ಪ್ರದರ್ಶನ, ಉದ್ಯೋಗ ಮೇಳ ಆಯೋಜಿಸಿ ಅವರನ್ನು ಉತ್ತೇಜಿಸುವ ಕೆಲಸವಾಗಬೇಕು ಎಂದರು. ಧಾರವಾಡ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ರವೀಂದ್ರ ಪಿ. ದ್ಯಾಬೇರಿ ಮಾತನಾಡಿ, 35 ಕಾಲೇಜಿನ 125 ಪೊಜೆಕ್ಟ್ಗಳು ಇದರಲ್ಲಿ ಭಾಗವಹಿಸಿದ್ದು, ವಿವಿಧ 12 ಟ್ರೇಡ್ ಗಳಲ್ಲಿ ಒಟ್ಟು 36 ಬಹುಮಾನಗಳನ್ನು ನೀಡಲಾಗಿದೆ ಎಂದರು.
ಸ್ಕಿಲ್ ಎಕ್ಸಪೋ 2017ರ ಸಂಯೋಜಕ ಮಹಾವೀರ ಉಪಾಧ್ಯೆ, ಉದ್ಯೋಗ ಮತ್ತು ತರಬೇತಿ ಇಲಾಖೆಯ ಬೆಳಗಾವಿ ವಿಭಾಗ ಹುಬ್ಬಳ್ಳಿಯ ಜಂಟಿ ನಿರ್ದೇಶಕ ಪಿ.ರಮೇಶ್ಯ, ಸಹಾಯಕ ನಿರ್ದೇಶಕ ಈಶ್ವರಪ್ಪ ದ್ಯಾಮನಗೌಡರ, ಬಸವಪ್ರಭು ಹಿರೇಮಠ, ಸರಕಾರಿ ಐಟಿಐ ಕಾಲೇಜು ಹುಬ್ಬಳ್ಳಿಯ ಆರ್.ಪಿ ಶಿಗ್ಗಾಂವಕರ್ ಇದ್ದರು. ಜಿನದತ್ತ ಹಡಗಲಿ ನಿರೂಪಿಸಿದರು. ವಾಣಿ ಪುರೋಹಿತ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ