ಚಿಂತಾಮಣಿ ಮಾರುಕಟ್ಟೆಯಲ್ಲಿ ಕಿ.ಲೋ ಬೀನ್ಸ್‌ 110 ರೂ.


Team Udayavani, Mar 30, 2019, 3:12 PM IST

kilo-bii

ಚಿಂತಾಮಣಿ: ಸತತ ನಾಲ್ಕೈದು ವರ್ಷಗಳಿಂದ ತೀವ್ರ ಬರಗಾಲಕ್ಕೆ ತುತ್ತಾಗಿ ರೈತಾಪಿ ಕೂಲಿ ಕಾರ್ಮಿಕರ ಜೀವನ ಕಮರಿ ಹೋಗುತ್ತಿರುವ ಬೆನ್ನಲ್ಲೇ ತಾಲೂಕಿನಲಿ ಜನರ ಅಗತ್ಯ ವಸ್ತುಗಳ ಬೆಲೆ ಮಾರುಕಟ್ಟೆಯಲ್ಲಿ ಗಗನಕ್ಕೇರುತ್ತಲ್ಲೇ ಇವೆ.

ವಾಣಿಜ್ಯ ನಗರಿ ಚಿಂತಾಮಣಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ದರ ಸಮರ ಮುಂದುವರೆಯುತ್ತಿರುವ ವೇಳೆಯೇ ಕಳೆದ 15 ದಿನಗಳ ಹಿಂದೆಯಷ್ಟೇ 1 ಕಿ.ಲೋ 30 ರಿಂದ 40 ರೂ.ಗೆ ಮಾರಾಟವಾಗುತ್ತಿದ್ದ ಬೀನ್ಸ್‌ ಇದೀಗ 110 ರ ಗಡಿ ದಾಟಿರುವುದು ಹಾಗೂ ಇತರೆ ತರಕಾರಿಗಳ ಬೆಲೆಯೂ ಸಹ ಗಗನಕ್ಕೇರಿರುವುದು ಸಾರ್ವಜನಿಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ತರಕಾರಿ ಬೆಳೆಗಳಲ್ಲಿಯೇ ಬೀನ್ಸ್‌ ಪ್ರಮುಖವಾದದ್ದು. ಆದರೆ ಸಾರ್ವಜನಿಕರು ಹೆಚ್ಚಾಗಿ ಬಳಸುವ ಬೀನ್ಸ್‌ನ ಬೆಲೆ ನಾಲ್ಕು ಪಟ್ಟು ದಿಢೀರ್‌ ಏರಿಕೆ ಆಗಿರುವುದು ಗ್ರಾಹಕರನ್ನು ಕಂಗಾಲಾಗಿಸಿದೆ.

ಕಿ.ಲೋ ಬೀನ್ಸ್‌ 110 ರೂ.: ಸದ್ಯ ಮಾರುಕಟ್ಟೆಯಲ್ಲಿ ಬೀನ್ಸ್‌ ಸಿಗುವುದೇ ಅಪರೂಪ ಎನ್ನುವಂತಾಗಿದೆ. ಸಿಕ್ಕರೂ ಕಿ.ಲೋ ಬೀನ್ಸ್‌ಗೆ 110 ರಿಂದ 120 ರೂ ಹಣ ಕೊಡಲೇ ಬೇಕು. ಅಷ್ಟರ ಮಟ್ಟಿಗೆ ಬೀನ್ಸ್‌ನ ಬೆಲೆ ಹೆಚ್ಚಳವಾಗಿರುವುದು ಇದೇ ಮೊದಲು ಎಂಬ ಮಾತು ಚಿಲ್ಲರೆ ವ್ಯಾಪಾರಸ್ಥರಿಂದ ಕೇಳಿ ಬರುತ್ತಿದೆ. ಎಪಿಎಂಸಿಗೆ ಅರ್ಧ ಗಂಟೆ ಲೇಟಾಗಿ ಹೋದರೆ ನಮಗೆ ಬೀನ್ಸ್‌ ಸಿಗುವುದಿಲ್ಲ ಎನ್ನುತ್ತಾರೆ ತರಕಾರಿ ಮಾರಾಟ ಮಾಡುವ ಚಿಲ್ಲರೆ ವ್ಯಾಪಾರಸ್ಥರು.

ಗಗನಕ್ಕೇರಿದ ತರಕಾರಿ ಬೆಲೆ: ಜಿಲ್ಲೆಯಲ್ಲಿ ನೀರಿನ ಕೊರತೆಯಲ್ಲೇ ರೈತರು ಬೆಳೆದ ತರಕಾರಿ ಬೆಳೆಗೆ ಬಂಪರ್‌ ಬೆಲೆ ಸಿಕ್ಕಿದೆ. ಚಿಂತಾಮಣಿ ಮಾರುಕಟ್ಟೆಯಲ್ಲಿ ತೊಂಡೆಕಾಯಿ 50 ರೂ., ಟೊಮೆಟೋ 30, ಕ್ಯಾರೆಟ್‌ 40, ಹೀರೆಕಾಯಿ 60, ಹಸಿ ಬಟಾಣಿ 100,

ಬೆಂಡೆಕಾಯಿ 40, ಬದನೆ 50 ಕ್ಕೆ ಮಾರಾಟವಾದರೆ ಪ್ರತಿ ನಿತ್ಯ ಬಳಸುವ ಕೊತ್ತಂಬರಿ ಸೊಪ್ಪು ಒಂದು ಕಟ್ಟು 35 ರೂ. ಆದರೆ ಸೊಪ್ಪುಗಳಲ್ಲಿ ದಂಟು ಸೊಪ್ಪು 20, ಮೆಂತ್ಯ 25, ಸಬ್ಬಕ್ಕಿ 20, ಪುದಿನ 20 ರೂ.ಗೆ ಮಾರಾಟವಾಗುತ್ತಿದ್ದು, ಪ್ರಸ್ತುತ ಸೊಪ್ಪು ಮತ್ತು ತರಕಾರಿ ಬೆಳೆದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.

ಉತ್ಪಾದನೆ ಕುಸಿತ: ಮಾರುಕಟ್ಟೆಯಲ್ಲಿ ಬೀನ್ಸ್‌ಗೆ ಬಂಪರ್‌ ಬೆಲೆ ಬರಲು ಮುಖ್ಯ ಕಾರಣ ಬರ ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸತತ ನಾಲ್ಕೆçದು ವರ್ಷಗಳಿಂದ ಕಾಡುತ್ತಿರುವ ಮಳೆ ಕೊರತೆಯಿಂದಾಗಿ ಈಗಾಗಲೇ ಅಂತರ್ಜಲ ಬತ್ತಿ ಹೋಗಿ ಕೊಳವೆ ಬಾವಿಗಳು ಸ್ಥಗಿತಗೊಂಡಿರುವ ಪರಿಣಾಮ ತೋಟಗಳು ಒಣಗಲಾರಂಭಿಸಿವೆ.

ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆಗಳು ಸಿಗದೆ ಕಂಗಾಲಾಗಿರುವ ಅನ್ನದಾತ ತರಕಾರಿ ಬೆಳೆಯುವುದನ್ನು ಕೈಬಿಟ್ಟಿದ್ದಾನೆ. ಪರಿಣಾಮ ಗ್ರಾಹಕರು ಅತಿ ಹೆಚ್ಚು ಇಷ್ಟಪಡುವ ಬೀನ್ಸ್‌ ಇದೀಗ ಮಾರುಕಟ್ಟೆಯಲ್ಲಿ ಗಗನ ಕುಸುಮವಾಗಿದೆ.

ಜನ ಸಾಮಾನ್ಯರಿಗೆ ಹೊರೆ: ಬೀನ್ಸ್‌ ಬೆಲೆ ಹೆಚ್ಚಳ ಸಹಜವಾಗಿಯೇ ಜನ ಸಾಮಾನ್ಯರಿಗೆ, ರೈತಾಪಿ ಕೂಲಿ ಕಾರ್ಮಿಕರಿಗೆ ಹೊರೆಯಾಗಿದೆ. ಇನ್ನೂ ಹೋಟೆಲ್‌ ಮಾಲೀಕರಿಗೂ ಬೆಲೆ ಹೆಚ್ಚಳ ತೀವ್ರ ಕಸಿವಿಸಿ ಉಂಟು ಮಾಡಿದೆ. ಸದ್ಯ ಮದುವೆ ಮತ್ತಿತರ ಶುಭ, ಸಮಾರಂಭಗಳು ಹೆಚ್ಚಾಗಿ ನಡೆಯುವುದರಿಂದ ಸಹಜವಾಗಿಯೇ ತರಕಾರಿ ಬೆಳೆಗಳು ಮಾರ್ಚ್‌ನಿಂದ ಮೇ ತಿಂಗಳವರೆಗೂ ಇದೇ ರೀತಿಯ ಬೆಲೆ ಇರುತ್ತದೆ ಎಂದು ಹೇಳುತ್ತಾರೆ ಹೋಟೆಲ್‌ ಮಾಲಿಕ ಮಂಜುನಾಥ.

ಕಿ.ಲೋ ಬೀನ್ಸ್‌ ಮಾರುಕಟ್ಟೆಯಲ್ಲಿ 110 ರೂ. ಆಗಿದೆ. ಅದೇ 110 ಕೊಟ್ಟರೆ ಬೇರೆ ತರಕಾರಿ ಎರಡು, ಮೂರು ಕೆಜಿಯಷ್ಟು ಖರೀದಿ ಮಾಡಬಹುದು. ಸದ್ಯ ಬೇಸಿಗೆಯಿಂದಾಗಿ ಎಲ್ಲಾ ತರಿಕಾರಿಗಳ ಬೆಲೆಗಳು ಏರಿಕೆಯಾಗುತ್ತಿವೆ. ಇದರಿಂದ ತರಕಾರಿ ಕೊಂಡುಕೊಳ್ಳುವುದು ಕಷ್ಟಕರವಾಗಿದೆ.
-ಆದಿಲಕ್ಷ್ಮೀ, ಗೃಹಿಣಿ ಟ್ಯಾಂಕ್‌ಬಂಡ್‌ ರಸ್ತೆ

ಬೇಸಿಗೆ ಪ್ರಾರಂಭವಾದ ಪರಿಣಾಮ ತರಕಾರಿ ಬೆಳೆಗಳು ಉತ್ಪಾದನೆ ತೀರ ಕಡಿಮೆಯಾಗಿದ್ದು, ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದ್ದರಿಂದ ರೈತರಿಗೆ ಸ್ವಲ್ಪ ಲಾಭದಾಯಕವೇನಿಸಿದರೂ ಗ್ರಾಹಕರಿಗೆ ತೊಂದರೆಯಾಗಿದೆ.
-ಕಿರಣ್‌ ಕುಮಾರ್‌, ಎಪಿಎಂಸಿ ಮಾರುಕಟ್ಟೆಯ ಕಾರ್ಯದರ್ಶಿ

ತರಕಾರಿ ಬೆಲೆ ಗಗನಕ್ಕೇರಿರುವುದರಿಂದ ಗ್ರಾಹಕರು ಗೋಳಾಡುತ್ತಾರೆ. ಬೆಲೆ ಜಾಸ್ತಿ ಎಂದು ಹಿಂದಿರುಗುತ್ತಾರೆ. ಇದರಿಂದ ಖರೀದಿಸಿದ ತರಕಾರಿ ಉಳಿಯುತ್ತದೆಂಬ ಆತಂಕದಿಂದ ಲಾಭವಿಲ್ಲದಿದ್ದರೂ ಮಾರಾಟ ಮಾಡುವ ದುಸ್ಥಿತಿ ಎದುರಾಗಿದೆ.
-ಗೋಪಿ, ತರಕಾರಿ ವ್ಯಾಪಾರಸ್ಥ

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.