‘ಜ್ಞಾನದೀಪ’ದಲ್ಲಿ ರಂಜಿಸಿದ ವಿದ್ಯಾರ್ಥಿಗಳ ಸಾಹಸ ಪ್ರದರ್ಶನ
Team Udayavani, Apr 13, 2018, 11:12 AM IST
ಸುಳ್ಯ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮ, ಸಾಹಸ ಪ್ರದರ್ಶನ ಮನರಂಜಿಸಿದವು.
ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಅಧ್ಯಕ್ಷ ದಿವಾಕರ ಎರ್ಮೆಟ್ಟಿ ಧ್ವಜಾರೋಹಣ ಮಾಡಿದರು. ಜ್ಞಾನದೀಪ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಭಟ್ ತಳೂರು ಸಭಾಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ದಯಾನಂದ ಕೆ.ಎನ್., ದುಗ್ಗಪ್ಪ ಮಾಸ್ತರ್ ಕುಳ್ಳಂಪಾಡಿ ಉಪಸ್ಥಿತರಿದ್ದರು. ಅನಂತರ ಶಾಲಾ ವಿದ್ಯಾರ್ಥಿಗಳಿಂದ ಯಕ್ಷಗಾನ ನಡೆಯಿತು.
ಸಂಜೆ ನಡೆದ ಹೊನಲು ಬೆಳಕಿನ ಸಾಹಸ, ಯೋಗ, ಬಯಲು ರಂಗ ಪ್ರದರ್ಶನ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನಿರ್ದೇಶಕ ಅಕ್ಷಯ್ ಕೆ.ಸಿ ಉದ್ಘಾಟಿಸಿ, ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಭಾರತೀಯ ಪರಂಪೆಯ ಶಿಕ್ಷಣ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಎಲಿಮಲೆ ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ನೀಡುತ್ತಿರುವ ಶಿಕ್ಷಣ ವಿದ್ಯಾರ್ಥಿಗಳನ್ನು ಸದೃಢ ವ್ಯಕ್ತಿಯನ್ನಾಗಿ ರೂಪಿಸಲು ಪೂರಕ ಎಂದರು.