ಆಗ್ರಾ: ಸೆಪ್ಟಿಕ್ ಟ್ಯಾಂಕ್ ವಿಷಾನಿಲಕ್ಕೆ ಒಂದೇ ಕುಟುಂಬದ ಮೂವರ ಸಾವು
Team Udayavani, May 30, 2018, 11:39 AM IST
ಆಗ್ರಾ : ನಗರಕ್ಕೆ ಸಮೀಪದ ಬರ್ಹಾನ್ ಪಟ್ಟಣದಲ್ಲಿ ಸೆಪ್ಟಿಕ್ ಟ್ಯಾಂಕ್ನಿಂದ ವಿಷಾನಿಲ ಸೋರಿದ ಕಾರಣ ಒಂದೇ ಕುಟುಂಬದ ಮೂವರು ಮೃತಪಟ್ಟು ಇತರ 8 ಮಂದಿ ತೀವ್ರವಾಗಿ ಅಸ್ವಸ್ಥರಾದ ಘಟನೆ ವರದಿಯಾಗಿದೆ.
ತರಕಾರಿ ವ್ಯಾಪಾರಿ ಹೀರಾ ಸಿಂಗ್ ಅವರಿಗೆ ಸೇರಿದ ಸೆಪ್ಟಿಕ್ ಟ್ಯಾಂಕ್ ಕ್ಲೀನ್ ಮಾಡುತ್ತಿದ್ದ ವೇಳೆ ಅದರಿಂದ ಹೊರಹೊಮ್ಮಿದ ವಿಷಾನಿಲ ಅವರ ಕುಟುಂಬದ ಮೂವರನ್ನು ಬಲಿ ಪಡೆಯಿತು ಎಂದು ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಅತುಲ್ ಸೋನ್ಕಾರ್ ಮಾಹಿತಿ ನೀಡಿದರು.
ವಿಷಾನಿಲ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿರುವ ಎಂಟು ಮಂದಿಯನ್ನು ನಿನ್ನೆ ಮಂಗಳವಾರ ತಡ ರಾತ್ರಿ ಎಸ್ ಎನ್ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಸೇರಿಸಲಾಯಿತು. ಮೃತಪಟ್ಟ ಮೂವರೆಂದರ ಹೀರಾ ಸಿಂಗ್, ಆತನ ಇಬ್ಬರು ಪುತ್ರರಾದ ಯಶ್ಪಾಲ್ ಮತ್ತು ಹೇಮಂತ್.
ದುರ್ಘಟನೆ ನಡೆದ ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಯುವಲ್ಲಿ ವಿಳಂಬವಾಯಿತೆಂದು ನೆರೆಕರೆಯವರು ಮತ್ತು ಮೃತರ ಕುಟುಂಬ ಸದಸ್ಯರು ದೂರಿದ್ದಾರೆ. ಆಕ್ಸಿಜನ್ ವ್ಯವಸ್ಥೆ ಇರುವ ಅಂಬುಲೆನ್ಸ್ ವ್ಯಾನ್ ಒಂದೊಮ್ಮೆ ಸಕಾಲದಲ್ಲಿ ರಕ್ಷಣೆಗೆ ಬರುತ್ತಿದ್ದರೆ ಕೆಲವು ಜೀವಗಳಾದರೂ ಉಳಿಯುತ್ತಿದ್ದವು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ