Rewind 2023: ಈ ವರ್ಷ ಹಸೆಮಣೆ ಏರಿದ ತಾರೆಯರು


Team Udayavani, Dec 27, 2023, 2:33 PM IST

Rewind 2023: ಈ ವರ್ಷ ಹಸೆಮಣೆ ಏರಿದ ತಾರೆಯರು

ಕಳೆದ ಕೆಲ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಟ-ನಟಿಯರಾಗಿ ಗುರುತಿಸಿಕೊಂಡಿದ್ದ ಅನೇಕ ಸ್ಟಾರ್ 2023ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ವೃತ್ತಿ ಬದುಕಿನಲ್ಲಿ ಮಿಂಚುತ್ತಿರುವಾಗಲೇ ಹಸೆಮಣೆ ಏರುವ ಮೂಲಕ ಕನ್ನಡ ಚಿತ್ರರಂಗದ ಒಂದಷ್ಟು ತಾರೆಯರು ಅಭಿಮಾನಿಗಳಿಗೆ ಮತ್ತು ಚಿತ್ರರಂಗಕ್ಕೆ ಸ್ಪೆಷಲ್‌ ಸರ್‌ಪ್ರೈಸ್‌ ನೀಡಿದರು.

ಹೀಗೆ 2023ರಲ್ಲಿ ವಿವಾಹ ಬಂಧನಕ್ಕೆ ಒಳಗಾದವರ ಪೈಕಿ ಮೊದಲಿಗೆ ಸಿಗುವ ಹೆಸರು ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಅವರದ್ದು. ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ತಮ್ಮ ವೃತ್ತಿ ಜೀವನದಲ್ಲಿ ಬಿಝಿಯಾಗಿರುವಾಗಲೇ ಹಸೆಮಣೆ ಏರಿದರು.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆದ ಈ ತಾರಾ ಜೋಡಿಯ ಅದ್ಧೂರಿ ವಿವಾಹ ಸಮಾರಂಭದಲ್ಲಿ ಚಿತ್ರರಂಗ ಮತ್ತು ರಾಜಕೀಯ ರಂಗದ ಅನೇಕ ಗಣ್ಯರು ಹಾಜರಿದ್ದು ನೂತನ ವಧು-ವರನಿಗೆ ಶುಭ ಕೋರಿದರು.

“ಅಮರ್‌’ ಸಿನಿಮಾದ ಮೂಲಕ ನಾಯಕ ನಟನಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾಗಿರುವ ರೆಬೆಲ್‌ಸ್ಟಾರ್‌ ಅಂಬರೀಶ್‌ ಪುತ್ರ ಅಭಿಷೇಕ್‌ ಅವರ ಮದುವೆ ಅವಿವಾ ಬಿದಪ್ಪ ಜೊತೆ ನಡೆಯಿತು. ಅಭಿಷೇಕ್‌ – ಅವಿವಾ ವಿವಾಹಕ್ಕೆ ಸೂಪರ್‌ಸ್ಟಾರ್‌ ರಜನಿಕಾಂತ್‌ ಸೇರಿದಂತೆ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು, ಅಪಾರ ಅಭಿಮಾನಿಗಳು ಸಾಕ್ಷಿಯಾಗಿದ್ದರು.

ಕನ್ನಡದ ಜೊತೆಗೆ ಪರಭಾಷೆಯಲ್ಲೂ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್‌ ಪೊನ್ನಣ್ಣ ಜೋಡಿ ಈ ವರ್ಷ ವಿವಾಹ ಬಂಧನಕ್ಕೆ ಒಳಗಾದರು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸ್ನೇಹಿತರಾಗಿದ್ದ ಈ ಜೋಡಿಯ ಮದುವೆ ಕೊಡವ ಸಂಪ್ರದಾಯದಂತೆಯೇ ನೆರವೇರಿತು.

“ಮುಂಗಾರು ಮಳೆ’ ಸಿನಿಮಾ ಖ್ಯಾತಿಯ ನಾಯಕಿ ಪೂಜಾ ಗಾಂಧಿ ಉದ್ಯಮಿ ವಿಜಯ್‌ ಘೋರ್ಪಡೆ ಅವರನ್ನು ವರಿಸಿದರು. ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯ ಅನುಸಾರ, ಪೂಜಾ ಗಾಂಧಿ – ವಿಜಯ್‌ ಘೋರ್ಪಡೆ ಸರಳವಾಗಿ ವಿವಾಹವಾದರು. ಕನ್ನಡದಲ್ಲಿ “ಶಿಷ್ಯ’, “ಮಾಗಡಿ’, “ಬೆಳ್ಳಿ’, “ಏಕ್‌ ಲವ್‌ ಯಾ’, “ವೀರಂ’ ಮುಂತಾದ ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ದೀಪಕ್‌ ಫ್ಯಾಶನ್‌ ಡಿಸೈನರ್‌ ಬೃಂದಾ ಅವರನ್ನು ವಿವಾಹವಾದರು.

“ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ ಖ್ಯಾತಿಯ ತಪಸ್ವಿನಿ ಪೂಣಚ್ಚ ಅವರ ವಿವಾಹ ರಕ್ಷತ್‌ ಮುತ್ತಣ್ಣ ಅವರೊಂದಿಗೆ ನಡೆಯಿತು. ಸರಳವಾಗಿ ಕೊಡವ ಸಂಪ್ರಾಯದಾಯದಂತೆ ನಡೆದ ಇವರ ವಿವಾಹ ಸಮಾರಂಭದಲ್ಲಿ ಚಿತ್ರರಂಗದ ಕೆಲವರು, ಕುಟುಂಬದ ಆಪ್ತರಷ್ಟೇ ಹಾಜರಾಗಿದ್ದರು. ನಟ ನಿಹಾಲ್‌ ಮತ್ತು ನಿರ್ದೇಶಕಿ ರಿಷಿಕಾ ಶರ್ಮಾ 2023ರಲ್ಲಿ ಹಸೆಮಣೆ ಏರಿದರು.

ಸುಮಾರು ಏಳೆಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಯ ಲವ್‌ ಸ್ಟೋರಿಗೆ ಈ ವರ್ಷ ಅಧಿಕೃತ ಮುದ್ರೆ ಬಿತ್ತು.”ವಜ್ರಕಾಯ’ ಸಿನಿಮಾ ಖ್ಯಾತಿಯ ನಟಿ ಶುಭ್ರ ಅಯ್ಯಪ್ಪ ಹಾಗೂ ಉದ್ಯಮಿ ವಿಶಾಲ್‌ ಶಿವಪ್ಪ ಅವರ ಮದುವೆ ಇದೇ ವರ್ಷ ಜರುಗಿತು. ಹಲವು ವರ್ಷಗಳಿಂದ ವಿಶಾಲ್‌ ಹಾಗೂ ಶುಭ್ರ ಅಯ್ಯಪ್ಪ ಪರಸ್ಪರ ಪ್ರೀತಿಸುತ್ತಿದ್ದರು. ಕನ್ನಡ ಚಿತ್ರರಂಗದ ಯುವ ಸಂಗೀತ ನಿರ್ದೇಶಕ ಮತ್ತು ಗಾಯಕ ವಾಸುಕಿ ವೈಭವ್‌ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ತಮ್ಮ ದೀರ್ಘ‌ಕಾಲದ ಗೆಳತಿ ಬೃಂದಾ ವಿಕ್ರಮ್‌ ಅವರೊಂದಿಗೆ ವಾಸುಕಿ ವೈಭವ್‌ ದಾಂಪತ್ಯ ಗೀತೆ ಹಾಡಿದರು.

ಕಿರುತೆರೆ ಮತ್ತು ಹಿರಿತೆರೆ ನಟ ಸಿದ್ದು ಮೂಲಿಮನಿ ಅವರ ವಿವಾಹ ನಟಿ ಪ್ರಿಯಾ ಆಚಾರ್‌ ಜೊತೆ ನಡೆಯಿತು. ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಈ ವರ್ಷ ಹೊಸ ಜೀವನ ಆರಂಭಿಸಿತು. ಕಿರುತೆರೆಯ “ಕಾಮಿಡಿ ಕಿಲಾಡಿಗಳು’ ಶೋ ಮತ್ತು ಹಿರಿತೆರೆಯ ಕೆಲ ಸಿನಿಮಾಗಳಲ್ಲಿ ಕಾಮಿಡಿ ನಟನಾಗಿ ಮಿಂಚಿದ ಹಿತೇಶ್‌ ಕುಮಾರ್‌ ತಮ್ಮ ಬಹುಕಾಲದ ಗೆಳತಿ ಸ್ವಾತಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಕಿರು ತೆರೆಯ “ಕಾಮಿಡಿ ಕಿಲಾಡಿಗಳು’ ಶೋ ಮತ್ತು ಕೆಲವು ಸಿನಿಮಾಗಳಲ್ಲಿ ಕಾಮಿಡಿ ಕಚಗುಳಿ ನೀಡಿರುವ ನಟ ಸಂಜು ಬಸಯ್ಯ ತಮ್ಮ ಬಹು ಕಾಲದ ಗೆಳತಿ ಪಲ್ಲವಿ ಅವ ರೊಂದಿಗೆ ಹಸೆಮಣೆ ಏರಿದರು. ಇವರಲ್ಲದೆ ಒಂದಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ಅಕ್ಷತಾ ಕುಕಿ, ನಟ ಕಂ ನಿರ್ದೇಶಕ ಪ್ರಥಮ್‌ ಹೀಗೆ ಚಿತ್ರರಂಗದ ಅನೇಕರು ಈ ವರ್ಷ ವಿವಾಹವಾದರು.

 

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.