14 ಕಡೆ ಶಶಿರಾಜ್‌ ನಿರ್ಮಿತ ಮೃಣ್ಮಯ ಗಣೇಶನಿಗೆ ಪೂಜೆ

ವಿಗ್ರಹ ರಚನೆಯಲ್ಲಿ ನಿಪುಣ ಕಲಾವಿದ ಶಶಿ ಗಿರಿವನ

Team Udayavani, Sep 2, 2019, 5:35 AM IST

0109KDB2-SHASHIRAJ-2

ಕಡಬ: ಗಣಪತಿ ವಿಗ್ರಹ ರಚನೆಯಲ್ಲಿ ಕಡಬ ಪರಿಸರದಾದ್ಯಂತ ಹೆಸರು ಮಾಡಿದವರು ಶಶಿ ಗಿರಿವನ ಎಂದೇ ಪರಿಚಿತರಾಗಿರುವ ಬಹುಮುಖ ಪ್ರತಿಭೆಯ ಕಲಾವಿದ ಶಶಿರಾಜ್‌ ಅವರು. ತನ್ನ ದೊಡ್ಡಪ್ಪ ದಿ| ಅನಂತ ರಾವ್‌ ಅವರ ಗರಡಿಯಲ್ಲಿ ಪಳಗಿದ ಶಶಿರಾಜ್‌ 11 ವರ್ಷಗಳಿಂದ ಸ್ವತಂತ್ರವಾಗಿ ಗಣಪತಿ ವಿಗ್ರಹ ರಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕಡಬದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಮೃಣ್ಮಯ ಗಣೇಶನ ವಿಗ್ರಹವನ್ನು ರಚಿಸಿಕೊಡುತ್ತಿದ್ದವರು ನಿವೃತ್ತ ಶಿಕ್ಷಕ ದಿ| ಅನಂತ ರಾವ್‌ ಅವರು. ಅನಂತ ರಾವ್‌ ಅವರ ಜತೆ ಗಣೇಶನ ವಿಗ್ರಹ ರಚನೆಯಲ್ಲಿ ಸಹಕರಿಸುತ್ತಿದ್ದ ಶಶಿರಾಜ್‌ ಅವರು ಅನಂತ ರಾವ್‌ ಅವರ ಕಾಲಾನಂತರ ಕಳೆದ 11 ವರ್ಷಗಳಿಂದ ತಾನೇ ಪರಿಸರದ ಗಣೇಶೋತ್ಸವಗಳಿಗೆ ಗಣಪನ ವಿಗ್ರಹ ರಚಿಸಿಕೊಡುತ್ತಿದ್ದಾರೆ.

ಪುತ್ನಿ, ಪುತ್ರಿಯರ ಸಹಕಾರ
ಶಶಿರಾಜ್‌ ಅವರ ಗಣಪತಿ ವಿಗ್ರಹ ರಚನೆಯ ಕಾರ್ಯದಲ್ಲಿ ಅವರ ಪತ್ನಿ ಮಾಲತಿ, ಪುತ್ರಿಯರಾದ ನವ್ಯಶ್ರೀ ಹಾಗೂ ಶ್ವೇತಶ್ರೀ ಅವರು ಸಹಕಾರ ಉಲ್ಲೇಖನೀಯ. ಪ್ರಸ್ತುತ ಕಡಬ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಹಿತ ಪರಿಸರದ ಆಲಂಕಾರು, ಶರವೂರು, ಐತ್ತೂರು, ಕಲ್ಲಾಜೆ, ಬೆತ್ತೂàಡಿ, ಕೊಕ್ಕಡ, ನೆಲ್ಯಾಡಿ, ಕಡಬದ ಹಳೆಸ್ಟೇಶನ್‌, ಹೊಸ್ಮಠ, ಮರ್ದಾಳ, ಕಳಾರ ಮುಂತಾದೆಡೆ ಪೂಜೆಗೊಳ್ಳುವ ಒಟ್ಟು 14 ಗಣೇಶನ ವಿಗ್ರಹಗಳನ್ನು ಶಶಿರಾಜ್‌ ರಚಿಸಿ ಕೊಡುತ್ತಿದ್ದಾರೆ.

ಬಹುಮುಖ ಪ್ರತಿಭೆ
ಪ್ರಸ್ತುತ ಕುಟ್ರಾಪ್ಪಾಡಿ ಗ್ರಾಮದ ನಾಲೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಶಶಿರಾಜ್‌ ಅವರು ಬಹುಮುಖ ಪ್ರತಿಭೆಯ ಕಲಾವಿದ. ಶಶಿ ಗಿರಿವನ ಎನ್ನುವ ಹೆಸರಿನಲ್ಲಿ ಅವರು ರಚಿಸುತ್ತಿದ್ದ ವ್ಯಂಗ್ಯ ಚಿತ್ರಗಳು ತರಂಗ, ಸುಧಾ, ಮಂಗಳ ಮುಂತಾದ ವಾರ ಪತ್ರಿಕೆಗಳಲ್ಲಿ, ಉದಯವಾಣಿ, ಕರ್ಮವೀರ, ವಿಜಯಕರ್ನಾಟಕ ಮುಂತಾದ ದೈನಿಕಗಳಲ್ಲಿಯೂ ನಿರಂತರವಾಗಿ ಪ್ರಕಟವಾಗುತ್ತಿದ್ದವು. ಅತ್ಯುತ್ತಮ ಚಿತ್ರ ಕಲಾವಿದರಾಗಿರುವ ಅವರು ಭಕ್ತಿಗೀತೆ ರಚನೆ ಸಹಿತ ಹಲವು ಧ್ವನಿಸುರುಳಿಗಳಿಗೆ ಸಾಹಿತ್ಯ ನೀಡಿದ್ದಾರೆ. ಗಿರಿವನ ವಾಯ್ಸ ರೆಕಾರ್ಡಿಂಗ್‌ ಸ್ಟುಡಿಯೋ ನಡೆಸುತ್ತಿರುವ ಅವರು ಇದುವರೆಗೆ 12 ಆಡಿಯೋ ಆಲ್ಬಂಗಳಿಗೆ ಸಾಹಿತ್ಯ ರಚನೆ, ರಾಗ ಸಂಯೋಜನೆ ಮಾಡಿ ಹೊರತಂದಿದ್ದಾರೆ.

ಕಲಾ ಪೋಷಕ
ಶಶಿರಾಜ್‌ ಗಿರಿವನ ಅವರ ನೇತೃತ್ವದ ಗಿರಿವನ ನವರಸ ಗಾನಸಿರಿ ತಂಡವು 5 ವರ್ಷಗಳಲ್ಲಿ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದೆ. ದೇವಸ್ಥಾನಗಳ ಕಾರ್ಯಕ್ರಮ ಹಾಗೂ ಸಾಮಾಜಿಕ ಸಂಘಟನೆಗಳ ಪ್ರಚಾರ ಧ್ವನಿಮುದ್ರಿಕೆಯನ್ನು ಉಚಿತವಾಗಿ ತನ್ನ ವಾಯ್ಸ ರೆಕಾರ್ಡಿಂಗ್‌ ಸ್ಟುಡಿಯೋ ಮೂಲಕ ಸ್ಥಳೀಯ ಗ್ರಾಮೀಣ ಗಾಯಕರನ್ನು ಬೆಳಕಿಗೆ ತಂದ ಕಲಾ ಪೋಷಕ.

 ವರ್ಣಿಸಲು ಅಸಾಧ್ಯ
ಕಲೆ ಎನ್ನುವುದು ನಮ್ಮ ಹಿರಿಯರಿಂದ ನಮಗೆ ರಕ್ತಗತವಾಗಿ ಬಂದಿದೆ. ಇದು ಆರ್ಥಿಕ ಗಳಿಕೆಯ ಉದ್ದೇಶದಿಂದ ಮಾಡುತ್ತಿರುವ ಕೆಲಸವಲ್ಲ. ಈ ಕಾರ್ಯದಲ್ಲಿ ಸಿಗುವ ಮಾನಸಿಕ ಖುಷಿಯನ್ನು ವರ್ಣಿಸಲು ಅಸಾಧ್ಯ. ಅವಕಾಶ ಲಭಿಸಿದಾಗ ಮಾತ್ರ ಯಾವುದೇ ಪ್ರತಿಭೆ ಬೆಳಕಿಗೆ ಬರಲು ಸಾಧ್ಯ. ಆದರೆ ನಮ್ಮ ಯುವ ಪೀಳಿಗೆ ಕಲೆಯಿಂದ ದೂರವಾಗುತ್ತಿರುವುದು ವಿಷಾದದ ಸಂಗತಿ. ಮಕ್ಕಳಲ್ಲಿ ಸುಪ್ತವಾಗಿ ಹುದುಗಿರುವ ಪ್ರತಿಭೆಗಳು ಹೊರಬರಲು ಹೆತ್ತವರು ಅವಕಾಶ ಮಾಡಿಕೊಡಬೇಕು.
– ಶಶಿರಾಜ್‌ ಗಿರಿವನ ಕಡಬ

– ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.