ಗಣೇಶನ ಚಿತ್ರವಿರುವ ನೋಟು, ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಹಣೆಯಿಂದ ಗಣೇಶನ ಆರಾಧನೆ

ಚೌತಿಹಬ್ಬಕ್ಕೊಂದು ವಿಶೇಷ ಮೆರಗು...

Team Udayavani, Aug 21, 2020, 9:52 PM IST

ಗಣೇಶನ ಚಿತ್ರವಿರುವ ನೋಟು, ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಹಣೆಯಿಂದ ಗಣೇಶನ ಆರಾಧನೆ

ವಿದ್ಯೆ ಮತ್ತು ಜ್ಞಾನದ ಅಧಿಪತಿ ಮತ್ತು ಅದೃಷ್ಟದ ಅಧಿನಾಯಕ, ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಅಗ್ರಸ್ಥಾನ ಪಡೆದಿರುವ ವಿಘ್ನ ವಿನಾಯಕನಿಗೆ ಗಣೇಶ ಚತುರ್ಥಿಯಂದು ನಮ್ಮ ದೇಶದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಹಬ್ಬವನ್ನು ಆಚರಿಸುತ್ತಾರೆ. ಈ ಸಮಯದಲ್ಲಿ ವಿವಿಧ ಕಲಾಕಾರರು ತಮ್ಮ ಕಲ್ಪನೆಗೆ ತಕ್ಕಂತೆ ಗಣೇಶನ ವಿವಿಧ ಭಂಗಿಯ ಕಲಾಕೃತಿಯನ್ನು ರಚಿಸುತ್ತಾರೆ. ಇನ್ನು ಕೆಲವರು ಗಣೇಶನನ್ನು ಪೂಜಿಸುತ್ತಾರೆ. ಕೆಲವರು ಅಲಂಕಾರ ಮಾಡುತ್ತಾರೆ. ಹೀಗೆ ಅವರವರ ಇಚ್ಛಾನುಸಾರ ಗಣೇಶನನ್ನು ಪೂಜಿಸುವುದನ್ನು ಕಾಣುತ್ತೇವೆ. ಆದರೆ ಇಲ್ಲೊಬ್ಬರು ಚೌತಿ ಹಬ್ಬದ ವಿಶೇಷವಾಗಿ ಹಿಂದೂ ರಾಷ್ಟ್ರದ ಪ್ರತೀಕವಾದ ಗಣೇಶನ ಚಿತ್ರವಿರುವ ವಿವಿಧ ರಾಷ್ಟ್ರದ ನೋಟು, ನಾಣ್ಯ ಮತ್ತು ಅಂಚೆ ಚೀಟಿಯನ್ನು ಸಂಗ್ರಹಿಸಿ ಗಣೇಶನ ಕೃಪೆಗೆ ಪಾತ್ರರಾಗಿ ಸಂತೃಪ್ತಿ ಪಡೆಯುತ್ತಿದ್ದಾರೆ.

ಅವರೇ ಮಣಿಪಾಲ ಮಾಹೆಯ ಅಂಗ ಸಂಸ್ಥೆಯಾದ ಐಸಿಎಎಸ್‌ ವಿಭಾಗದ ಉದ್ಯೋಗಿಯಾಗಿರುವ ಕಲ್ಯಾಣಪುರದ ಲಕ್ಷ್ಮೀನಾರಾಯಣ ನಾಯಕ್‌. ಕಳೆದ 40 ವರ್ಷಗಳಿಂದ ಚೌತಿ ಹಬ್ಬದ ವಿಶೇಷವಾಗಿ ಹಿಂದೂ ರಾಷ್ಟ್ರದ ಪ್ರತೀಕವಾದ ಗಣೇಶನ ಚಿತ್ರವಿರುವ ವಿವಿಧ ರಾಷ್ಟ್ರದ ನೋಟು, ನಾಣ್ಯ ಮತ್ತು ಅಂಚೆ ಚೀಟಿಯನ್ನು ಸಂಗ್ರಹಿಸುತ್ತಿರುವ ಅವರು ಸುಮಾರು 15-20 ವರ್ಷಗಳಿಂದ ಹಲವಾರು ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ಪ್ರದರ್ಶನ ನೀಡಿ ಜನ ಮೆಚ್ಚುಗೆ ಗಳಿಸಿದ್ದಾರೆ. ಅಲ್ಲದೆ ಸಾಕಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳಲ್ಲಿಯೂ ಪ್ರದರ್ಶನ ನೀಡಿ ಶಹಬ್ಟಾಸ್‌ಗಿರಿ ಪಡೆದಿದ್ದಾರೆ. ಅವರ ಬಳಿ ಸುಮಾರು 180 ರಾಷ್ಟ್ರಗಳ ಅಂಚೆ ಚೀಟಿಗಳು ಮತ್ತು 170 ದೇಶಗಳ ನೋಟು ಹಾಗೂ ನಾಣ್ಯಗಳ ಸಂಗ್ರಹವಿರುವುದು ವಿಶೇಷ.

ಪ್ರಸ್ತುತ ಯುವಜನರಿಗೆ ಅಂಚೆ ಚೀಟಿಯ ಪರಿಚಯವೇ ಇಲ್ಲದಂತಾಗಿದೆ. ಅಂತಹವರಿಗೆ ಹಿಂದೆ ಇಂತಹ ಅಪರೂಪದ ಅಂಚೆ ಚೀಟಿ, ನೋಟು ಮತ್ತು ನಾಣ್ಯಗಳಿದ್ದವು ಎಂಬುವುದನ್ನು ತಿಳಿದುಕೊಳ್ಳಲು ಇದು ಸಹಕಾರಿಯಾಗುತ್ತದೆ. ಈ ಬಗೆಯ ಉತ್ತಮ ಹವ್ಯಾಸದಿಂದ ಮನಸ್ಸಿಗೆ ನೆಮ್ಮದಿ ದೊರಕುವುದಲ್ಲದೆ, ಸಮಾಜಕ್ಕೆ ಮಾದರಿ ಕಾರ್ಯ ಮಾಡುತ್ತಿದ್ದೇನೆ ಎನ್ನುವ ಹೆಮ್ಮೆಯೂ ನನಗಿದೆ. ಇದರಿಂದ ನನ್ನ ಜ್ಞಾನ ವೃದ್ಧಿಯೊಂದಿಗೆ ಯುವ ಪೀಳಿಗೆಗೆ ದೇಶ-ವಿದೇಶಗಳ ಹಬ್ಬದಾಚರಣೆ, ರಾಷ್ಟ್ರ ನಾಯಕರು, ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಸ್ವಲ್ಪಮಟ್ಟಿನ ಜ್ಞಾನಧಾರೆ ಎರೆದಂತೆಯೂ ಆಗಲಿದೆ ಎಂಬುವುದು ಲಕ್ಷ್ಮೀನಾರಾಯಣ ಅವರ ಅಭಿಪ್ರಾಯ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.