ವಿಧಾನಸಭೆ ವಿಸರ್ಜಿಸಿ!

ಮೈತ್ರಿಗೆ ದಿನಕ್ಕೊಂದು ಸಂಕಟ

Team Udayavani, May 19, 2019, 8:05 AM IST

a-17

ಹುಬ್ಬಳ್ಳಿ/ಬಾಗಲಕೋಟೆ: ಗೊಂದಲದಲ್ಲಿ ಮುಂದುವರಿಯುವ ಬದಲು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವುದು ಉತ್ತಮ ಎಂಬ ಜೆಡಿಎಸ್‌ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಹೇಳಿಕೆ ಸಂಚಲನ ಸೃಷ್ಟಿಸಿದೆ. ಸಮ್ಮಿಶ್ರ ಸರಕಾರದ ಪಾಲುದಾರ ಕಾಂಗ್ರೆಸ್‌-ಜೆಡಿಎಸ್‌ ಮುಖಂಡರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವ ಸಂದರ್ಭ ಈ ಹೇಳಿಕೆ ಬೆಂಕಿಗೆ ತುಪ್ಪ ಸುರಿದಿದೆ. ಇದನ್ನೇ ಅಸ್ತ್ರವಾಗಿಸಿ ಬಿಜೆಪಿ ಕೂಡ ಮೈತ್ರಿಕೂಟದ ವಿರುದ್ಧ ಮುಗಿಬಿದ್ದಿದೆ.

ಕುಮಾರಸ್ವಾಮಿಯವರಿಗೆ ಮುಕ್ತ ಆಡಳಿತಕ್ಕೆ ಅವಕಾಶ ನೀಡಬೇಕಿದೆ. ಸಮ್ಮಿಶ್ರ ಸರಕಾರ ಸಮರ್ಪಕವಾಗಿ ನಡೆಯಬೇಕು. ನಿತ್ಯವೂ ಗೊಂದಲಮಯ ವಾತಾವರಣ ಸೃಷ್ಟಿ ಮಾಡಿದರೆ ಆಡಳಿತ ಕಷ್ಟಕರ. ಅನಗತ್ಯ ಗೊಂದಲ ಸೃಷ್ಟಿಯ ಬದಲು ಹೊಸ ಜನಾದೇಶಕ್ಕೆ ಹೋಗುವುದು ಉತ್ತಮ ಎಂದು ಸುದ್ದಿ ಸಂಸ್ಥೆಯೊಂದಕ್ಕೆ ಹೊರಟ್ಟಿ ಹೇಳಿಕೆ ನೀಡಿದ್ದರು. ಇದು ವಿವಾದದ ರೂಪ ಪಡೆಯುತ್ತಿದ್ದಂತೆ ‘ಸಿದ್ದು ಸಿಎಂ’ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆ ಮೆತ್ತಗಾಗಿಸಲು ಈ ಹೇಳಿಕೆ ನೀಡಿದ್ದೇನೆ ಎಂದು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದ್ದಾರೆ.

ವಿಸರ್ಜನೆ ಸ್ಥಿತಿ ನಿರ್ಮಾಣವಾಗಿಲ್ಲ

ಬಸವರಾಜ ಹೊರಟ್ಟಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎಚ್.ಡಿ. ದೇವೇಗೌಡ, ಗೊಂದಲ ಸರಿಹೋಗಲಿದ್ದು, ವಿಧಾನಸಭೆ ವಿಸರ್ಜನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದಿದ್ದಾರೆ. ಹೊರಟ್ಟಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್‌, ವಿಧಾನಸಭೆ ವಿಸರ್ಜನೆ ಬಗ್ಗೆ ದೊಡ್ಡವರು ತೀರ್ಮಾನ ಕೈಗೊಳ್ಳಬೇಕು. ಚುನಾವಣೆಗೆ ಹೋಗುವುದು ಸುಲಭದ ಮಾತಲ್ಲ. ಹೊರಟ್ಟಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.

ಬಿಜೆಪಿಗೆ ಲಾಭ ಇಲ್ಲ
ಬಾಗಲಕೋಟೆ:
ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಮುಧೋಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹೊರಟ್ಟಿ, ಸರಕಾರ ವಿಸರ್ಜನೆಯಾಗಬೇಕು ಎಂಬ ನನ್ನ ಹೇಳಿಕೆ ಯಿಂದ ಬಿಜೆಪಿಗೆ ಲಾಭವಾಗುವ ಪ್ರಶ್ನೆಯೇ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬರಲು 8ರಿಂದ 10 ಜನ ಶಾಸಕರು ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ಚುನಾವಣೆಗೆ ಹೋಗಲು ಯಾರೂ ತಯಾರಿಲ್ಲ, ಧೈರ್ಯವೂ ಇಲ್ಲ. ಮಧ್ಯಂತರ ಚುನಾವಣೆಗೂ ನನ್ನ ಹೇಳಿಕೆಗೂ ಸಂಬಂಧವಿಲ್ಲ ಎಂದಿದ್ದಾರೆ.

‘ಕೈ’ಕಮಾಂಡ್‌ ಬುಲಾವ್‌
ಬೆಂಗಳೂರು:
ಇತ್ತೀಚೆಗಿನ ಬೆಳವಣಿಗೆ ಗಳ ಕುರಿತು ಚರ್ಚಿಸಲು ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಬುಲಾವ್‌ ನೀಡಿದ್ದಾರೆ. ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌ ಶನಿವಾರ ದಿಲ್ಲಿಗೆ ತೆರಳಿದರು. ಮಲ್ಲಿಕಾರ್ಜುನ ಖರ್ಗೆ, ಡಾ| ಜಿ. ಪರಮೇಶ್ವರ್‌, ಡಿಕೆಶಿ ರವಿವಾರ ಬೆಳಗ್ಗೆ ದಿಲ್ಲಿ ತಲುಪಲಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಚುನಾವಣೆ ಫ‌ಲಿತಾಂಶ, ಆಪರೇಷನ್‌ ಕಮಲ ಪ್ರಯತ್ನ, ಸಿಎಂ ಬದಲಾವಣೆ ವಿಚಾರ, ಮೈತ್ರಿಯ ಅನುಕೂಲ, ಅನಾನುಕೂಲಗಳ ಜತೆಗೆ ಫ‌ಲಿತಾಂಶದ ಬಳಿಕ ಜೆಡಿಎಸ್‌ ನಡೆ ಮತ್ತಿತರ ವಿಚಾರಗಳು ಚರ್ಚೆಯಾಗಬಹುದು ಎನ್ನಲಾಗಿದೆ.

ಎಚ್‌ಡಿಕೆ ಟ್ವೀಟ್ ಮನವಿ
ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ರಚನೆಯ ಆಶಯ ಸಾಕಾರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮುಖಂಡರು ವ್ಯತಿರಿಕ್ತ ಹೇಳಿಕೆ ನೀಡುವುದರಿಂದ ಈ ಪ್ರಯತ್ನಗಳಿಗೆ ಹಿನ್ನಡೆಯಾಗಬಹುದು. ಆದ್ದರಿಂದ ಉಭಯ ಪಕ್ಷಗಳ ಮುಖಂಡರು ಇಂಥ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ವಿವಾದಾತ್ಮಕ ಹೇಳಿಕೆ ನೀಡಬಾರದು ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.