ಅಯೋಧ್ಯೆ ತೀರ್ಪು; ಪ್ರಧಾನಿ ನರೇಂದ್ರ ಮೋದಿ ಭಾಷಣ
Team Udayavani, Nov 9, 2019, 6:01 PM IST
ದಶಕಗಳಷ್ಟು ಹಳೆಯದಾದ ರಾಮಜನ್ಮಭೂಮಿ-ಬಾಬ್ರಿ ಮಸೀದಿಯ 2.77 ಎಕರೆ ಭೂ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ ಶನಿವಾರ ಸರ್ವಾನುಮತದ ತೀರ್ಪನ್ನು ಪ್ರಕಟಿಸಿದೆ. ವಿವಾದಿತ 2.77ಎಕರೆ ಜಾಗ ರಾಮಲಲ್ಲಾಗೆ ಸೇರಿದ್ದು, ಇಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಟ್ರಸ್ಟ್ ರಚಿಸುವಂತೆ ಸೂಚಿಸಿದೆ. ಅಲ್ಲದೇ ಸುನ್ನಿ ವಕ್ಫ್ ಬೋರ್ಡ್ ಗೆ ಉತ್ತರಪ್ರದೇಶ ಸರ್ಕಾರ ಅಯೋಧ್ಯೆಯಲ್ಲಿ ಐದು ಎಕರೆ ಸ್ಥಳ ನೀಡುವಂತೆ ನಿರ್ದೇಶನ ನೀಡಿದೆ. ಅಯೋಧ್ಯೆ ಕುರಿತ ತೀರ್ಪಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರ ಇಲ್ಲಿದೆ.