ಕೇರಳ ರಾಜ್ಯದಲ್ಲಿ 8 ತಿಂಗಳು 1,537 ಅತ್ಯಾಚಾರ ಪ್ರಕರಣ

ಫೊರೆನ್ಸಿಕ್‌ ವರದಿಗೆ ಕಾಯುತ್ತಿವೆ 4,000 ಮೊಕದ್ದಮೆಗಳು

Team Udayavani, Dec 11, 2019, 4:56 AM IST

ds-17

ಕಾಸರಗೋಡು : ಈಗ ದಿನಾ ಅತ್ಯಾಚಾರ, ಲೈಂಗಿಕ ಕಿರುಕುಳ, ಹಿಂಸೆ ಇವುಗಳದ್ದೇ ಸುದ್ದಿ. ದೇಶದ ಮೂಲೆ ಮೂಲೆಯಲ್ಲೂ ಲೈಂಗಿಕ ಕಿರುಕುಳ ಸುದ್ದಿಯಾಗುತ್ತಿರುವಂತೆ ಕೇರಳದಲ್ಲೂ ಈ ವಿಚಾರದಲ್ಲಿ ಹಿಂದಿಲ್ಲ. ಕಳೆದ ಎಂಟು ತಿಂಗಳಲ್ಲಿ ಕೇರಳದಲ್ಲಿ ಒಟ್ಟು 1537 ಪ್ರಕರಣಗಳನ್ನು ದಾಖಲಿಸಲಾಗಿದೆ. ಹಲವು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, 4,000 ಪ್ರಕರಣಗಳು ಫೊರೆನ್ಸಿಕ್‌ ವರದಿಗಾಗಿ ಕಾಯುತ್ತಿವೆ. ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಐದು ಪಾಲು ಹೆಚ್ಚಳವಾಗಿದೆ. ಕಳೆದ 10 ವರ್ಷಗಳಲ್ಲಿ ಕೇರಳದಲ್ಲಿ ಮೂರು ಪಾಲು ಅತ್ಯಾಚಾರ ಪ್ರಕರಣಗಳು ಅಧಿಕವಾಗಿವೆ.

ಅತ್ಯಾಚಾರ, ಮಕ್ಕಳಿಗೆ ಲೈಂಗಿಕ ಕಿರುಕುಳ ಮೊದಲಾದ ಪ್ರಕರಣಗಳಲ್ಲಿ ಕೇರಳವು ಹಿಂದಿಲ್ಲ. 2019 ನೇ ವರ್ಷದ ಎಂಟು ತಿಂಗಳಲ್ಲಿ ಕೇರಳದಲ್ಲಿ ಒಟ್ಟು ದಾಖಲಾದ ಪ್ರಕರಣಗಳ ಸಂಖ್ಯೆ 1537. ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಪ್ರಕರಣ ದಾಖಲಾಗಿವೆೆ. ಅತ್ಯಾಚಾರ, ಮಕ್ಕಳಿಗೆ ಲೈಂಗಿಕ ಕಿರುಕುಳ ಇವೇ ಮೊದಲಾದ ಪ್ರಕರಣಗಳ ವಿಚಾರಣೆಯ ತೀರ್ಪು ಹೊರ ಬರಲು ನ್ಯಾಯಾಲಯದಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಇಂತಹ ಪ್ರಕರಣಗಳಲ್ಲಿ ಸಾಕ್ಷಿದಾರರು ನ್ಯಾಯಾಲಯದಲ್ಲಿ ಸಾಕ್ಷಿ ತಿರುಚುವುದರಿಂದಾಗಿ ಅತ್ಯಾಚಾರ, ಲೈಂಗಿಕ ಕಿರುಕುಳಕ್ಕೆ ತುತ್ತಾದವರಿಗೆ ನ್ಯಾಯ ದೊರೆಯದಂತಾಗಿದೆ. ಬಹುತೇಕ ಪ್ರಕರಣಗಳಲ್ಲಿ ಸಾಕ್ಷಿದಾರರು ಸಾಕ್ಷಿ ತಿರುಚುವುದು, ಆರೋಪಿಗಳ ಬೆದರಿಕೆ, ಅತ್ಯಾಚಾರಕ್ಕೊಳಗಾದವರೂ ಕೂಡ ನ್ಯಾಯಾಲಯದಲ್ಲಿ ಹಲವು ಒತ್ತಡಗಳಿಗೆ ಮಣಿದು ಸ್ಪಷ್ಟವಾಗಿ ಸಾಕ್ಷಿಗಳನ್ನು ಹೇಳದಿರುವುದು ಮೊದಲಾದವುಗಳಿಂದಾಗಿ ಆರೋಪಿಗಳು ಶಿಕ್ಷೆಯಿಂದ ಪಾರಾಗುತ್ತಿದ್ದಾರೆ. ಇದು ಇನ್ನಷ್ಟು ಇಂತಹ ಅಪರಾಧ ಹೆಚ್ಚಳಕ್ಕೆ ಕಾರಣವಾಗುತ್ತಿದೆ.

2017ರ ವರೆಗಿನ 1,28,000 ಪ್ರಕರಣಗಳು ನ್ಯಾಯಾಲಯ ದಲ್ಲಿ ವಿಚಾರಣೆಯ ಹಂತದಲ್ಲಿವೆೆ. ದೇಶದಲ್ಲಿ ವರ್ಷಂಪ್ರತಿ ಸರಾಸರಿ ಶೇ. 15 ರಷ್ಟು ಕೇಸುಗಳ ವಿಚಾರಣೆ ಪೂರ್ತಿಯಾಗುತ್ತಿದೆ ಎಂಬುದು ಲೆಕ್ಕಾಚಾರವಾಗಿದೆ. ಕೇರಳದಲ್ಲಿ ಶೇ.5 ಕ್ಕೂ ಕಡಿಮೆ ಪ್ರಮಾಣದಲ್ಲಿ ಪ್ರಕರಣಗಳ ವಿಚಾರಣೆ ಪೂರ್ತಿಗೊಳ್ಳುತ್ತಿದೆ. ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಪಟ್ಟಂತೆ ವೈದ್ಯಕೀಯ ಪರಿಶೋಧನೆ ನಡೆಸಲು ಲ್ಯಾಬ್‌ಗಳ ಸಹಿತ ಅತ್ಯಾಧುನಿಕ ವ್ಯವಸ್ಥೆಗಳಿಲ್ಲ ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ವೈಜ್ಞಾನಿಕ ಪರಿಶೋಧನೆಯ ವರದಿ ಸೂಕ್ತ ಕಾಲಕ್ಕೆ ಲಭಿಸುವುದಿಲ್ಲ. ಕೇರಳದಲ್ಲಿ 4,000 ದಷ್ಟು ಪ್ರಕರಣಗಳು ಫಾರೆನ್ಸಿಕ್‌ ವರದಿಗಾಗಿ ಕಾಯುತ್ತಿವೆ. ಫಾರೆನ್ಸಿಕ್‌ ವಿಭಾಗದಲ್ಲಿ ತಜ್ಞರ ಕೊರತೆಯಿದೆ. ಕೇರಳದಲ್ಲಿ ಫಾರೆನ್ಸಿಕ್‌ ವಿಭಾಗದಲ್ಲಿ 400 ಮಂದಿ ತಜ್ಞರ ಅಗತ್ಯವಿದ್ದರೂ, ಕೇವಲ 100 ಕ್ಕೂ ಕಡಿಮೆ ತಜ್ಞರಿದ್ದಾರೆ.

ಕಾರಣಗಳು: ಮದ್ಯಪಾನ, ದಾರಿದ್ರ್ಯ, ಮಾದಕ ವಸ್ತು ಸೇವನೆ, ಮೊಬೈಲ್‌ ಫೋನ್‌-ಇಂಟರ್‌ನೆಟ್‌ ದುರುಪಯೋಗ ಮೊದಲಾದವುಗಳ ಕಾರಣದಿಂದ ಅತ್ಯಾಚಾರ, ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಹೆಚ್ಚಳಕ್ಕೆ ಕಾರಣವೆಂಬುದಾಗಿ ತಜ್ಞರು ಅಭಿಮತ ವ್ಯಕ್ತಪಡಿಸುತ್ತಿದ್ದಾರೆ.

ಅತ್ಯಂತ ಹೆಚ್ಚು ಪ್ರಕರಣ: ಕೇರಳದ ಎರ್ನಾಕುಳಂ ಜಿಲ್ಲೆ 2019ರಲ್ಲಿ ಆಗಸ್ಟ್‌ ತಿಂಗಳ ವರೆಗಿನ ಅತ್ಯಾಚಾರ ಪ್ರಕರಣಗಳಲ್ಲಿ ಪ್ರಥಮ ಸ್ಥಾನದಲ್ಲಿದೆ. ಈ ಜಿಲ್ಲೆಯಲ್ಲಿ 1601 ಪ್ರಕರಣಗಳು ದಾಖಲಾಗಿವೆ. ಅತ್ಯಂತ ಕಡಿಮೆ ಪ್ರಕರಣಗಳು ದಾಖಲಾದ ಜಿಲ್ಲೆ ವಯನಾಡು-67. ಕೇರಳದ ರಾಜಧಾನಿ ತಿರುವನಂತಪುರದಲ್ಲಿ ದಾಖಲಾದ ಪ್ರಕರಣಗಳು 211 ಆಗಿದ್ದರೆ, ಕಾಸರಗೋಡು ಜಿಲ್ಲೆಯಲ್ಲಿ ದಾಖಲಾದ ಪ್ರಕರಣಗಳು 70.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.