ಶೇ.25 ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಮೊಟಕು

2230 ತಾತ್ಕಾಲಿಕ ಚಾಲಕರ ವಜಾ

Team Udayavani, Oct 6, 2019, 5:38 AM IST

05KSDE8

ಕಾಸರಗೋಡು: ರಾಜ್ಯ ಹೈಕೋ ರ್ಟ್‌ನ ಆದೇಶ‌ ಪ್ರಕಾರ ಕೇರಳ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದಲ್ಲಿ ದುಡಿಯು ತ್ತಿದ್ದ 2230 ತಾತ್ಕಾಲಿಕ ಚಾಲಕರನ್ನು ಸೇವೆ ಯಿಂದ ವಜಾಗೈಯ್ಯಲಾಗಿದ್ದು, ಅದು ರಾಜ್ಯ ದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆಗಳನ್ನು ತೀವ್ರವಾಗಿ ಅಸ್ತವ್ಯಸ್ತಗೊಳಿಸ ತೊಡಗಿದೆ.

ರಾಜ್ಯದಲ್ಲಿ ಒಟ್ಟು 5312 ಕೆಎಸ್‌ಆರ್‌ಟಿಸಿ ಸೇವೆಗಳಿದ್ದು, ಅದರಲ್ಲಿ 580 ಸೇವೆಗಳನ್ನು ರದ್ದುಗೊಳಿಸಬೇಕಾಗಿ ಬಂದಿತ್ತು. ಕೆಲವು ಜಿಲ್ಲೆಗಳಲ್ಲಿ ರಜೆಯಲ್ಲಿರುವ ಚಾಲಕರು ಮತ್ತು ಇತರ ಚಾಲಕರಿಗೆ ಡಬಲ್‌ ಡ್ನೂಟಿ ನೀಡಿ ಗುರುವಾರ ಬಸ್‌ ಸೇವೆಯನ್ನು ಬಹುತೇಕ ನಿಯಂತ್ರಿಸಲಾಗಿತ್ತು. ಆದರೆ ಡಬಲ್‌ ಡ್ನೂಟಿ ಮಾಡಿದ ಚಾಲಕರು ಶುಕ್ರವಾರವೂ ಕರ್ತವ್ಯಕ್ಕೆ ಹಾಜರಾಗದೆ ಇರುವುದರಿಂದ ಅದು ಇನ್ನಷ್ಟು ಹೆಚ್ಚು ಬಸ್ಸು ಸೇವೆ ಮೊಟಕುಗೊಳಿಸುವಂತೆ ಮಾಡಿದೆ. ಇದರಿಂದಾಗಿ ಈಗಾಗಲೇ ಶೇಕಡ 25ರಷ್ಟು ಬಸ್‌ ಸೇವೆ ಮೊಟಕುಗೊಂಡಿದೆ.

ಕೆಎಸ್‌ಆರ್‌ಟಿಸಿಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸುತ್ತಿರುವ ಚಾಲಕರು ಮತ್ತು ನಿರ್ವಾಹಕರನ್ನು ವಜಾಗೈಯ್ಯುವಂತೆ ಹೈಕೋರ್ಟ್‌ ಈ ಹಿಂದೆಯೇ ಆದೇಶ ನೀಡಿತ್ತು. ಅದರಂತೆ ತಾತ್ಕಾಲಿಕ ಸಿಬ್ಬಂದಿ ಗಳನ್ನು ವಜಾಗೈಯ್ಯಲಾಗಿದ್ದರೂ ವಜಾಗೈಯ್ಯ ಲಾಗಿದ್ದ ಚಾಲಕರನ್ನು ದಿನ ವೇತನ ಆಧಾರದಲ್ಲಿ ಬಳಿಕ ನೇಮಿಸಲಾಗಿತ್ತು. ಈ ಕ್ರಮದ ವಿರುದ್ಧ ಪಿಎಸ್‌ಸಿ ರ್‍ಯಾಂಕ್‌ ಹೋಲ್ಡರ್‌ ಅಸೋಸಿಯೇಶನ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಎಲ್ಲಾ ತಾತ್ಕಾಲಿಕ ಸಿಬ್ಬಂದಿಗಳನ್ನು ಪೂರ್ಣವಾಗಿ ಹೊರತು ಪಡಿಸುವಂತೆ ಕಠಿಣ ಆದೇಶ ನೀಡಿತ್ತು. ಅದರಂತೆ 2230 ತಾತ್ಕಾಲಿಕ ಚಾಲಕರನ್ನು ಕೆಎಸ್‌ಆರ್‌ಟಿಸಿ ಸೇವೆಯಿಂದ ವಜಾಗೈದಿದೆ.

ಕೆಎಸ್‌ಆರ್‌ಟಿಸಿಯಲ್ಲಿ ಒಂದೇ ಬಾರಿ ಇಷ್ಟೊಂದು ಸಂಖ್ಯೆಯಲ್ಲಿ ಚಾಲಕರನ್ನು ಸೇವೆಯಿಂದ ಹೊರತುಪಡಿಸಿರುವುದು ಸೇವೆಗಳ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಮಾತ್ರವಲ್ಲದೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರಿಂದ ಪ್ರಯಾಣಿಕರು ಹೆಚ್ಚಿನ ಸಂಕಷ್ಟ ಅನುಭವಿಸುವಂತಾಗಿದೆ.

ಕಾಸರಗೋಡು ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಈಗಾಗಲೇ 47 ಚಾಲಕರ ಹುದ್ದೆಗಳು ತೆರವು ಬಿದ್ದಿದೆ. ಆದರೆ ಅದಕ್ಕೆ ಈ ತನಕ ಖಾಯಂ ಚಾಲಕರನ್ನು ನೇಮಕಾತಿ ನಡೆದಿಲ್ಲ. ತಾತ್ಕಾಲಿಕ ಚಾಲಕರ ಸೇವೆ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕಾಸರಗೋಡು ಡಿಪ್ಪೋದಿಂದ ಚಂದ್ರಗಿರಿ ರೂಟಿನಲ್ಲಿ -2, ಪಾಣತ್ತೂರು ರೂಟ್‌ನಲ್ಲಿ -2 ಮತ್ತು ಚಿತ್ತಾರಿಕಲ್‌ ರೂಟ್‌ನಲ್ಲಿ -1 ಕೆಎಸ್‌ಆರ್‌ಟಿಸಿ ಸೇವೆ ಮೊಟಕುಗೊಳಿಸಬೇಕಾಗಿ ಬಂದಿದೆ. ಹೊಸದುರ್ಗ ಸಬ್‌ ಡಿಪೋದಿಂದಲೂ ಎರಡು ಬಸ್‌ ಸೇವೆ ಮೊಟಕುಗೊಳಿಸಲಾಗಿದೆ. ಇತರ ಜಿಲ್ಲೆಗಳ ಹಾಗೆ ಕಾಸರಗೋಡು ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಸೇವೆಗಳ ಮೇಲೆ ಈ ಸಮಸ್ಯೆ ಹೆಚ್ಚಿನ ಪರಿಣಾಮ ಬೀರಿಲ್ಲ.

ಮೊದಲೇ ನಷ್ಟದ ಹಾದಿಯಲ್ಲಿ ಸಾಗುತ್ತಿರುವ ಕೆಎಸ್‌ಆರ್‌ಟಿಸಿ ಈಗ ಚಾಲಕರಿಲ್ಲದೆ ಬಸ್ಸು ಸೇವೆ ಮೊಟಕುಗೊಳಿಸಬೇಕಾಗಿ ಬಂದಿರುವುದು ಕೆಎಸ್‌ಆರ್‌ಟಿಸಿಯನ್ನು ಇನ್ನಷ್ಟು ಆರ್ಥಿಕ ನಷ್ಟದತ್ತ ತಳ್ಳುವಂತೆ ಮಾಡಿದೆ.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.