ರಾ.ಹೆ ಚತುಷ್ಪಥ ಯೋಜನೆ ಜಿಲ್ಲೆಯಲ್ಲಿ ಶೇ. 70 ಭೂ ಸ್ವಾಧೀನ ಪೂರ್ಣ
Team Udayavani, May 10, 2017, 11:57 AM IST
ಕಾಸರಗೋಡು: ರಾಜ್ಯದ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸುವ ಯೋಜನೆಗೆ ಅಗತ್ಯವಾದ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಶೇ. 70ರಷ್ಟು ಭೂಸ್ವಾಧೀನಪಡಿಸಲಾಗಿದೆ ಎಂದು ರಾಜ್ಯ ಲೋಕೋಪಯೋಗಿ ಖಾತೆ ಸಚಿವ ಜಿ. ಸುಧಾಕರನ್ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಹಾದುಹೋಗುತ್ತಿರುವ ದಾರಿ ಮಧ್ಯೆ ಇರುವ ಸೇತುವೆ ಮತ್ತು ರೈಲ್ವೇ ಮೇಲ್ಸೇತುವೆಗಳನ್ನು ಅಗಲಗೊಳಿಸಲಾಗುವುದು. ಇದರಂತೆ ಕೋಟಿಕುಳಂ ಮತ್ತು ಪಳ್ಳಿಕೆರೆ ಮೇಲ್ಸೇತುವೆಯನ್ನು ಚತುಷ್ಪಥಗೊಳಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಉಳಿದೆಡೆ ಅಗತ್ಯದ ಕ್ರಮ ಕೈಗೊಳ್ಳಲಾಗಿದೆ.
ಕೇಂದ್ರ ಭೂಸಾರಿಗೆ ಇಲಾಖೆಯ ಆರ್ಥಿಕ ನೆರವಿನಿಂದ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸಲಾಗುತ್ತದೆ. ಇದಕ್ಕಾಗಿ ಕೇಂದ್ರ ಸರಕಾರ 675 ಕೋಟಿ ರೂಪಾಯಿ ಮಂಜೂರು ಮಾಡಿದೆ. ಮೊದಲ ಹಂತದಲ್ಲಿ ತಲಪ್ಪಾಡಿಯಿಂದ ಕಣ್ಣೂರು ತನಕ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿ ಪಡಿಸಲಾಗುವುದು. ನಿರ್ಮಾಣ ಕೆಲಸಕ್ಕೆ ಜೂನ್ ತಿಂಗಳಲ್ಲಿ ಚಾಲನೆ ನೀಡಲಾಗುವುದೆಂದು ಸಚಿವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ಸ್ವಾಧೀನಪಡಿಸುವ ಜಮೀನಿಗೆ ನ್ಯಾಯವಾದ ಬೆಲೆ ನೀಡಲಾಗುವುದೆಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ