70 ಲಕ್ಷ ರೂ. ನುಂಗಿ ನೀರು ಕುಡಿದ ಮೊಗ್ರಾಲ್‌ ಯೋಜನೆ!


Team Udayavani, Dec 9, 2019, 5:08 AM IST

8-KBL-1

ಕುಂಬಳೆ: ಮೊಗ್ರಾಲಿನ ಸುತ್ತ ಮುತ್ತಲಿನ ಪ್ರದೇಶದ ನೀರಿನ ಕ್ಷಾಮ ಪರಿಹಾರಕ್ಕಾಗಿ ಈ ತನಕ ಸರಕಾರದ ತ್ರಿಸ್ತರ ಸ್ಥಳೀಯಾಡಳಿತ ಮತ್ತು ಜಿಲ್ಲಾಡಳಿತದ ವಿವಿಧ ಯೋಜನೆಗಳಲ್ಲಿ ಸುಮಾರು 70 ಲಕ್ಷ ರೂ. ವಿನಿಯೋಗಿಸಲಾಗಿದೆ. ಆದರೆ ಈ ಪ್ರದೇಶದ ನೀರಿನ ಕ್ಷಾಮ ಮಾತ್ರ ಇನ್ನೂ ಪರಿಹಾರವಾಗಿಲ್ಲ.

ಪ್ರಕೃತಿದತ್ತವಾದ ಕಾಡಿಯಾಂಕುಳ ಎಂಬ ಕೊಳದಲ್ಲಿ ಧಾರಾಳ ನೀರು ಇದ್ದರೂ ಪ್ರಕೃತ ಕೊಳದ ಸುತ್ತ ಕಾಡುಪೊದೆ ಆವರಿಸಿದೆ. ಆವರಣವಿಲ್ಲದೆ ಇದರ ನೀರು ಕುಡಿಯಲು ಅಯೋಗ್ಯವಾಗಿದೆ. ಕೊಳದ ಬಳಿಯಲ್ಲಿ ನಿರ್ಮಿಸಿದ ಶೆಡ್ಡಿನೊಳಗೆ ಸ್ಥಾಪಿಸಿರುವ ವಿದ್ಯುತ್‌ ಪಂಪ್‌ಸೆಟ್‌ ತುಕ್ಕು ಹಿಡಿಯುತ್ತಿದೆ.ಇದರ ಬಿಲ್‌ ಪಾವತಿಸದೆ ವಿದ್ಯುತ್‌ ಇಲಾಖೆ ಸಂಪರ್ಕ ಕಡಿತಗೊಳಿಸಿದೆ. ಕುಡಿಯುವ ನೀರಿನ ಯೋಜನೆಯಲ್ಲಿ ಗಾಂಧಿ ನಗರ, ರಹ್‌ಮತ್‌ನಗರ, ಕುತುಬ್‌ ನಗರ, ಕಾಡಿಯಾಕುಳಂ ಗಳಲ್ಲಿ ನಿರ್ಮಿಸಿದ 4 ಟ್ಯಾಂಕ್‌ ಗಳು ಗಾಳಿಮಳೆಗೆ ಶಿಥಿಲ ವಾಗುತ್ತಿದೆ. ಧಾರಾಳ ನೀರಾಶ್ರಯ ಪ್ರದೇಶವಾಗಿದ್ದು ಕೆಲವರು ಬಾವಿ ನಿರ್ಮಿಸಲು ಸ್ಥಳ ನೀಡಿದರೂ ಬಾವಿ ತೋಡಿಲ್ಲ. ಆದರೆ ವಿವಿಧ ಕುಡಿಯುವ ನೀರಿನ ಯೋಜನೆಗಳ ಗುತ್ತಿಗೆದಾರರು ಕಾಮಗಾರಿ ಪೂರ್ಣ ಗೊಳಿಸದೆ ವಶೀ ಲಿ ಯಿಂದ ಯೋಜನೆಯ ನಿಧಿ ನುಂಗಿದ್ದಾರಂತೆ.

ಈ ಬೃಹತ್‌ ಅವ್ಯವಹಾರವನ್ನು ಸಂಂಧಪಟ್ಟ ಉನ್ನತ ಅಧಿಕಾರಿಗಳು ಮತ್ತು ವಿಜಿಲೆನ್ಸ್‌ ಅಧಿಕಾರಿಗಳು ಮತ್ತು ಕಾಂಚಾಣಕ್ಕೆ ಕೈ ಒಡ್ಡಿದ ಕೆಲವು ಚುನಾಯಿತರು ಕಾಮಗಾರಿ ಸರಿಯಾಗಿದೆ ಎಂದು ಸಮರ್ಥಿಸಿದ್ದಾರಂತೆ !

ಇದೀಗ ರಾಜ್ಯ ವಿಧಾನ ಸಭಾ ಸಮಿತಿಯ ಆದೇಶದಂತೆ ಕಾಸರಗೋಡು ಜಿಲ್ಲಾ ಪಂಚಾಯತ್‌ನ 2018-19ನೇ ವಾರ್ಷಿಕ ಯೋಜನೆಯ ಪ್ರಾಜೆಕ್ಟ್ ನಂಬ್ರ 665ರಲ್ಲಿ ಮತ್ತೆ ಮೊಗ್ರಾಲಿನ ಜಿವಿಎಚ್‌ಎಸ್‌ ಸರಕಾರಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಯೋಜನೆಗೆ 2.50 ಲಕ್ಷ ಮೀಸಲಿರಿಸಿದೆ. ಈ ಯೋಜನೆಯಲ್ಲಿ ವಿದ್ಯಾಲಯಕ್ಕೆ ಸಿಂಥೆಟಿಕ್‌ ಟ್ಯಾಂಕ್‌ ಒಂದನ್ನು ತಂದು ಇರಿಸಲಾಗಿದೆ. ಪೈಪ್‌ಲೈನ್‌ ಕಾಮಗಾರಿ ನಡೆದರೂ ವಿದ್ಯಾಲಯದ ಬೃಹತ್‌ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯತ್ತಿರುವುದರಿಂದ ಪೈಪ್‌ಲೈನ್‌ ಒಡೆದುಹೋಗಿದೆ. ಆದುದರಿಂದ ಟ್ಯಾಂಕಿನೊಳಗೆ ಈ ತನಕ ನೀರು ಹರಿದಿಲ್ಲ. ಯೋಜನೆಗೆ ನಿಧಿ ಸಾಲದೆಂಬ ಕಾರಣದಿಂದ ಕಾಮಗಾರಿ ಅಪೂರ್ಣವಾದರೂ ಗುತ್ತಿಗೆದಾರರಿಗೆ ಪಾರ್ಟ್‌ ಬಿಲ್‌ ನೀಡಲಾಗಿದೆಯಂತೆ.

ವಿದ್ಯಾಲಯದ ಕುಡಿಯುವ ನೀರಿನ ಯೋಜನೆಯನ್ನು ಪೂರ್ತಿಗೊಳಿಸಿ ಮೊಗ್ರಾಲಿನ ವಿದ್ಯಾರ್ಥಿಗಳಿಗೆ ನೀರುಣಿಸುವಂತೆಯೂ ಯೋಜನೆಯಲ್ಲಿ ಮತ್ತು ಹಿಂದಿನ ವಿವಿಧ ಯೋಜನೆಗಳಲ್ಲಿ 70 ಲಕ್ಷದ ನಿಧಿಯಲ್ಲಿ ಅಪೂರ್ಣ ಕಾಮಗಾರಿಯ ಮೂಲಕ ಭಾರೀ ಭ್ರಷ್ಟಾಚಾರ ನಡೆಸಿದ ಗುತ್ತಿಗೆದಾರರ‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಡಿ.ವೈ.ಎಫ್‌.ಐ. ಸ್ಥಳೀಯ ಘಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಮತ್ತು ಕಾಸರಗೋಡು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ತಜ್ಞರಿಂದ ವರದಿ
ಸಾರ್ವಜನಿಕರು ವಿಜಿಲೆನ್ಸ್‌ ಇಲಾಖೆಗೆ ಸಲ್ಲಿ ಸಿದ ದೂರಿಗೆ ಕಾಡಿಯಾಕುಳಂ ಕೊಳದ ನೀರು ಕುಡಿಯಲು ಯೋಗ್ಯ ವಲ್ಲವೆಂಬುದಾಗಿ ನೀರಾವರಿ ಇಲಾಖೆಯ ಅಧಿಕಾರಿಗಳು ವರದಿ ನೀಡಿದ್ದು ಉನ್ನತ ತಜ್ಞರಿಂದ ವರದಿ ಕೇಳಲಾಗಿದೆ. ಹಿಂದಿನ ಯೋಜನೆ ಯಲ್ಲಿ ವಿದ್ಯುತ್‌ ಬಿಲ್‌ ಪಾವತಿಸಲು ಬಾಕಿ ಇರುವುದರಿಂದ ಹೊಸ ಸಂಪರ್ಕಕ್ಕೆ ವಿದ್ಯುತ್‌ ಇಲಾಖೆ ತಡೆ ಹಿಡಿದಿದೆ. ನೀರಿನ ಗುಣಮಟ್ಟದ ಕುರಿತು ಉನ್ನತ ತಜ್ಞರಿಂದ ಇನ್ನಷ್ಟು ಹೆಚ್ಚಿನ ವರದಿ ಬಂದ ಬಳಿಕ ಯೋಜನೆಯನ್ನು ಪೂರ್ಣಗೊಳಿಸ ಲಾಗುವುದು.ಯಾವುದೇ ಯೋಜನೆಗೆ ಸಾರ್ವಜನಿಕರು ಸಹಕರಿಸಿದಲ್ಲಿ ಮಾತ್ರ ಯಶಸ್ವಿಯಾಗಲು ಸಾಧ್ಯ. ಎಲ್ಲದಕ್ಕೂ ವಿಜಿಲೆನ್ಸ್‌ಗೆ ದೂರು ಸಲ್ಲಿಸಿದಲ್ಲಿ ಯೋಜನೆ ಮೊಟಕುಗೊಳ್ಳುವುದು.
– ಎ.ಜಿ.ಸಿ. ಬಶೀರ್‌,
ಕಾಸರಗೋಡು ಜಿ.ಪಂ. ಅಧ್ಯಕ್ಷರು

ಮುಚ್ಚಿ ಹೋದ ಅವ್ಯವಹಾರ
ಮೊಗ್ರಾಲಿನ ವಿವಿಧ ಕುಡಿಯುವ ನೀರಿನ ಯೋಜನೆಗಳಲ್ಲಿ ಭಾರೀ ಅವ್ಯವಹಾರ ನಡೆದಿರುವುದಾಗಿ ವಿಜಿಲೆನ್ಸ್‌ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಇವರು ಕಳ್ಳರಿಗೆ ಬೆಳಕು ತೋರಿಸಿದಂತೆ ಕಾಮಗಾರಿ ಸಮರ್ಪಕವಾಗಿದೆ ಎಂದು ವರದಿ ಸಲ್ಲಿಸಿದ ಕಾರಣ ಭ್ರಷ್ಟಾಚಾರ ಮುಚ್ಚಿಹೋಗಿದೆ. ಇದೀಗ ಹೆಚ್ಚಿನ ತನಿಖೆಗಾಗಿ ಮುಖ್ಯಮಂತ್ರಿಯವರಿಗೆ ಮತ್ತು ಉನ್ನತ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.
-ಅಬ್ದುಲ್ಲ ಅರ್ಷಾದ್‌
ಸ್ಥಳೀಯ ಡಿವೈಎಫ್‌ಐ ನಾಯಕ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.