ಅನಧಿಕೃತ ಶಾಲೆಗಳು: ಜಿಲ್ಲೆಯಲ್ಲಿ 96 ವಿದ್ಯಾಲಯಗಳಿಗೆ ಬೀಗ!


Team Udayavani, Mar 26, 2018, 8:50 AM IST

School-Beega-25-3.jpg

ಕೇರಳದಲ್ಲಿ ಒಟ್ಟು 1,585 ಅನಧಿಕೃತ ಶಾಲೆಗಳಿಗೆ ನೊಟೀಸ್‌ ಕಳುಹಿಸಲಾಗಿದೆ. ಅನುಮತಿ ಇಲ್ಲದ ಶಾಲೆಗಳನ್ನು ಮುಚ್ಚುವುದರಿಂದ ತಲೆದೋರುವ ಸಮಸ್ಯೆಗಳ ಕುರಿತು ಈಗಾಗಲೇ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಮುಚ್ಚುಗಡೆಗೊಳ್ಳುವ ಶಾಲೆಗಳಿಂದಾಗಿ 3 ಲಕ್ಷದಷ್ಟು ವಿದ್ಯಾರ್ಥಿಗಳ ಹಾಗೂ 2,500ದಷ್ಟು ಅಧ್ಯಾಪಕರ ಮರು ವಿನ್ಯಾಸದ ಬಗ್ಗೆಯೂ ಸಮಾಲೋಚಿಸಲಾಗಿದೆ.

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಕೇರಳ ರಾಜ್ಯ ಸರಕಾರ, ಸಿಬಿಎಸ್‌ಇ, ಐಸಿಎಸ್‌ಇ ಇವುಗಳ ಅಂಗೀಕಾರ ಇಲ್ಲದೆ ಕಾರ್ಯಾಚರಿಸುತ್ತಿರುವ 96 ಶಾಲೆಗಳ ಅನುಮತಿ ರದ್ದುಗೊಳಿಸಿ ಶಿಕ್ಷಣ ಇಲಾಖೆ ನೊಟೀಸು ಜಾರಿ ಮಾಡಿದೆ. ಕಳೆದ ವರ್ಷ ಇದೇ ರೀತಿ ಅನುಮತಿ ಇಲ್ಲದ 16 ಶಾಲೆಗಳನ್ನು ಜಿಲ್ಲೆಯಲ್ಲಿ  ಮುಚ್ಚಲಾಗಿತ್ತು.

ಅಂಗೀಕಾರಗೊಳ್ಳದ ಖಾಸಗಿ ಶಾಲೆಗಳ ಅನುಮತಿ ರದ್ದುಗೊಳಿಸಲು ಶಿಕ್ಷಣ ಇಲಾಖೆಯು ನೊಟೀಸ್‌ ನೀಡಿದಾಗ ಕೆಲವು ಶಾಲಾ ಆಡಳಿತ ಮಂಡಳಿ ನ್ಯಾಯಾಲಯದ ಮೆಟ್ಟಿಲೇರಿ ನೊಟೀಸ್‌ಗೆ ತಡೆ ತಂದ ಕಾರಣ 2018ರ ಮಾರ್ಚ್‌ 31ರ ವರೆಗೆ ಅಂತಹ ಶಾಲೆಗಳನ್ನು ಕಾರ್ಯಾಚರಿಸಲು ನ್ಯಾಯಾಲಯವು ಅನುಮತಿ ಕೊಟ್ಟಿತ್ತು.

ಜಿಲ್ಲೆಯಲ್ಲಿ ಅತ್ಯಧಿಕ ಎಂಬಂತೆ ಕಾಸರಗೋಡು ಶಿಕ್ಷಣ ಉಪಜಿಲ್ಲೆಯಲ್ಲಿ 31ರಷ್ಟು ಅನುಮತಿ ಇಲ್ಲದ ಶಾಲೆಗಳು ಕಾರ್ಯಾಚರಿಸುತ್ತಿವೆ. ಚಿತ್ತಾರಿಕ್ಕಲ್‌ ಉಪಜಿಲ್ಲೆಯಲ್ಲಿ  ಕೇವಲ 5 ಮಾತ್ರ ಅನುಮತಿ ಇಲ್ಲದ ಶಾಲೆಗಳಿವೆ. ಅಲ್ಲದೆ ಮಂಜೇಶ್ವರ ಉಪಜಿಲ್ಲೆಯಲ್ಲಿ 14, ಬೇಕಲದಲ್ಲಿ 11, ಹೊಸದುರ್ಗದಲ್ಲಿ 20, ಚೆರ್ವತ್ತೂರಿನಲ್ಲಿ  8, ಕುಂಬಳೆ ಉಪಜಿಲ್ಲಾ ವ್ಯಾಪ್ತಿಯಲ್ಲಿ 7 ಇಂತಹ ಶಾಲೆಗಳಿವೆ. ಇವುಗಳಲ್ಲಿ ಎಲ್‌ಪಿಯಿಂದ ಹಿಡಿದು ಹೈಸ್ಕೂಲು ತನಕದ ತರಗತಿಗಳು ಕಾರ್ಯವೆಸಗುತ್ತಿವೆ. ಹೆಚ್ಚಿನ ಶಾಲೆಗಳು ಕಿರಿಯ ಪ್ರಾಥಮಿಕ ಶಾಲೆಗಳಾಗಿವೆ. ಇವಲ್ಲದೆ ಎಲ್‌ಕೆಜಿ, ಯುಕೆಜಿ ವಿಭಾಗಗಳ ಶಾಲೆಗಳು ಕೂಡ ಒಳಗೊಂಡಿವೆ. ಸಿಬಿಎಸ್‌ಇ ಅಂಗೀಕಾರದೊಂದಿಗೆ ಕಾರ್ಯಾಚರಿಸುತ್ತಿರುವ 24ರಷ್ಟು ಎಲ್‌ಪಿ, ಯುಪಿ ಶಾಲೆಗಳು ಜಿಲ್ಲೆಯಲ್ಲಿವೆ.

ಬಾಲ ಹಕ್ಕು ಆಯೋಗದ ನಿರ್ದೇಶನದ ಪ್ರಕಾರ ಕೇರಳ ಸರಕಾರ, ಸಿಬಿಎಸ್‌ಇ, ಐಸಿಎಸ್‌ಇ ಇವುಗಳ ಅನುಮತಿ ಇಲ್ಲದ ಶಾಲೆಗಳನ್ನು ಮುಚ್ಚುಗಡೆಗೊಳಿಸಲು ಆದೇಶ ಹೊರಡಿಸಲಾಗಿದ್ದು, ಅದರಂತೆ ಶಿಕ್ಷಣ ಇಲಾಖೆಯು ಮುಂದಡಿಯಿರಿಸಿದೆ. ಜಿಲ್ಲೆಯಲ್ಲಿ 96 ಶಾಲೆಗಳನ್ನು  ಮುಚ್ಚುವ ಮೂಲಕ ಸಾರ್ವಜನಿಕ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗಲಿದೆ.

2017-18ನೇ ಶೈಕ್ಷಣಿಕ ವರ್ಷದಲ್ಲಿ ಕೇರಳ ಸರಕಾರದ ಸಾರ್ವಜನಿಕ ಶಿಕ್ಷಣ ಯಜ್ಞದ ಅಂಗವಾಗಿ ಹಿಂದಿನ ವರ್ಷಕ್ಕಿಂತ 12,198 ಮಂದಿ ಮಕ್ಕಳು ಒಂದನೇ ತರಗತಿಗೆ ಹೆಚ್ಚುವರಿಯಾಗಿ ಸೇರ್ಪಡೆಗೊಂಡಿದ್ದಾರೆ. ಅಲ್ಲದೆ ಸರಕಾರಿ ಮತ್ತು  ಅನುದಾನಿತ ಶಾಲೆಗಳಲ್ಲಿ  2ರಿಂದ 9ನೇ ತರಗತಿ ವರೆಗೆ ಕೆಳಗಿನ ತರಗತಿಯಿಂದ ತೇರ್ಗಡೆ ಹೊಂದಿದವರಲ್ಲದೆ 1,45,208 ಮಂದಿ ಮಕ್ಕಳು ಅಧಿಕವಾಗಿ ಸೇರಿದ್ದಾರೆ.

ಸರಕಾರಿ ಶಾಲೆಗಳತ್ತ ಹೆಚ್ಚುತ್ತಿರುವ ಆಕರ್ಷಣೆ
ಕೇರಳದಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅನುಮತಿ ಇಲ್ಲದ ವಿದ್ಯಾಲಯಗಳು ಮುಚ್ಚುವ ಹಿನ್ನೆಲೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ತರಗತಿಗಳಿಗೆ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಲ್ಲಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇನ್ನೊಂದೆಡೆ ಮಂಜೇಶ್ವರ ಮತ್ತು ಕಾಸರಗೋಡು ಉಪಜಿಲ್ಲೆಗಳಲ್ಲಿ  ಅನುಮತಿ ಇಲ್ಲದೆ ಕಾರ್ಯಾಚರಿಸುತ್ತಿರುವ ಹಾಗೂ ಮುಚ್ಚುವ ಭೀತಿಯಲ್ಲಿರುವ ಖಾಸಗಿ ಶಾಲೆಗಳ ಮಕ್ಕಳನ್ನು ಸೆಳೆಯಲು ಅನುದಾನಿತ ಶಾಲೆಗಳು ಪೈಪೋಟಿ ನಡೆಸುತ್ತಿವೆ. ಅಲ್ಲದೆ ಅಂಗೀಕಾರವಿರುವ ಇತರ ಖಾಸಗಿ ಶಾಲೆಗಳು ಕೂಡ ಈ ಮಕ್ಕಳನ್ನು ತಮ್ಮತ್ತ ಆಕರ್ಷಿಸಲು ತಂತ್ರಗಾರಿಕೆಯಲ್ಲಿ ತೊಡಗಿವೆ. ಆದರೆ ಅನುಮತಿ ಇಲ್ಲದ ಶಾಲೆಗಳಲ್ಲಿ ಮಕ್ಕಳನ್ನು ದಾಖಲಿಸಿರುವ ಹೆತ್ತವರು ಅಥವಾ ಪೋಷಕರು ಭವಿಷ್ಯದ ದೃಷ್ಟಿಯಿಂದ ಸರಕಾರಿ ಶಾಲೆಗಳಲ್ಲಿಯೇ ತಮ್ಮ  ಮಕ್ಕಳನ್ನು ದಾಖಲಿಸಲು ಹೆಚ್ಚು ಕಾಳಜಿ ತೋರುತ್ತಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.