ಇನ್ನೂ ದುರಸ್ತಿಯಾಗದ ಮುರಿದು ಬಿದ್ದ ಮೇಲ್ಸೇತುವೆ


Team Udayavani, Aug 20, 2019, 6:10 AM IST

road

ಕಾಸರಗೋಡು: ನಗರದ ಕರಂದ ಕ್ಕಾಡ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಶೋಕ ನಗರಕ್ಕೆ ಹೋಗುವ ರಸ್ತೆ ಬಳಿ ಮೇಲ್ಸೇತುವೆ ಮುರಿದು ಬಿದ್ದು 23 ದಿನಗಳೇ ಕಳೆದರೂ ಇನ್ನೂ ದುರಸ್ತಿಯಾಗದಿರುವುದರಿಂದ ವಾಹನಗಳಿಗೆ ಮತ್ತು ಪಾದಚಾರಿಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ಜುಲೈ 28 ರಂದು ಮುಂಜಾನೆ ಮಂಗಳೂರಿನತ್ತ ಸರಕು ಹೇರಿಕೊಂಡು ಸಾಗುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಮೇಲ್ಸೇತುವೆಯ ಭದ್ರತಾ ಬೇಲಿಗೆ ಢಿಕ್ಕಿ ಹೊಡೆದು ಕೆಳಕ್ಕೆ ಉರುಳಿತ್ತು. ಈ ಸಂದರ್ಭದಲ್ಲಿ ಕೆಳಕ್ಕುರುಳಿದ ಲಾರಿ ಭದ್ರತಾ ಬೇಲಿಯನ್ನು ಕೆಡವಿತ್ತು. ಅದೃಷ್ಟ ವಶಾತ್‌ ಲಾರಿ ಸಿಬಂದಿ ಸಂಭಾವ್ಯ ದುರಂತದಿಂದ ಸಣ್ಣ ಪುಟ್ಟ ಗಾಯ ಗಳೊಂದಿಗೆ ಪಾರಾಗಿದ್ದರು. ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿರ್ಮಿ ಸಿದ್ದ ಕಬ್ಬಿಣದ ಸುರಕ್ಷಾ ಬೇಲಿಯನ್ನು ನುಚ್ಚುನೂರುಗೊಳಿಸಿ 23 ದಿನಗಳೇ ಕಳೆದು ಹೋದರೂ ಇನ್ನೂ ದುರಸ್ತಿಗೊಳಿಸಲು ಮುಹೂರ್ತ ಬಂದಿಲ್ಲ !

ಕಾಸರಗೋಡಿನಿಂದ ಮಂಗಳೂರಿಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರಂದಕ್ಕಾಡ್‌ ಅಶ್ವಿ‌ನಿ ನಗರದಲ್ಲಿ ಅಶೋಕ ನಗರಕ್ಕೆ ಸಾಗುವ ರಸ್ತೆಯ ಮೇಲೆ ನಿರ್ಮಿಸಿದ ಮೇಲ್ಸೇತುವೆಯ ಭದ್ರತಾ ಬೇಲಿ ಮುರಿದು ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಮತ್ತು ಪಾದಚಾರಿ ಗಳಿಗೆ ಅಪಾಯ ತಪ್ಪಿದ್ದಲ್ಲ. ವಾಹನಗಳು ನಿಯಂತ್ರಣ ತಪ್ಪಿದರೆ ಅಶೋಕನಗರಕ್ಕೆ ಸಾಗುವ, ಸುಮಾರು 20 ಅಡಿ ಆಳದಲ್ಲಿ ರುವ ಕಂದಕಕ್ಕೆ ಬೀಳುವುದು ಖಚಿತವಾ ಗಿದ್ದು, ಅಪಾಯವನ್ನು ಕೈಬೀಸಿ ಕರೆಯು ವಂತಿದೆ. ರಸ್ತೆಯ ಬದಿಯಲ್ಲಿ ಸಾಗಲು ಪಾದಚಾರಿಗಳಿಗೆ ಸ್ಥಳಾವಕಾಶದ ಕೊರತೆ ಯಿದ್ದು, ಪಾದಚಾರಿಗಳು ಜೀವವನ್ನು ಕೈಯಲ್ಲೇ ಹಿಡಿದುಕೊಂಡು ಹೋಗ ಬೇಕಾದ ಪರಿಸ್ಥಿತಿ ಇದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನಾ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನಗಳ ಸುರಕ್ಷೆಗೆ ಅಗತ್ಯವಾಗಿರುವ ಭದ್ರತಾ ಬೇಲಿ ಮುರಿದು ಬಿದ್ದರೂ ಇನ್ನೂ ದುರಸ್ತಿಗೆ ಕ್ರಮ ತೆಗೆದುಕೊಳ್ಳದಿರುವುದು ಅವಗಣನೆಗೆ ಸ್ಪಷ್ಟ ಉದಾಹರಣೆಯಾ ಗಿದೆ. ಕಾಸರಗೋಡಿನಿಂದ ಮಂಗಳೂರಿಗೆ ಸಾಗುವಾಗ ಹಲವೆಡೆ ಸೇತುವೆಗಳಿದ್ದು. ಈ ಪೈಕಿ ಕೆಲವು ಸೇತುವೆಗಳಲ್ಲಿನ ಭದ್ರತಾ ಬೇಲಿ ಮುರಿದು ಬಿದ್ದು ಕೆಲವು ತಿಂಗಳುಗಳೇ ಕಳೆದಿದ್ದರೂ ಅವುಗಳನ್ನು ದುರಸ್ತಿ ಮಾಡಿಲ್ಲ.

ಕಾಸರಗೋಡು ನಗರದ ಈ ಮೇಲ್ಸೇತುವೆ ಕೆಳಭಾಗದಿಂದ ಅಶೋಕ ನಗರಕ್ಕೆ ನೂರಾರು ಮಂದಿ ಸಾಗುತ್ತಿದ್ದು, ವಾಹನಗಳು ಮತ್ತೆ ಈ ಪ್ರದೇಶದಲ್ಲಿ ಅಪಘಾತಕ್ಕೆ ಕಾರಣವಾದರೆ ದೊಡ್ಡ ದುರಂತವಾಗಬಹುದು. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಂಬಂಧಪಟ್ಟವರು ಎಚ್ಚೆತ್ತು ಮೇಲ್ಸೇತುಗೆ ಭದ್ರತಾ ಬೇಲಿ ನಿರ್ಮಿಸಿ ಸಂಭವನೀಯ ದುರಂತವನ್ನು ತಪ್ಪಿಸಬೇಕಾಗಿದೆ. ಇದಕ್ಕೆ ಅಧಿಕಾರಿಗಳು ಇಚ್ಛಾಶಕ್ತಿಯನ್ನು ತೋರಬೇಕಾಗಿದೆ.

ಕೆಲವು ವರ್ಷಗಳ ಹಿಂದೆ ಇದೇ ಮೇಲ್ಸೇತುವೆಯಿಂದ ಬಸ್ಸೊಂದು ಇನ್ನೊಂದು ಮಗ್ಗುಲಿಗೆ ತಿರುಗಿ 20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿತ್ತು. ಈ ಸಂದರ್ಭದಲ್ಲಿ ಅಲ್ಲಿದ್ದ ಹಸುವೊಂದು ಬಸ್ಸಿನಡಿಗೆ ಸಿಲುಕಿ ಸಾವಿಗೀಡಾಗಿತ್ತು.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.