“ಕಾರ್ಯಕರ್ತರು ಒಗ್ಗೂಡಿ ಪಕ್ಷವನ್ನು ಬಲ ಪಡಿಸಿ’


Team Udayavani, Jul 23, 2019, 5:56 AM IST

2207PRL1ADVT.SHRIKANTH

ಪೆರ್ಲ: ಬಿಜೆಪಿ ಎಣ್ಮಕಜೆ ಪಂಚಾಯತ್‌ ಸಮಿತಿ ಕಾರ್ಯಕರ್ತರ ಸಮಾವೇಶ ಪೆರ್ಲ ಭಾರತೀ ಸದನದಲ್ಲಿ ರವಿವಾರರಂದು ನಡೆಯಿತು.

ಸಮಾವೇಶ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ನ್ಯಾ|ಕೆ.ಶ್ರೀಕಾಂತ್‌, ದೇಶ ವಿಭಜನೆಯಲ್ಲಿ ಪ್ರಮುಖ ಪಾತ್ರವಹಿಸಿದ ಜಿನ್ನಾ ಹಿಂದು ಮುಸ್ಲಿಮರ ವೈಪರೀತ್ಯಗಳನ್ನು ಎತ್ತಿ ಹಿಡಿದು ಮುಸ್ಲಿಮರಿಗೆ ಪ್ರತ್ಯೇಕ ರಾಜ್ಯ ಬೇಕೆಂಬ ಕೂಗಿನೊಂದಿಗೆ ದೇಶವಿಭಜನೆಗೆ ಕಾರಣರಾದರು.ದೇಶ ವಿಭಜನೆಗೊಂಡು 70ವರ್ಷ ಕಳೆದರೂ ಅದೇ ಪಾಕಿಸ್ಥಾನದ ಮುಸ್ಲಿಂ ಲೀಗ್‌ ಪತಾಕೆಯೊಂದಿಗೆ ಭಾರತದಲ್ಲಿ ಮತಯಾಚಿಸುತ್ತಿದೆ. ಕಳೆದ ಲೋಕ ಸಭಾ ಚುನಾವಣೆಯಲ್ಲಿ ಮುಸ್ಲಿಂ ಲೀಗ್‌ ಒತ್ತಡಕ್ಕೆ ಮಣಿದು ಕಾಂಗ್ರೇಸ್‌ ಹೊರ ಜಿಲ್ಲೆಯ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸಿದೆ.
ಸಿಪಿಐ(ಎಂ) ಪಕ್ಷದ ಜನ ವಿರೋಧಿ ನೀತಿ,ದಬ್ಟಾಳಿಕೆ,ಹಿಂಸಾ ರಾಜಕೀಯದಿಂದ ಜನರು ರೋಸಿ ಹೋಗಿ ತಿರಸ್ಕರಿಸಿದ್ದಾರೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಸಮಿತಿ ಸದಸ್ಯ ರವೀಶ ತಂತ್ರಿ ಕುಂಟಾರು ಮಾತನಾಡಿ, ಮಂಜೇಶ್ವರ ಉಪ ಚುನಾವಣೆ ಸಮೀಪಿಸಿದ್ದು ಕಾರ್ಯಕರ್ತರು ಒಗ್ಗೂಡಿ ಪಕ್ಷವನ್ನು ಬಲ ಪಡಿಸುವಂತೆ ಕರೆ ನೀಡಿದರು.

ಎಣ್ಮಕಜೆ ಪಂ.ಸಮಿತಿ ಉಪಾಧ್ಯಕ್ಷ ರಮಾನಂದ ಎಡಮಲೆ ಅಧ್ಯಕ್ಷತೆ ವಹಿಸಿದ್ದರು.ಮಂಜೇಶ್ವರ ಮಂ.ಅಧ್ಯಕ್ಷ ಸತೀಶ್ಚಂದ್ರ ಭಂಡಾರಿ ಕೋಳಾರು, ಕಾಸರಗೋಡು ಮಂ.ಅಧ್ಯಕ್ಷ ಸುಧಾಮ ಗೋಸಾಡ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಮಾಜ ಸೇವಕರಾದ ಸುಂದರ ನಾಯ್ಕ ಖಂಡಿಗೆ,ಗೋವಿಂದ ನಾಯ್ಕ ಬಜಕೂಡ್ಲು , ವೆಂಕಟ್ರಮಣ ಭಟ್‌ ಎಡಮಲೆ ಅವರನ್ನು ಅಭಿನಂದಿಸಲಾಯಿತು.

ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಪುಷ್ಪಾ ಅಮೆಕ್ಕಳ ಉಪಸ್ಥಿತರಿದ್ದರು. ಬಿಜೆಪಿ ಎಣ್ಮಕಜೆ ಪಂ.ನೂತನ ಸಮಿತಿ ರಚಿಸಲಾಯಿತು.ಅಧ್ಯಕ್ಷರಾಗಿ ಉದಯ ಚೆಟ್ಟಿಯಾರ್‌ ಬಜಕೂಡ್ಲು , ಉಪಾಧ್ಯಕ್ಷರಾಗಿ ರಮಾನಂದ ಎಡಮಲೆ ಮತ್ತು ಪದ್ಮಶೇಖರ್‌ ನೇರೋಳು, ಕಾರ್ಯದರ್ಶಿಗಳಾಗಿ ಸತೀಶ್‌ ಕುಲಾಲ್‌ ನಲ್ಕ ,ಸುರೇಶ್‌ ವಾಣೀನಗರ ಹಾಗೂ 9 ಮಂದಿ ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಪಂ.ಸಮಿತಿ ಉಪಾಧ್ಯಕ್ಷ ಪದ್ಮಶೇಖರ್‌ ನೇರೋಳು ಸ್ವಾಗತಿಸಿ,ಪ್ರಧಾನ ಕಾರ್ಯದರ್ಶಿ ನಾರಾಯಣ ನಾಯ್ಕ ಅಡ್ಕಸ್ಥಳ ವಂದಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.