ಅಂಬಿಲಡ್ಕ ನವಸೇವಾ ವೃಂದದ ವಾರ್ಷಿಕೋತ್ಸವ: ಸಾಧಕರಿಗೆ ಸಮ್ಮಾನ
Team Udayavani, Apr 13, 2018, 9:20 AM IST
ಕುಂಬಳೆ: ನವಸೇವಾ ವೃಂದ ಅಂಬಿಲಡ್ಕ ಇದರ ವಾರ್ಷಿಕೋತ್ಸವ, ಅಂಬಿಲಡ್ಕ ಶ್ರೀ ಪೂಮಾಣಿ ಕಿನ್ನಿಮಾಣಿ ಕ್ಷೇತ್ರದ ವಾರ್ಷಿಕ ಜಾತ್ರೆಯ ದ್ವಿತೀಯ ದಿನದ ಕಾರ್ಯಕ್ರಮ ಜರಗಿತು. ಅಧ್ಯಕ್ಷತೆಯನ್ನು ಕ್ಷೇತ್ರದ ಆಡಳಿತ ಮೊಕ್ತೇಸರ ಬಂಬ್ರಾಣ ಯಜಮಾನ್ ನಿತ್ಯಾನಂದ ಅಡ್ಯಂತಾಯ ವಹಿಸಿದರು. ಸಮಾರಂಭದಲ್ಲಿ ನಿವೃತ್ತ ವಿಶ್ರಾಂತ ಪತ್ರಕರ್ತ ಮಲಾರ್ ಜಯರಾಮ ರೈ ಅತಿಥಿಯಾಗಿ ಭಾಗವಹಿಸಿದರು. ಸಮಾರಂಭದಲ್ಲಿ ವಿವಿಧ ರಂಗಗಳ ಸಾಧಕ ರಾದ ಮೃದಂಗ ವಿದ್ವಾನ್ ಬಾಬು ರೈ ಕೋಟೆಕ್ಕಾರು, ಇಚ್ಲಂಪಾಡಿ ಎಸ್.ಬಿ.ಎಸ್. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪಿ. ನರಹರಿ, ರಾಜ್ಯ ಮಟ್ಟದ ಕಬಡ್ಡಿ ಆಟಗಾರ ನಿತಿನ್ರಾಜ್ ಬತ್ತೇರಿ, ಧನ್ಯಶ್ರೀ ಅಂಬಿಲಡ್ಕ ಅವರನ್ನು ಸಮ್ಮಾನಿಸಲಾಯಿತು. ಬಿ.ಎಸ್. ಅಣ್ಣಪ್ಪ ಸ್ವಾಗತಿಸಿದರು. ಭೋಜರಾಜ ಬೆಜಪ್ಪೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ