ಅಂತ್ಯೋದಯ ರೈಲು : ಜ. 5ರಂದು ಕಾಸರಗೋಡಿನಲ್ಲಿ ಕೊನೆಯ ನಿಲುಗಡೆ


Team Udayavani, Dec 26, 2018, 2:10 AM IST

indian-railway-650.jpg

ಕಾಸರಗೋಡು: ಅಂತ್ಯೋದಯ ರೈಲು ಎಕ್ಸ್‌ಪ್ರೆಸ್‌ಗೆ ಜನವರಿಯಿಂದ ಎರಡು ನಿಲುಗಡೆ ಕಡಿಮೆಯಾಗಲಿದೆ. ತಾತ್ಕಾಲಿಕವಾಗಿ ಮಂಜೂರು ಮಾಡಿದ ಕಾಸರಗೋಡು, ಆಲಪ್ಪುಳ ನಿಲುಗಡೆಗಳ ಕಾಲಾವಧಿ ಮುಂದಿನ ತಿಂಗಳು ಮುಗಿಯುವುದರಿಂದ ಈ ಎರಡು ನಿಲುಗಡೆಗಳು ರದ್ದಾಗಲಿವೆ. ಅದರಂತೆ ಕಾಸರಗೋಡಿನಲ್ಲಿ  ಜ. 5ರವರೆಗೂ ಆಲಪ್ಪುಳದಲ್ಲಿ ಜ. 12ರ ತನಕವೂ ನಿಲುಗಡೆ ಮಂಜೂರು ಮಾಡಲಾಗಿತ್ತು. ಈ ನಿಲುಗಡೆಗಳು ನಿಗದಿತ ಕಾಲಾವಧಿ ಮುಗಿದ ಕೂಡಲೇ ರದ್ದಾಗಲಿವೆ. ಇದೇ ವೇಳೆ ತಿರೂರಿನಲ್ಲಿ ನೀಡಿದ ನಿಲುಗಡೆ ಮಾರ್ಚ್‌ ತಿಂಗಳಿಗೆ ಮುಗಿಯಲಿದೆ.

6 ತಿಂಗಳಿಗೆ ತಾತ್ಕಾಲಿಕವಾಗಿ ಮಂಜೂರು ಮಾಡಿದ ನಿಲುಗಡೆಗಳನ್ನು ಬಳಿಕ ಸಾಮಾನ್ಯವಾಗಿ ಮುಂದುವರಿಸಲಾಗುವುದು. ಆದರೆ ರೈಲ್ವೇ ಟೈಮ್‌ ಟೇಬಲ್‌ನಿಂದ ರೈಲು ಸಂಚಾರದ ವರೆಗೆ ಸಮಸ್ಯೆ ಸೃಷ್ಟಿಸಿದ ಅಂತ್ಯೋದಯದ ಈ ನಿಲುಗಡೆಗಳು ಇನ್ನು ಮುಂದುವರಿಯದು ಎಂಬ ಆತಂಕದಲ್ಲಿ ಪ್ರಯಾಣಿಕರಿದ್ದಾರೆ. ಈಗಾಗಲೇ ಆದಾಯ ಕಡಿಮೆ ಎಂದೂ ಹೇಳಲಾಗುತ್ತಿದೆ. ಸಂಪೂರ್ಣ ಜನರಲ್‌ ಕಂಪಾರ್ಟ್‌ಮೆಂಟ್‌ಗಳಾಗಿ ಸಾಗುವ ಈ ರೈಲುಗಾಡಿಗೆ ಕೊಚ್ಚುವೇಳಿಯಿಂದ ಮಂಗಳೂರು ಮಧ್ಯೆ ಕೇವಲ 9 ನಿಲುಗಡೆ ಮಾತ್ರವಿದೆ. ಕೊಲ್ಲಂ, ಆಲಪ್ಪುಳ, ಎರ್ನಾಕುಳಂ ಜಂಕ್ಷನ್‌, ತೃಶ್ಶೂರು, ಶೋರ್ನೂರು, ತಿರೂರು, ಕಲ್ಲಿಕೋಟೆ, ಕಣ್ಣೂರು, ಕಾಸರಗೋಡು ಇವುಗಳು ರೈಲಿನ ನಿಲುಗಡೆ ಕೇಂದ್ರಗಳು.

ವಾರದಲ್ಲಿ ಎರಡು ದಿನ ಮಾತ್ರ ಈ ರೈಲು ಗಾಡಿ ಸಂಚರಿಸುತ್ತಿದೆ. ಗುರುವಾರ ಮತ್ತು ಶನಿವಾರಗಳಂದು ಕೊಚ್ಚುವೇಳಿಯಿಂದ ಹೊರಟರೆ ಶುಕ್ರವಾರ ಹಾಗೂ ರವಿವಾರಗಳಂದು ಮಂಗಳೂರಿನಿಂದ ಹಿಂದಿರುಗುತ್ತದೆ. ರಾತ್ರಿ 9.25ಕ್ಕೆ ಕೊಚ್ಚುವೇಳಿಯಿಂದಲೂ, ರಾತ್ರಿ 8ಗಂಟೆಗೆ ಮಂಗಳೂರಿನಿಂದಲೂ ಈ ರೈಲು ಸಂಚಾರ ನಡೆಸುತ್ತಿದೆ. ಈ ರೈಲು ಗಾಡಿಗೆ ಕಾಸರಗೋಡಿನಲ್ಲಿ ನಿಲುಗಡೆ ನೀಡಬೇಕೆಂದು ನಡೆಸಿದ ಹೋರಾಟದ ಫಲವಾಗಿ ನಿಲುಗಡೆ ಲಭಿಸಿತ್ತು. ಜುಲೈ 6ರಂದು ಪ್ರಥಮವಾಗಿ ಕಾಸರಗೋಡಿನಲ್ಲಿ ಮತ್ತು  ಜುಲೈ 12ರಂದು ಆಲಪ್ಪುಳದಲ್ಲಿ ರೈಲು ಗಾಡಿಗೆ ನಿಲುಗಡೆ ಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ 6 ತಿಂಗಳು ಕಳೆಯುವ ಜನವರಿ 5ರಂದು ಕಾಸರಗೋಡಿನಲ್ಲಿ ಮತ್ತು ಜನವರಿ 12ರಂದು ಆಲಪ್ಪುಳದಲ್ಲಿ  ನಿಲುಗಡೆ ರದ್ದಾಗಲಿದೆ. ಈ ಮಧ್ಯೆ ನಿಲುಗಡೆ ಮುಂದುವರಿಸುವ ಯಾವುದೇ ಆದೇಶವನ್ನು ರೈಲ್ವೇ ವಿಭಾಗವು ಇನ್ನೂ ಹೊರಡಿಸಿಲ್ಲ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.