ಸಂಕಷ್ಟಗಳಿಗೆ ಸೆಡ್ಡುಹೊಡೆದು ಮಾದರಿಯಾದ ಆಶ್ರಯ್‌


Team Udayavani, May 11, 2019, 6:11 AM IST

10KSDE5-AASHRAY

ಜಿಲ್ಲೆಯ ಕುಳತ್ತೂರು ನಿವಾಸಿಯಾಗಿರುವ ಇವರು ಬೆಷಿಟ್‌ ಡಿಸೀಸ್‌ ಎಂಬ ಅತ್ಯಪರೂಪ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹಂತಹಂತವಾಗಿ ದೇಹದ ಎಲ್ಲ ಅಂಗಾಗಗಳನ್ನೂ ಕ್ಷೀಣಿಸುವಂತೆ ಮಾಡುವ ಈ ರೋಗ ಈಗಾಗಲೇ ಇವರನ್ನು ಸಾಕಷ್ಟು ಬಳಲಿಸಿದೆ. ಮಾತನಾಡಲು, ಬಾಯಿ ತೆರೆಯಲೂ ಸಾಧ್ಯವಿಲ್ಲದ ಸ್ಥಿತಿಯಲ್ಲಿ ಇವರು ತೊಳಲುತ್ತಿದ್ದಾರೆ.

ಕಾಸರಗೋಡು: ತಮಗಿರುವ ಮಿತಿಗಳನ್ನು ಹಿಂದೇಟು ಹಾಕಿಸಿ ಹೈಯರ್‌ ಸೆಕೆಂಡರಿ ಪರೀಕ್ಷೆಯಲ್ಲಿ 1,200ರಲ್ಲಿ 1,133 ಅಂಕಗಳಿಸಿರುವ ಆಶ್ರಯ್‌ ಕುಮಾರ್‌ ಇತರರಿಗೆ ಮಾದರಿಯಾಗಿದ್ದಾರೆ.

ಆಶ್ರಯ್‌ ಚಟ್ಟಂಚಾಲ್‌ ಹೈಯರ್‌ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿದ್ದಾರೆ. ವಿಜ್ಞಾನ ಇವರ ಪ್ರಧಾನ ಕಲಿಕಾ ವಿಷಯವಾಗಿದೆ. ರೋಗಬಾಧೆಯ ಪರಿಣಾಮ ಕೆಲವು ತಿಂಗಳು ಮಾತ್ರ ಶಾಲೆಗೆ ತೆರಳಲು ಇವರಿಗೆ ಸಾಧ್ಯವಾಗಿತ್ತು. ಮನೆಯಲ್ಲಿ ಕುಳಿತು ಇವರು ನಡೆಸಿದ ಅಹೋರಾತ್ರಿ ಕಲಿಕೆಯ ಹಿನ್ನೆಲೆಯಲ್ಲಿ ಹೈಯರ್‌ ಸೆಕೆಂಡರಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿ ನಾಡಿಗೆ ಅಭಿಮಾನ ತಂದಿದ್ದಾರೆ. ಎಸ್‌.ಎಸ್‌.ಎಲ್‌.ಸಿ.ಯಲ್ಲೂ ಇವರು ಎಲ್ಲ ವಿಷಯಗಳಲ್ಲೂ “ಎ’ ಶ್ರೇಣಿ ಪಡೆದಿದ್ದರು. ವಿಜ್ಞಾನದಲ್ಲಿ ಈಗಾಗಲೇ ಇವರು ತಮ್ಮ ನೈಪುಣ್ಯವನ್ನು ಖಚಿತಪಡಿಸಿದ್ದಾರೆ.

ಐರಿಶ್‌ ವಿಜ್ಞಾನ ಮೇಳದಲ್ಲಿ
ರಾಜ್ಯದ ಪ್ರತಿನಿಧಿ
ದೇಶದ ಅತಿ ಶ್ರೇಷ್ಠ ವಿಜ್ಞಾನ ಮೇಳಗಳಲ್ಲಿ ಒಂದಾದ ಐರಿಶ್‌ ವಿಜ್ಞಾನ ಮೇಳದಲ್ಲಿ ಎರಡು ಬಾರಿ ರಾಜ್ಯದ ಪ್ರತಿನಿ ಧಿಯಾಗಿ ಭಾಗವಹಿಸಿ ಸೈ ಎನಿಸಿದ್ದಾರೆ. 2018ರಲ್ಲಿ ನಡೆದಿದ್ದ ಐರಿಶ್‌ ವಿಜ್ಞಾನ ಮೇಳದಲ್ಲಿ ಆಯ್ಕೆಗೊಂಡಿದ್ದ ಮೂರು ಪ್ರಬಂಧಗಳಲ್ಲಿ ಒಂದು ಇವರದಾಗಿತ್ತು. ಎಂಡೋಸಲಾ #ನ್‌ ಸಂತ್ರಸ್ತ ಮಕ್ಕಳ ಉದರದಲ್ಲಿ ಮೈಕ್ರೋ ಆರ್ಗನೈಸಂನ ಕುರಿತು ಇವರು ಅಂದು ಪ್ರಬಂಧ ರಚಿಸಿ, ಮಂಡಿಸಿದ್ದರು.

ಕೂಲಿಕಾರ್ಮಿಕ ರವೀಂದ್ರನ್‌-ದೀಪಾ ದಂಪತಿಯ ಎರಡನೇ ಮಗ ಈ ಆಶ್ರಯ್‌. ಬಾಲ್ಯದಿಂದಲೇ ಶಿಕ್ಷಣದಲ್ಲಿ ಅಪಾರ ಚುರುಕುತನ ಹೊಂದಿದ್ದರು. ರವೀಂದ್ರನ್‌ ಅವರ ಅಕಾಲಿಕ ಮರಣದ ನಂತರ ಕೊಳತ್ತೂರು ಗ್ರಾಮ ಕಚೇರಿಯಲ್ಲಿ ತಾತ್ಕಾಲಿಕ ಹುದ್ದೆಯಲ್ಲಿರುವ ದೀಪಾ ಅವರ ಅಲ್ಪ ವೇತನವೇ ಈ ಮನೆಗೆ ಆಧಾರವಾಗಿದೆ. ನರ್ಸಿಂಗ್‌ ಕಲಿಕೆ ನಡೆಸುತ್ತಿರುವ ಅಣ್ಣ ಮತ್ತು ಹತ್ತನೇ ತರಗತಿಯಲ್ಲಿ ಕಲಿಕೆ ನಡೆಸುತ್ತಿರುವ ತಮ್ಮನೂ ಆಶ್ರಯ್‌ಗೆ ಇದ್ದಾರೆ.

ಬೆಳಗ್ಗೆ 5 ರಿಂದ 7 ಗಂಟೆ ವರೆಗೆ , ರಾತ್ರಿ 7 ರಿಂದ 11 ಗಂಟೆ ವರೆಗೆ ಇವರು ಕಲಿಕೆ ನಡೆಸುತ್ತಾರೆ. ತಮ್ಮ ಕಲಿಕೆ ಅತ್ಯಧಿ ಕ ಪ್ರೋತ್ಸಾಹ ನೀಡುತ್ತಿರುವ ತಮ್ಮ ತಾಯಿ, ಕೇಂದ್ರ ವಿವಿಯ ಸಹಾಯಕ ಪ್ರಾಚಾರ್ಯ ಟೋನಿ ಗ್ರೇಸ್‌ ಮತ್ತು ಶಾಲಾ ಪ್ರಾಂಶುಪಾಲ ನಾರಾಯಣನ್‌ ಅವರನ್ನು ಆಶ್ರಯ್‌ ಕೃತಜ್ಞತೆಯಿಂದ ನೆನಪಿಸಿಕೊಳ್ಳುತ್ತಾರೆ. ಒಬ್ಬ ಉತ್ತಮ ಡಾಕ್ಟರ್‌ ಆಗಬೇಕು ಎಂಬುದು ಆಶ್ರಯ್‌ ಅವರ ಬದುಕಿನ ಕನಸಾಗಿದೆ. ನೀಟ್‌ ಪರೀಕ್ಷೆಯ ಫಲಿತಾಂಶ ತಮ್ಮ ಆಗ್ರಹಕ್ಕೆ ಪೂರಕವಾಗಲಿದೆ ಎಂದವರು ನಿರೀಕ್ಷಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.