ಕಾಸರಗೋಡಿನ ಬೆಳ್ಳೂರು ದೊಂಪತ್ತಡ್ಕ ಕಗ್ಗಲ್ಲು ಕೋರೆ ಪರವಾನಗಿ ನವೀಕರಿಸದಂತೆ ಆಗ್ರಹ


Team Udayavani, Apr 2, 2019, 2:41 PM IST

ak-1

ಕಾಸರಗೋಡು: ಕಾಸರಗೋಡು ಜಿಲ್ಲೆಯ ಬೆಳ್ಳೂರು ಪಂಚಾಯತಿಗೆ ಒಳಪಟ್ಟ ದೊಂಪತ್ತಡ್ಕ ಕಗ್ಗಲ್ಲು ಕೋರೆಯ ಪರವಾನಗಿ ನವೀಕರಿಸಬಾರದು ಎಂದು ಬಿಜೆಪಿ ಜಿಲ್ಲಾ ಘಟಕ ಆಗ್ರಹಿಸಿದೆ.

ಬೆಳ್ಳೂರು ಗ್ರಾ.ಪಂ. ವ್ಯಾಪ್ತಿಯ ದೊಂಪತ್ತಡ್ಕದಲ್ಲಿ ಕಳೆದ 30 ವರ್ಷಗಳಿಂದ ಎಗ್ಗಿಲ್ಲದೆ ನಡೆಯುತ್ತಿರುವ ಕಗ್ಗಲ್ಲು ಕೋರೆ ಆಸುಪಾಸು ಪ್ರದೇಶಗಳಲ್ಲಿ ನೀರಿನ ಕ್ಷಾಮ, ಭೂ ಸವಕಳಿ ಉಂಟಾಗಿದೆ. ಪ್ರಾಕೃತಿಕ ಹಾಗೂ ಆರೋಗ್ಯ ಸಮಸ್ಯೆಗಳು ತಲೆದೋರಿವೆ. ಕೋರೆ ಪರವಾನಿಗೆ ಮುಗಿದ ನಂತರ ಮುಂದೆ ಪರವಾನಗಿ ನವೀಕರಿಸಬಾರದು ಎಂದು ಒತ್ತಾಯಿಸಿದೆ.

ಮುಳ್ಳೇರಿಯದಲ್ಲಿ ಬಿಜೆಪಿ ಪಂಚಾಯತಿ ಸಮಿತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್‌, ರಾಜ್ಯ ಸಮಿತಿ ಸದಸ್ಯ ಸುರೇಶ್‌ ಕುಮಾರ್‌ ಶೆಟ್ಟಿ, ಮಂಡಲಾಧ್ಯಕ್ಷ ಸುದಾಮ ಗೋಸಾಡ, ಪ್ರಧಾನ ಕಾರ್ಯದರ್ಶಿಗಳಾದ ಹರೀಶ್‌ ನಾರಂಪಾಡಿ ಸುಕುಮಾರ ಕುದ್ರೆಪ್ಪಾಡಿ, ಬೆಳ್ಳೂರು ಬಿಜೆಪಿ ಪಂ. ಸಮಿತಿ ಕಾರ್ಯದರ್ಶಿ ಜಯಾನಂದ ಕುಳ, ಜನ ಪ್ರತಿನಿಧಿಗಳಾದ ಶ್ರೀಧರ ಬೆಳ್ಳೂರು, ಶಿವರಾಮ ಎನ್‌.ಎ., ಮಾಲತಿ ಜೆ.ರೈ, ಮತ್ತಿತರರು ಭಾಗವಹಿಸಿದ್ದರು. ಎಪ್ರಿಲ್‌ ತಿಂಗಳ ಮೊದಲ ವಾರ ಪಂಚಾಯತಿ ಆಡಳಿತ ಸಮಿತಿ ಸಭೆ ನಡೆಯಲಿದೆ. ಈ ವೇಳೆ ಕಪ್ಪು ಕಲ್ಲಿನ ಕೋರೆಯ ಪರವಾನಗಿ ನವೀಕರಿಸದಂತೆ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಚನೆ ಲಭಿಸಿದೆ.


ಕೋರೆಯಲ್ಲಿ ಭಾರಿ ನ್ಪೋಟಕಗಳನ್ನು ಬಳಸಲಾಗುತ್ತಿದೆ. ಇದರಿಂದ, ಶಬ್ದ ಮಾಲಿನ್ಯ , ಭೂ ಕಂಪನ, ಭೂ ಕುಸಿತ, ಸಮೀಪದ ಮನೆ ಗೋಡೆಗಳಲ್ಲಿ ಬಿರುಕು ಉಂಟಾಗಿದ್ದು , ಸ್ಥಳೀಯರು ಹಾಗೂ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ಗಮನ ಸೆಳೆದಿದೆ. ಬೆಳ್ಳೂರು, ಏತಡ್ಕ ಪರಿಸರ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಈ ಹಿಂದೆ ಭಾರಿ ಪ್ರತಿಭಟನೆ ನಡೆಸಿದ್ದರು. ಕಪ್ಪು ಕಲ್ಲು ಕೋರೆ ಮಾಲೀಕರು ಸ್ಥಳೀಯವಾಗಿ ಜನರ ಬಾಯಿ ಮುಚ್ಚಿಸಲು ಆಮಿಷ ಒಡ್ಡಿದ್ದು , ಹೋರಾಟದ ನೇತೃತ್ವ ವಹಿಸಿದ ಹಲವರಿಗೆ ಬೆದರಿಕೆ, ಹುಸಿ ಆಪಾದನೆ, ಸುಳ್ಳು ದೂರು ನೀಡುತ್ತಿರುವುದಾಗಿಯೂ ಹೇಳಲಾಗುತ್ತಿದೆ.

ಕಳೆದ ಅಕ್ಟೋಬರ್‌ 10 ರಂದು ಬೆಳ್ಳೂರು ಪಂಚಾಯಿತಿ ಕೋರೆಯ ಪರವಾನಿಗೆ ನವೀಕರಿಸದಿರಲು ಹಾಗೂ ರದ್ದುಗೊಳಿಸಲು ತೀರ್ಮಾನಿಸಿದ್ದರೂ ಕೆಲವೊಂದು ಕಾನೂನು ಅಡಚಣೆಗಳಿಂದ ಅದನ್ನು ಜಾರಿಗೆ ತರಲು ಸಾಧ್ಯವಾಗಿರಲಿಲ್ಲ .

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.