ರಾಜ್ಯದ ಏಕೈಕ ಸರಕಾರಿ ಯುನಾನಿ ಆಸ್ಪತ್ರೆಗೆ ಭಡ್ತಿ ಭಾಗ್ಯ

ಮೊಗ್ರಾಲ್‌ನ ಚಿಕಿತ್ಸಾಲಯ

Team Udayavani, Nov 18, 2019, 5:43 AM IST

17-KBL-1

ಕುಂಬಳೆ: ಕೇರಳ ರಾಜ್ಯದ ಏಕೈಕ ಸರಕಾರಿ ಯುನಾನಿ ಆಸ್ಪತ್ರೆಯು ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೊಗ್ರಾಲಿನಲ್ಲಿ ಕಾರ್ಯವೆಸಗುತ್ತಿದೆ. ಹಿಂದಿನ ಆರೋಗ್ಯ ಸಚಿವ ಎ.ಸಿ. ಷಣ್ಮುಖದಾಸ್‌ ಅವರು ಕಳೆದ 1991 ರಲ್ಲಿ ಉದ್ಘಾಟಿಸಿದ ಈ ಆಸ್ಪತ್ರೆ ಕಟ್ಟಡಕ್ಕೆ ರಜತ ವರ್ಷದಾಟಿದೆ.

ಈ ತನಕ ಹೊರರೋಗಿಗಳಿಗೆ ಮಾತ್ರಚಿಕಿತ್ಸೆ ನೀಡುತ್ತಿದ್ದ ಹಳೆಯ ಓಬಿರಾಯನ ಕಾಲದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಆಸ್ಪತ್ರೆಗೆ ಇದೀಗ ಸುವರ್ಣ ಅವಕಾಶ ಬಂದೊದಗಿದೆ. ಕೇಂದ್ರ ರಾಜ್ಯ ಸರಕಾರದ ನ್ಯಾಶನಲ್‌ ಆಯುಷ್‌ ಮಿಷನ್‌ ಯೋಜನೆಯಲ್ಲಿ ಒಳಪಡಿಸಿ ಆಸ್ಪತ್ರೆಯ ಅಭಿವೃದ್ಧಿಗೆ 23 ಲಕ್ಷ ರೂ. ನಿಧಿ ಮಂಜೂರುಗೊಳಿಸಿದೆ. ಈ ಯೋಜನೆಯಲ್ಲಿ ಆಸ್ಪತ್ರೆಯ ಹಳೆಯ ಕಟ್ಟಡವನ್ನು ನವೀಕರಿಸಲಾಗಿದೆ. ಇದರ ಕಾಮಗಾರಿ ಪೂರ್ಣಗೊಂಡಿದೆ. ಆಸ್ಪತ್ರೆಯಲ್ಲಿ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡುವ ಒಳರೋಗಿ ವಿಭಾಗ ವ್ಯವಸ್ಥೆಯ ಹಾಸಿಗೆ ಹೊಂದಿದ ಆಸ್ಪತ್ರೆಯಾಗಿ ಭಡ್ತಿಗೊಳಿಸಿ ರಾಜ್ಯ ಸರಕಾರ ಅಂಗೀಕರಿಸಿದೆ. ಕುಂಬಳೆ ಗ್ರಾಮ ಪಂಚಾಯತ್‌ ವತಿಯಿಂದ 4 ಲಕ್ಷ ರೂ. ವೆಚ್ಚದಲ್ಲಿ ಲ್ಯಾಬ್‌ ನಿರ್ಮಿಸಿದೆ. ಲ್ಯಾಬ್‌ಟೆಕ್ನಿಶಿಯನ್‌ ಹುದ್ದೆಯನ್ನು ದಿನವೇತನದಲ್ಲಿ ನೇಮಕಗೊಳಿಸಲಾಗಿದೆ.
ಡಾ| ಪ್ರಭಾಕರನ್‌ ಆಯೋಗದ ಕಾಸರಗೋಡು ಅಭಿವೃದ್ಧಿ ಯೋಜನೆಯಲ್ಲಿ ಇದೀಗ 50 ಲಕ್ಷ ರೂ. ಯೋಜನೆಗೆ ತಾಂತ್ರಿಕ ಅನುಮತಿ ದೊರಕಿದೆ. ಆಸ್ಪತ್ರೆಯ ಹಳೆ ಕಟ್ಟಡದ ಹಿಂದಿನ ಭಾಗದಲ್ಲಿ 30 ಹಾಸಿಗೆಯನ್ನು ಹೊಂದಿದ ನೂತನ ಕಟ್ಟಡ ನಿರ್ಮಾಣದ ಕಾಮಗಾರಿ ಮುಂದಿನವಾರ ಆರಂಭವಾಗಲಿರುವುದು.

ರಾಜ್ಯ ಸರಕಾರವು ಮೊಗ್ರಾಲ್‌ ಸರಕಾರಿ ಹಯ್ಯರ್‌ ಸೆಕೆಂಡರಿ ವೊಕೇಶನಲ್‌ ವಿದ್ಯಾಲಯವನ್ನು ಅಂತಾರಾಷ್ಟ್ರ ಮಟ್ಟದ ವಿದ್ಯಾಲಯವಾಗಿ ಪರಿವರ್ತಿ ಸಲು ಲಕ್ಷಗಟ್ಟಲೆ ರೂ. ನಿಧಿ ಮಂಜೂರುಗೊಳಿಸಿ ಇದರ ಕಾಮಗಾರಿ ಭರದಿಂದ ನಡೆಯುತ್ತಿರುವಾಗ ಇದೀಗ ಇಲ್ಲಿನ ಸರಕಾರಿ ಯುನಾನಿ ಆಸ್ಪತ್ರೆಯನ್ನು ನ್ಯಾಶನಲ್‌ ಆಯುಷ್‌ ಮಿಷನ್‌ ಯೋಜನೆಯಲ್ಲಿ ಒಳಪಡಿಸಿರುವುದರಿಂದ ಸ್ಥಳೀಯರು ಹೆಮ್ಮೆ ಪಡುವಂತಾಗಿದೆ.
ಸುಮಾರು 25 ವರ್ಷಗಳಿಂದ ಶಿಥಿಲ ಹಳೆಯ ಕಟ್ಟಡದಲ್ಲಿ ಅವ್ಯವಸ್ಥೆಯಲ್ಲಿ ಕಾರ್ಯಾಚರಿಸುತ್ತಿದ್ದ ಆಸ್ಪತ್ರೆಯ ದುಸ್ಥಿತಿಯನ್ನು ಪರಿಗಣಿಸಿದ ಸರಕಾರದ ನಿಲುವಿಗೆ ಆಸ್ಪತ್ರೆ ಫಲಾನುಭವಿಗಳು ಸಂತಸಪಡುವಂತಾಗಿದೆ.

ಉತ್ತಮ ಸೇವೆ ದೊರಕಲಿದೆ
ಈ ಆಸ್ಪತ್ರೆಗೆ ನಿತ್ಯ ನೂರಕ್ಕೂ ಮಿಕ್ಕಿ ರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಿರುವರು. ಈ ತನಕ ಕೆಲವೊಂದು ಅವ್ಯವಸ್ಥೆಯಲ್ಲೂ ಸರಕಾರದ ಸೇವೆ ನೀಡಲಾಗಿದೆ. ಹೆಚ್ಚಿನ ಸೇವೆಗಾಗಿ ಇನ್ನೋರ್ವ ವೈದ್ಯರನ್ನು ಸರಕಾರ ನೇಮಕಗೊಳಿಸಿದೆ. ಮುಂದಿನ ದಿನಗಳಲ್ಲಿ ಸಕಲ ಸೌಲಭ್ಯಗಳೊಂದಿಗೆ ಆಸ್ಪತ್ರೆಯ ಸೇವೆ ಸಾರ್ವಜನಿಕರಿಗೆ ದೊರಕಲಿದೆ.
ಡಾ| ಝಕೀರಾಲಿ,
ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ

ಆರೋಪ ಮುಕ್ತವಾಗಲಿ
ರಾಜ್ಯಕ್ಕೆ ಹೆಮ್ಮೆಯಾಗಿರುವ ಮೊಗ್ರಾಲ್‌ ಯುನಾನಿ ಆಸ್ಪತ್ರೆಗೆ ಸರಕಾರದಿಂದ ಮಂಜೂರಾದ ಅಭಿವೃದ್ಧಿ ಯೋಜನೆಯ ಕಾಮಗಾರಿ ಅತ್ಯಂತ ಶೀಘ್ರವಾಗಿ ಉತ್ತಮ ಗುಣಮಟ್ಟದೊಂದಿಗೆ ನಡೆದು ಹಲವು ವರ್ಷಗಳಿಂದ ಆಸ್ಪತ್ರೆಯ ಅವಗಣನೆ ಎಂಬ ಆರೋಪದಿಂದ ಮುಕ್ತವಾಗಬೇಕೆಂಬುದಾಗಿ ಸಾರ್ವಜನಿಕರ ಬೇಡಿಕೆಯಾಗಿದೆ.
-ಮೂಸಾ ಮೊಗ್ರಾಲ್‌
ಮಾಜಿ ಸದಸ್ಯರು ಕುಂಬಳೆ ಗ್ರಾ.ಪಂ.

-ಅಚ್ಯುತ ಚೇವಾರ್‌

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.