ಸೌಹಾರ್ದತೆಯಲ್ಲಿ ಏಕತೆ ಮೆರೆದ ಕಾಸರಗೋಡಿನ ಭಟ್ಟರು


Team Udayavani, May 15, 2019, 7:30 PM IST

battaru1

ಬದಿಯಡ್ಕ: ಮಗನ ಮದುವೆ ದಿನ ಮುಸ್ಲಿಮರಿಗೆ ಇಫ್ತಾರ್‌ ಕೂಟ ಏರ್ಪಡಿಸುವ ಮೂಲಕ ಸೌಹಾರ್ದತೆ ಮೆರೆದು ಮಾದರಿಯಾಗಿದ್ದಾರೆ ಬದಿಯಡ್ಕದ ಸಮಾಜಸೇವಕರು, ಕೃಷಿಕರಾದ ತಿರುಪತಿ ಭಟ್‌. ತಾನು ನಂಬಿದ ನಂಬಿಕೆ ವಿಶ್ವಾಸ, ಪರಂಪರೆ-ಸಂಪ್ರದಾಯದ ಚೌಕಟ್ಟಿನೊಳಗೆ ಭಾವೈಕ್ಯದ ಸಂದೇಶ ಸಾರುವಲ್ಲಿ ಯಶಸ್ವಿಯಾದರು.

ತಿರುಪತಿ ಭಟ್‌-ಸರೋಜ ದಂಪತಿಗಳ ಮಗ ಕೃಷ್ಣ ಕುಮಾರ್‌ನ ವಿವಾಹವು ಮಲಪ್ಪುರದ ಅಂಜನಾಳ ಜತೆ ನಡೆಯಿತು. ಆಸುಪಾಸಿನ ಮುಸಲ್ಮಾನ ಸ್ನೇಹಿತರು ರಂಝಾನ್‌ ಉಪವಾಸದ ಕಾರಣ ಮದುವೆಗೆ ಬಂದು ಶುಭ ಹಾರೈಸಿ ಔತಣಕೂಟದಲ್ಲಿ ಪಾಲ್ಗೊಳ್ಳದೆ ತೆರಳಿದ್ದರು. ಹೀಗಾಗಿ ಭಟ್ಟರು ತಮ್ಮ ಮನೆಯಲ್ಲಿಯೇ ಇಫ್ತಾರ್‌ ಕೂಟವನ್ನು ಏರ್ಪಡಿಸಿ ತಮ್ಮ ಸಂತೋಷವನ್ನು ಅವರೊಂದಿಗೆ ಹಂಚಿಕೊಂಡರು. ಸಮಾಜಸೇವೆ ಮನೆಯಿಂದ ಪ್ರಾರಂಭವಾಗಬೇಕು ಎಂಬ ಮೂಲ ಉದ್ದೇಶದೊಂದಿಗೆ ಶಾಂತಿ, ಸೌಹಾರ್ಧತೆ ಹಾಗೂ ಸಹೋದರತೆಯ ಸಂಕೇತವಾದ ಈದ್‌ ಉಲ್‌ ಫಿತರ್‌ ಹಬ್ಬದ ಪೂರ್ವಭಾವಿಯಾಗಿ ಆಚರಿಸುವ ಉಪವಾಸವನ್ನು ಕೈಗೊಳ್ಳುವವರಿಗೆ ಆಹಾರ ನೀಡಿ ಹಿಂದೂ ಮುಸ್ಲಿಂ ಸೌಹಾರ್ದತೆ ಮೇಳೆ„ಸುವಂತೆ ಮಾಡಿದರು.

ಬಹುತ್ವ ತುಂಬಿರುವ ನಮ್ಮ ದೇಶದಲ್ಲಿ ನೂರಾರು ಬಗೆಯ ಹಬ್ಬ ಆಚರಣೆಗಳಿವೆ. ಅದರಲ್ಲಿ ಬಹುತೇಕ ಹಬ್ಬಗಳನ್ನು ಹಿಂದು-ಕ್ರೆŒ„ಸ್ತ- ಮುಸ್ಲಿಂ ಎನ್ನುವ ಬೇಧ ಮತ ಭಾವವಿಲ್ಲದೆ ಆಚರಿಸುವುದು ಭಾತರದ ವೈವಿಧ್ಯತೆ. ಸೌಹಾರ್ದತೆಗೆ ಸಾಕ್ಷಿಯಾದ ಮದುವೆಯ ಇಫ್ತಾರ್‌ ಕೂಟದಲ್ಲಿ ಕಾಸರಗೋಡು ಶಾಸಕ ಎನ್‌.ಎ.ನೆಲ್ಲಿಕುನ್ನು, ಮಾಜಿ ಸಚಿವ ಸಿ.ಟಿ.ಅಹಮ್ಮದಲಿ, ಮಾಜಿ ಬದಿಯಡ್ಕ ಪಂಚಾಯತು ಅಧ್ಯಕ್ಷ ಮಾಹಿನ್‌ ಕೇಳ್ಳೋಟ್‌, ಪಿ.ಜಿ. ಚಂದ್ರಹಾಸ ರೈ ಮುಂತಾದ ಗಣ್ಯರು ಭಾಗವಹಿಸುವ ಮೂಲಕ ಸಂಪನ್ನಗೊಳಿಸಿದರು. ಮಾತ್ರವಲ್ಲದೆ ಭಾವೈಕ್ಯತೆಯ ಸಂದೇಶವನ್ನು ಎತ್ತಿಹಿಡಿದರು.

ಉತ್ತಮ ಕೃಷಿಕರೂ ಆಗಿರುವ ಭಟ್ಟರು ಹೆ„ನುಗಾರಿಕೆಯಲ್ಲೂ ಎತ್ತಿದ ಕೈ. ಎಲ್ಲರೊಂದಿಗೂ ಆತ್ಮೀಯತೆಯಿಂದ ಬೆರೆಯುವ ಭಟ್ಟರ ಮನೆಯಲ್ಲಿ ಹಬ್ಬದ ವಾತಾವರಣ ಸƒಷ್ಟಿಯಾಗಿತ್ತು. ನೂರಾರು ಪುರುಷರು ಮತ್ತು ಮಹಿಳೆಯರು ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದರು. ದಿನದ ಉಪವಾಸ ಕೊನೆಗೊಳಿಸಲು ಅಗತ್ಯವಿರುವ ವಿವಿಧ ರೀತಿಯ ಪಾನೀಯ, ಸಮೋಸ ಸೇರಿದಂತೆ ಕರಿದ ತಿಂಡಿ ತಿನಿಸುಗಳು ಕಲ್ಲಂಗಡಿ ಮೊದಲಾದ ಹಣ್ಣು ಹಂಪಲುಗಳನ್ನು ನೀಡಿ ಸತ್ಕರಿಸಲಾಯಿತು.

ತಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಮುಸ್ಲಿಂ ಸ್ನೇಹಿತರಿಗೆ ಇಫ್ತಾರ್‌ ಕೂಟವನ್ನು ಏರ್ಪಡಿಸಿದುದರಿಂದ ಅವರೂ ನಮ್ಮ ಸಂಭ್ರಮದಲ್ಲಿ ಪಾಲ್ಗೊಳ್ಳುವಂತಾಯಿತು. ನಶ್ವರ ಬದುಕಿನಲ್ಲಿ ಸೌಹಾರ್ಧತೆ, ಪ್ರೀತಿ, ವಿಶ್ವಾಸ ಮತ್ತು ಪರಸ್ಪರರ ನಂಬಿಕೆ ವಿಶ್ವಾಸಗಳನ್ನು ಗೌರವಿಸುವುದನ್ನು ರೂಢಿಸಿಕೊಂಡಾಗ ಸಮಾಜದಲ್ಲಿ ಶಾಂತಿ ಸಮಾಧಾನ ನೆಲೆಸುತ್ತದೆ.
– ತಿರುಪತಿ ಭಟ್‌, ಸಮಾಜ ಸೇವಕರು ಬದಿಯಡ್ಕ

ಇಫ್ತಾರ್‌ ಎನ್ನುವುದು ಅತ್ಯಂತ ವಿಶೇಷ ಹಾಗೂ ಪುಣ್ಯ ಕಾರ್ಯ. ದಾರಿದ್ರŒÂ ಮತ್ತು ಆಹಾರದ ಮಹತ್ವವನ್ನು ತಿಳಿಸುವ ರಂಝಾನ್‌ ಮಾಸದಲ್ಲಿ ತಿರುಪತಿ ಭಟ್‌ ಇಫ್ತಾರ್‌ ಕೂಟವನ್ನು ಏರ್ಪಡಿಸಿ ಪರಸ್ಪರ ಸ್ನೇಹ ಸಂಬಂಧವನ್ನು ಗಟ್ಟಿಗೊಳಿಸಿದ್ದಾರೆ. ಐಕ್ಯತೆಯನ್ನು ಸಾರುವ ಪ್ರಯತ್ನ ಮಾಡಿದ್ದಾರೆ.
– ಸಿ.ಟಿ.ಅಹಮ್ಮದಲಿ, ಮಾಜಿ ಸಚಿವರು ಕೇರಳ ಸರಕಾರ

– ಅಖಿಲೇಶ್ ನಗುಮುಗಂ

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.