ಬೆಳ್ಳೂರು ಶಾಲೆಯಲ್ಲಿ ರಕ್ತದಾನ ದಿನಾಚರಣೆ


Team Udayavani, Jun 16, 2019, 6:10 AM IST

belluru-school

ಬೆಳ್ಳೂರು: ರಕ್ತಗುಂಪು ಹಾಗೂ ವರ್ಗೀಕರಣ ಕಂಡು ಹುಡುಕಿದ ಕಾರ್ಲ್ ಲೇಂಸ್ಟೈನರ್‌ ಅವರ ಸ್ಮರಣೆಗಾಗಿ ಜೂನ್‌ 14ರಂದು ಅವರ ಜನ್ಮದಿನವನ್ನು ಜಾಗತಿಕ ರಕ್ತದಾನ ದಿನವಾಗಿ ಆಚರಿಸಲಾಗುತ್ತದೆ ಎಂದು ಸ್ಥಳೀಯ ವೈದ್ಯ ಡಾ|ಮೋಹನದಾಸ್‌ ಹೇಳಿದರು.

ಬೆಳ್ಳೂರು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ನಡೆದ ಜಾಗತಿಕ ರಕ್ತದಾನ ದಿನಾಚರಣೆ ಸಮಾರಂಭದಲ್ಲಿ ವೀಡಿಯೋ ಪ್ರಾತ್ಯಕ್ಷಿಕೆಯೊಂದಿಗೆ ತರಗತಿ ನೀಡಿ ಅವರು ಮಾತನಾಡಿದರು.

ವ್ಯಕ್ತಿ ಸ್ವ ಇಚ್ಛೆಯಿಂದ ರಕ್ತ ನೀಡಲು ಮುಂದಾಗುವ ಪ್ರಕ್ರಿಯೆ ರಕ್ತದಾನ. ನಾವು ದಾನ ಮಾಡಿದ ರಕ್ತವು ನಮಗೆ ಪರಿಚಯವೇ ಇಲ್ಲದವರಿಗೂ ಸಲ್ಲುವುದರಿಂದ ರಕ್ತದಾನವು ಅತಿ ಶ್ರೇಷ್ಠ ದಾನಗಳ ಸಾಲಿಗೆ ಸೇರುತ್ತದೆ ಎಂದು ಹೇಳಿದರು.

ದಾನಿಯು ರಕ್ತದಾನಕ್ಕೆ ಮುಂದಾದಾಗ ಅವರ ದೈಹಿಕ ತಪಾಸಣೆ ನಡೆಸಲಾಗುತ್ತದೆ. ದಾನಿಯ ಆರೋಗ್ಯಕ್ಕೆ ಅಪಾಯ ಇದೆಯೇ ಎಂಬುದನ್ನು ಖಾತರಿ ಪಡಿಸಲು ಆರೋಗ್ಯ ಇತಿಹಾಸದ ಬಗ್ಗೆ ನಿರ್ದಿಷ್ಟ ಪ್ರಶ್ನೆಗಳನ್ನು ಕೇಳಲಾಗುತ್ತದೆ. ದಾನಿಯ ಹಿಮಟೋಕ್ರಿಟ್‌ ಮತ್ತು ಹಿಮೋಗ್ಲೋಬಿನ್‌ ಮಟ್ಟವನ್ನು ಪರೀಕ್ಷಿಸಿ ರಕ್ತದಾನ ಮಾಡುವುದರಿಂದ ಅವರು ರಕ್ತಹೀನರಾಗುವ ಸಾಧ್ಯತೆ ಇದೆಯೇ ಎಂಬುದನ್ನೂ ಪತ್ತೆಹಚ್ಚಲಾಗುತ್ತದೆ. ಇದರಿಂದ ರೋಗಿಯು ರಕ್ತ ನೀಡಲು ಅರ್ಹನೋ ಇಲ್ಲವೋ ಎಂಬುದು ತಿಳಿಯುತ್ತದೆ ಎಂದು ಹೇಳಿದರು. ರಕ್ತ ದಾನಕ್ಕೆ ಅರ್ಹನಾದ ವ್ಯಕ್ತಿಯಿಂದ ಸಂಗ್ರಹಿಸಲಾಗುವ ರಕ್ತದ ವರ್ಗೀಕರಣ ನಡೆಸಿ ರಕ್ತದ ಆವಶ್ಯಕತೆ ಕಂಡುಬರುವವರಿಗೆ ಪೂರೈಸಲಾಗುತ್ತದೆ. ಅಥವಾ ಬ್ಲಿಡ್‌ ಬ್ಯಾಂಕ್‌ಗಳಲ್ಲಿ ಸಂಗ್ರಹಿಸಿ ಇಡಲಾಗುತ್ತಿದ್ದು ತುರ್ತು ಸಂದರ್ಭಗಳಲ್ಲಿ ಅಗತ್ಯ ಕಂಡು ಬಂದವರಿಗೆ ರಕ್ತ ಪೂರೈಸಲಾಗುತ್ತದೆ.

ರಕ್ತದಾನ ಮಾಡುವಾಗ ಮತ್ತು ರಕ್ತ ಪಡೆಯುವಾಗ ಯಾವುದೇ ಜಾತಿ ಧರ್ಮದ ಭೇದ ಭಾವನೆ ಬರುವುದಿಲ್ಲ. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಲಾಭವಿದೆ. ನಾವು ದಾನ ಮಾಡಿದ ರಕ್ತ ಇನ್ನೊಬ್ಬರ ಜೀವ ಉಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.

ಸಿಬ್ಬಂದಿ ಕಾರ್ಯದರ್ಶಿ ಮೋಹನನ್‌, ಬೆಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಜೂ.ಪಬ್ಲಿಕ್‌ ಹೆಲ್ತ್‌ ನರ್ಸ್‌ ಶಂಸೀರ, ಶಿಕ್ಷಕರಾದ ಜಿಸನ್‌, ಜಯರಾಮ ರೈ, ಅಧ್ಯಾಪಿಕೆ ತಂಗಮಣಿ ಉಪಸ್ಥಿತರಿದ್ದರು.

ಶಿಕ್ಷಕಿ ಶೋಭಾ ಸ್ವಗತಿಸಿದರು. ಹಿರಿಯ ಶಿಕ್ಷಕ ಕುಂಞಿರಾಮ ಮಣಿಯಾಣಿ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.