ಪುಸ್ತಕ ಕೊಂಡು ಓದುವ ಅಭಿರುಚಿ ಬೆಳೆಸಿ


Team Udayavani, Apr 23, 2019, 6:30 AM IST

pustaka

ಮೈಮೇಲೆ ಹರಕು ಬಟ್ಟೆ ಇದ್ದರೂ ಚಿಂತೆಯಿಲ್ಲ, ಕೈಯಲ್ಲೊಂದು ಪುಸ್ತಕವಿರಲಿ ಎಂಬ ಮಾತಿನಂತೆ ಪುಸ್ತಕಗಳ ಓದಿನಿಂದ ಮನುಷ್ಯನಿಗೆ ಜ್ಞಾನ ಸಂಪಾದನೆ ಜತೆಗೆ ಆತನ ಅಸ್ತಿತ್ವದ ಬಗ್ಗೆ ಅರಿವಾಗುತ್ತದೆ. ಪ್ರಸ್ತುತವಾಗಿ ಪುಸ್ತಕ ಓದುವವರ ಸಂಖ್ಯೆ ವಿರಳವಾಗುತ್ತಿದೆ ಎಂಬ ಅಪವಾದ ನಡುವೆ ಇಂದಿನ ಪುಸ್ತಕ ದಿನವೂ ನಮ್ಮೆಲ್ಲರಿಗೂ ಓದಿನ ಅಭಿರುಚಿ ಮೂಡಿಸುವ ದಿನವಾಗಲಿ. ಪುಸ್ತಕ ಓದು, ಮನುಷ್ಯನ ಹವ್ಯಾಸವಷ್ಟೇ ಅಲ್ಲ, ದೈನಂದಿನ ಕಾಯಕವಾಗಲಿ ಎಂಬ ಸದಾಶಯ.

ದೇಶ ಸುತ್ತಿನೋಡು, ಕೋಶ ಓದಿ ನೋಡು ಎನ್ನುವುದು ಪ್ರಚಲಿತವಾದ ಮಾತು. ಜ್ಞಾನ ಸಂಪಾದನೆಗೆ ಅಂದಿನಿಂದ ಇಂದಿನವರೆಗೂ ಪುಸ್ತಕವೇ ಮೂಲವಾಗಿದೆ. ಇ-ಬುಕ್‌ ಇರುವ ಈ ಕಾಲದಲ್ಲೂ ಪುಸ್ತಕಗಳು ತನ್ನ ಮೌಲ್ಯಗಳನ್ನು ಕಳೆದುಕೊಂಡಿಲ್ಲ. ಪುಸ್ತಕ, ಲೇಖಕರು ಮತ್ತು ಪ್ರಕಾಶನಗಳು ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು 1995ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಯುನೆಸ್ಕೋದ ಸಾಮಾನ್ಯ ಸಭೆಯಲ್ಲಿ ಎಪ್ರಿಲ್‌ 23ರಂದು ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. ಈ ನಿಟ್ಟಿನಲ್ಲಿ ಪ್ರತಿ ವರ್ಷ ವಿಶ್ವಾದ್ಯಂತ ಯುನೆಸ್ಕೋ ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಆಚರಿಸಲಾಗುತ್ತದೆ.

ಆಚರಣೆಯ ಉದ್ದೇಶ
ಒಬ್ಬ ವ್ಯಕ್ತಿಯ ಬೌದ್ಧಿಕ ಪ್ರಬುದ್ಧತೆ ಬರುವುದೇ ಪುಸ್ತಕ ಓದುವುದರಿಂದ, ಓದು ನಮ್ಮ ಮನೋವೈಶಾಲ್ಯವನ್ನು ಹೆಚ್ಚಿಸುವ ಬಹುದೊಡ್ಡ ಸಾಧನ. ಈ ಆಧುನಿಕ ಕಾಲದಲ್ಲಿ ಇಂದಿನ ಯುವ ಜನತೆಯಲ್ಲಿ ಪುಸ್ತಕ ಪ್ರೇಮ ಕೊರತೆ ಬಹಳಷ್ಟಿದೆ. ಯುವ ಜನತೆಯಲ್ಲಿ ಪುಸ್ತಕ ಕುರಿತಾದ ಮಹತ್ವ ಹೆಚ್ಚಿಸಲು, ಪುಸ್ತಕ ಮಾರಾಟವನ್ನು ಹೆಚ್ಚಿಸುವ ಸಲುವಾಗಿ, ಪುಸ್ತಕದ ಉಳಿವಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.

ಕೃತಿಸ್ವಾಮ್ಯ ದಿನ
ಪುಸ್ತಕಗಳ ರಕ್ಷಕನಾಗಿ ಕೃತಿಸ್ವಾಮ್ಯ ಕೆಲಸ ಮಾಡುತ್ತದೆ. ಲೇಖಕರಿಗೆ ಪುಸ್ತಕಗಳೇ ಆಸ್ತಿ . ಈ ಆಸ್ತಿಯನ್ನು ಕದಿಯದಂತೆ ನೋಡುಕೊಳ್ಳುತ್ತದೆ ಕೃತಿಸ್ವಾಮ್ಯ ಕಾಯ್ದೆ. ಭಾರತ ಸಹಿತ ವಿಶ್ವ ದ ಅನೇಕ ರಾಷ್ಟ್ರಗಳಲ್ಲಿ ಕೃತಿ ಸ್ವಾಮ್ಯ ಕಾಯ್ದೆ ಇದೆ.

ಪುಸ್ತಕದ ಜತೆ ಸಂಗೀತ, ನಾಟಕ, ಸಿನೆಮಾ, ಛಾಯಾ ಚಿತ್ರ, ತಂತ್ರಜ್ಞಾನಕ್ಕೂ ಕೃತಿಸ್ವಾಮ್ಯ ಅನ್ವಯವಾಗುತ್ತದೆ. ಕೃತಿ ಸ್ವಾಮ್ಯದ ಅಪರಾಧಿ ಎಂದು ಸಾಬೀತಾದರೆ ದಂಡ ಮತ್ತ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.
ಪುಸ್ತಕ ಓದುವ ಹವ್ಯಾಸ ಇರುವವರೂ ಎಲ್ಲಿ ಬೇಕಾದರೂ ಸಂತೋಷವಾಗಿರುತ್ತಾರೆ ಎನ್ನುವುದು ಮಹಾತ್ಮಾ ಗಾಂಧೀಜಿ ಅವರ ಮಾತು.

ಓದು ನಮ್ಮಲ್ಲಿ ತಾಳ್ಮೆಯನ್ನು ಬೆಳೆಸುತ್ತದೆ. ಹಿಂದಿನ ಮತ್ತು ಭವಿಷ್ಯದ ಪೀಳಿಗೆ ನಡುವೆ ತಲೆಮಾರುಗಳ ಮತ್ತು ಸಂಸ್ಕೃತಿಗಳ ನಡುವಿನ ಸೇತುವೆಯಾಗಿ ಪುಸ್ತಕ ನಿಲ್ಲುತ್ತದೆ. ಪುಸ್ತಕಗಳ ಮಾರಾಟ ಸಂಖ್ಯೆ ಕಡಿಮೆಯಾಗಿರಬಹುದು ಆದರೆ ಅವುಗಳ ಪ್ರಕಟನೆಗಳು ಸ್ಥಿರವಾಗಿವೆ. ಇದು ಪುಸ್ತಕಗಳ ಜನಪ್ರಿಯತೆಗೆ ಸಾಕ್ಷಿ.

ಆಚರಣೆ ಹೇಗೆ ?
ವಿಶ್ವ ಪುಸ್ತಕ ದಿನವೂ ಪುಸ್ತಕ ಪ್ರೇಮಿಗಳು ಸಂಭ್ರಮಿಸುವ ದಿನ. ಹಾಗಾಗಿ ಪುಸ್ತಕ ಓದುವ ಹವ್ಯಾಸವಿರುವವರು, ಲೇಖಕರು, ಪ್ರಕಾಶರು ಮತ್ತು ಗ್ರಂಥಾಲಯಗಳಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಪುಸ್ತಕ ಮಾರಾಟ, ಗೋಷ್ಠಿಗಳು, ಉಚಿತ ಪುಸ್ತಕ ವಿತರಣೆ, ಕಥೆ, ಕವನ ಸ್ಪರ್ಧೆಗಳನ್ನು ನಡೆಸುವುದು, ಲೇಖಕರೊಂದಿಗೆ ಸಂವಾದಗಳನ್ನು ನಡೆಸಲಾಗುತ್ತದೆ. ಕಥೆಗಳನ್ನು ಹಂಚಿಕೊಳ್ಳಿ (ಶೇರ್‌ ಎ ಸ್ಟೋರಿ ) ಎಂಬ ಥೀಮ್‌ ಸಂದೇಶದೊಂದಿಗೆ ಈ ವರ್ಷದ ವಿಶ್ವ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನವನ್ನು ವಿಶ್ವದ 100ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ.

-  ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.