ಕುಂಬಳೆ ಬಸ್‌ ನಿಲ್ದಾಣದಲ್ಲೇ ವಾಹನ ನಿಲುಗಡೆ: ಪ್ರಯಾಣಿಕರಿಗೆ ಅಡ್ಡಿ

ಸುಮಾರು 50 ವರ್ಷಗಳಷ್ಟು ಹಳೆಯದಾದ ಜನನಿಬಿಡ ಜಾಗ

Team Udayavani, May 25, 2019, 6:05 AM IST

kumble-bus-stop

ಕುಂಬಳೆ: ಭಾರೀ ವಿವಾದ ಹಾಗೂ ವಿವಿಧ ಉಹಾಪೋಪಗಳಿಗೆ ಕಾರಣವಾಗಿದ್ದ ಕುಂಬಳೆ ಬಸ್‌ ನಿಲ್ದಾಣ ನವೀಕರಣಕ್ಕೆ ಕೇರಳ ಫಿನಾನ್ಸ್‌ ಕೋರ್ಪರೇಶನ್‌ ಸಂಸ್ಥೆಯ ಸಹಕಾರದೊಂದಿಗೆ ಸ್ಥಳೀಯಾಡಳಿಯ ಮುಂದಿನ ಒಂದೂವರೆ ವರ್ಷಗಳಲ್ಲಿ 5 ಕೋಟಿ ವೆಚ್ಚದಲ್ಲಿ ಬಸ್ಸು ನಿಲ್ದಾಣ ಕಟ್ಟಡದ ಶಿಲಾನ್ಯಾಸವನ್ನು ಜೂನ್‌ ತಿಂಗಳಲ್ಲಿ ಕೈಗೊಳ್ಳುವ ಸಾಧ್ಯತೆಯ ಭರವಸೆಯನ್ನು ಸ್ಥಳೀಯಾಡಳಿತೆ ನೀಡಿದೆ.

ಸುಮಾರು 50 ವರ್ಷಗಳಷ್ಟು ಹಳೆಯದಾದ ಜನನಿಬಿಡ ಬಸ್‌ ನಿಲ್ದಾಣವಾದ ಕುಂಬಳೆ ನಿಲ್ದಾಣ ಕಳೆದ 5 ವರ್ಷಗಳಲ್ಲಿ ಶಿಥಿಲಾವಸ್ಥೆಯಲ್ಲಿದ್ದು, ಕೆಲವು ತಿಂಗಳುಗಳ ಹಿಂದೆ ಕೆಡವಿ ನೆಲಸಮ ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ಕುಸಿಯುವ ಭೀತಿ ಎದುರಿಸುತ್ತಿದ್ದ ನಿಲ್ದಾಣದ ಮೇಲ್ಚಾವಣಿಯ ಒಂದು ಭಾಗ ಹಾಗೂ ಛಾವಣಿಯ ಕೆಳಭಾಗ ಅಲ್ಲಲ್ಲಿ ಕುಸಿದು ಅಪಾಯದ ಆತಂಕಕ್ಕೆ ಕಾರಣವಾಗಿತ್ತು. ಕಟ್ಟಡದ ಮೇಲಂತಸ್ಥಿನಲ್ಲಿ ಮಳಿಗೆಗಳನ್ನು ಹೊಂದಿದ್ದ ವ್ಯಾಪಾರಿಗಳು ಈ ಕಾರಣದಿಂದ ಅಂಗಡಿಗಳನ್ನು ಹಿಂದೆಯೇ ತೆರವುಗೊಳಿಸದ್ದರು. ನಿಲ್ದಾಣ ಕಟ್ಟಡದ ಕೆಳ ಅಂತಸ್ಥಿನ ವ್ಯಾಪಾರಿಗಳಿಗೆ ಗ್ರಾಮ ಪಂಚಾಯತ್‌ ಅಂಗಡಿಮುಗ್ಗಟ್ಟುಗಳನ್ನು ತೆರವುಗೊಳಿಸುವಂತೆ ನೋಟೀಸುಗಳನ್ನು ನೀಡಿದ್ದರೂ ಬದಲಿ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ಪ್ರತಿಭಟನೆ ಮುಂದಾಗಿದ್ದರು.ಆದರೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಬಳಿಕ ಕಾನೂನಿನ ಅಸ್ತ್ರ ಪ್ರಯೋಗಿಸಿ ಕೆಡವಲಾಗಿತ್ತು.ಈ ಮಧ್ಯೆ 2018ರ ಮೇ ತಿಂಗಳಲ್ಲಿ ಬಸ್ಸಿಗಾಗಿ ಕಾದು ನಿಂತಿದ್ದ ಪ್ರಯಾಣಿಕರ ಮೇಲೆ ಕಟ್ಟಡದ ಕಾಂಕ್ರಿಟ್‌ ತುಂಡುಗಳು ಬಿದ್ದು ಗಾಯಗೊಂಡಿದ್ದರು.ಇದಕ್ಕಾಗಿ ಹೊಸ ಬಸ್‌ ನಿಲ್ದಾಣವನ್ನು ಶೀಘ್ರ ನಿರ್ಮಿಸುವಂತೆ ನಾಗರಿಕರು ಒತ್ತಾಯಿಸಿದ್ದರು. ಗ್ರಾಮ ಪಂಚಾಯತ್‌ ಯೋಜನೆಯಂತೆ ನೂತನ ಬಸ್‌ ನಿಲ್ದಾಣ ಕಟ್ಟಡ ಸಂಕೀರ್ಣ ನಿರ್ಮಾಣಕ್ಕೆ ಹೆಚ್ಚಿನ ಮೊತ್ತದ ನಿಧಿಯ ಅಗತ್ಯವಿರುವುದರಿಂದ ಇದೀಗ ಕೇರಳ ಅರ್ಬನ್‌ ಏಂಡ್‌ ರೂರಲ್‌ ಡೆವೆಲಪ್‌ಮೆಂಟ್‌ ಫಿನಾನ್ಸ್‌ ಕೋರ್ಪರೇಶನ್‌ (ಕೆಯುಆರ್‌ಡಿಎಫ್‌ಸಿ)ನೆರವು ಒದಗಿಸುವ ಭರವಸೆ ನೀಡಿದೆ.ಈ ಕುರಿತು ಈಗಾಗಲೇ ಕೆಯುಆರ್‌ಡಿಎಫ್‌ಸಿ ಸಂಬಂಧಿಸಿದ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಸ್ತಾಂತರಿಸಿದೆ. ಹಣಕಾಸು ಸಂಸ್ಥೆಯ ತಂಡ ಬಸ್‌ ನಿಲ್ದಾಣದ ಉದ್ದೇಶಿತ ಸ್ಥಳಗಳನ್ನು ಸಂದರ್ಶಿಸಿದೆ. ನೂತನ ನಿಲ್ದಾಣದ ಬಗ್ಗೆ ನೀಲನಕ್ಷೆ ತಯಾರಿಸಿ,ಅಂಡರ್‌ ಗ್ರೌಂಡ್‌ ರಸ್ತೆ,ವಾಹನ ನಿಲುಗಡೆಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆಗಳನ್ನೊಳಗೊಂಡ ನೂತನ ನಿಲ್ದಾಣವನ್ನು ನಿರ್ಮಿಸಲು ಸುಮಾರು 5 ಕೋಟಿ ರೂ.ವೆಚ್ಚದಲ್ಲಿ ಮೂರು ಅಂತಸ್ತಿನ ಕಟ್ಟಡದ ನಕ್ಷೆ ಸಿದ್ಧಗೊಂಡಿದೆ. ಕಟ್ಟಡದ ಶಿಲಾನ್ಯಾಸ ಜೂನ್‌ ತಿಂಗಳಲ್ಲಿ ನಡೆಯಲಿದೆ. ಕಟ್ಟಡದಲ್ಲಿ ವ್ಯಾಪಾರ ಮಳಿಗೆಗಳ ಸಹಿತ ಶೌಚಾಲಯವನ್ನೂ ಒಳಗೊಂಡಿದೆ.

ಹಿಂದಿನ ಕಟ್ಟಡವನ್ನು ಕೆಡವಿದ ಸ್ಥಳದಲ್ಲಿ ತಾತ್ಕಾಲಿಕವಾದ ಬಸ್ಸು ತಂಗುದಾಣದ ಶೆಡ್‌ನ್ನು ಸ್ಥಳೀಯಾಡಳಿತೆಯು ವ್ಯಾಪಾರಿ ವ್ಯವಸಾಯಿ ಸಂಘಟನೆಯ ನೆರವಿನಿಂದ ನಿರ್ಮಿಸಿದೆ. ಆದರೆ ಕೆಲವು ದಿನಗಳಲ್ಲಿ ಮಳೆ ಆರಂಭಗೊಳ್ಳಲಿದ್ದು, ಈ ತಾತ್ಕಾಲಿಕ ಶೆಡ್‌ ಪ್ರಯಾಣಿಕರು ಹೆಚ್ಚಿರುವ ಕುಂಬಳೆ ಪೇಟೆಗೆ ಸಾಲದು.

ಭರವಸೆ ಇನ್ನೂ ಈಡೇರಿಲ್ಲ.
ಕೆಡವಿದ ಬಸ್‌ ನಿಲ್ದಾಣದ ಸುತ್ತಮುತ್ತ ಅಡ್ಡಾದಿಡ್ಡಿಯಾಗಿ ಖಾಸಗೀ ವಾಹನಗಳ ನಿಲುಗಡೆಯಿಂದ ಪ್ರಯಾಣಿಕರಿಗೆ ನಿಲ್ದಾಣದೊಳಗೆ ಪ್ರವೇಶಿಸಲು ತೊಡಕಾಗಿದೆ.ಇದನ್ನು ಪೊಲೀಸರ ನೆರನಿನಿಂದ ತೆರವುಗೊಳಿಸುವುದಾಗಿ ಗ್ರಾಮ ಪಂಚಾಯತ್‌ ಅಧ್ಯಕ್ಷರು ಮತ್ತು ವಾರ್ಡ್‌ ಸದಸ್ಯರು ಹಲವು ಬಾರಿ ಉದಯವಾಣಿಗೆ ಭರವಸೆನೀಡಿದರೂ ಇದು ಇನ್ನೂ ಪಾಲನೆಯಾಗಿಲ್ಲ.

ಸ್ಥಳೀಯಾಡಳಿತೆಗಳ ಅವ್ಯವಹಾರದಲ್ಲಿಯೂ ಹುಸಿಭರವೆ ನೀಡುವಲ್ಲೂ ಆಡಳಿತ ಮತ್ತು ವಿಪಕ್ಷ ಭೇದವಿಲ್ಲವೆಂಬುದನ್ನು ಇದು ತೋರಿಸುವುದು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.