ಉಪ ಚುನಾವಣೆ: ಸಿದ್ಧತೆ ಪೂರ್ಣ


Team Udayavani, Oct 20, 2019, 5:24 AM IST

poorna

ಕಾಸರಗೋಡು : ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅ.21ರಂದು ನಡೆಯಲಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ.

ಪೈವಳಿಕೆ ನಗರ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಚುನಾವಣೆ ಸಾಮಾಗ್ರಿಗಳ ಸಂಗ್ರಹ ಮತ್ತು ವಿತರಣೆ ನಡೆಯಲಿದ್ದು, ಮತಗಣನೆಯೂ ಇದೇ ಶಾಲೆಯಲ್ಲಿ ಜರಗಲಿದೆ. ಮತಗಣನೆಯ ದಿನ ಮೀಡಿಯಾ ಸೆಂಟರ್‌ ಕೂಡ ಇಲ್ಲಿ ಚಟುವಟಿಕೆ ನಡೆಸಲಿದೆ. ಜಿಲ್ಲಾ ಧಿಕಾರಿ, ಚುನಾವಣೆ ನಿರೀಕ್ಷಕರು, ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಚುನಾವಣೆ ಅ ಧಿಕಾರಿ, ಉಪಚುನಾವಣೆ ಅ ಧಿಕಾರಿಗಳು ಇಲ್ಲಿರುವರು. ಈ ಶಾಲೆಯಲ್ಲಿ 4 ಸ್ಟಾಂಪಿಂಗ್ ರೂಂಗಳಲ್ಲಿ 258 ವಿದ್ಯುನ್ಮಾನ ಮತಯಂತ್ರಗಳನ್ನು ಸಜ್ಜುಗೊಳಿಸಲಾಗಿದೆ. ಅ.20ರಂದು ಬೆಳಗ್ಗೆ 9.30ರಿಂದ 18 ವಿತರಣೆ ಕೇಂದ್ರಗಳಿಂದ ಪೋಲಿಂಗ್‌ ಸಿಬ್ಬಂದಿಗೆ ಮತದಾನ ಸಾಮಾಗ್ರಿಗಳನ್ನು ವಿತರಿಸಲಾಗುವುದು. ಕರ್ತವ್ಯದಲಿರುವ ಸಿಬ್ಬಂದಿಗೆ ಈ ಕೇಂದ್ರಕ್ಕೆ ತಲಪುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕೈಕಂಬದಿಂದ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ಸರ್ವೀಸ್‌ ನಡೆಸಲಾಗುವುದು. ಕರ್ತವ್ಯದ ಸಿಬ್ಬಂದಿಗೆ ಕುಟುಂಬಶ್ರೀ ವತಿಯಿಂದ ಆಹಾರ ಪೂರೈಕೆ ನಡೆಯಲಿದೆ.

ಸಮಸ್ಯಾತ್ಮಕ ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗುವುದು. 20 ಮತಗಟ್ಟೆಗಳಲ್ಲಿ ವೆಬ್‌ ಕಾಸ್ಟಿಂಗ್‌ ಸೌಲಭ್ಯ ಇರುವುದು. 53 ಬೂತ್‌ಗಳಲ್ಲಿ ಮೈಕ್ರೋ ಒಬ್ಸರ್ವರ್‌ಗಳನ್ನು ನೇಮಿಸಲಾಗಿದೆ. ಈ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ (198) ಬುರ್ಖಾಧಾರಿ ಮಹಿಳೆಯರ ಗುರುತು ಪತ್ತೆಗೆ ಮಹಿಳಾ ಸಿಬ್ಬಂದಿ ಇದ್ದು, ಅವರಿಗೆ ಬೇಕಾದ ಚುನಾವಣೆ ಕರ್ತವ್ಯ ಸರ್ಟಿಫಿಕೆಟ್‌ ವಿತರಿಸಲಾಗಿದೆ.

33 ಅಂಚೆ ಮತದಾನ ಹೊಂದಿರುವ ಈ ಕ್ಷೇತ್ರದಲ್ಲಿ ಈಗ ಕೇವಲ ಒಂದು ಅರ್ಜಿ ಲಭಿಸಿದೆ ಎಂದು ಚುನಾವಣೆ ಅ ಧಿಕಾರಿ ಎನ್‌.ಪ್ರೇಮಚಂದ್ರನ್‌ ತಿಳಿಸಿದರು.
ಅ.21ರಂದು ಮತದಾನ ನಡೆಯಲಿದ್ದು, ಬೆಳಗ್ಗೆ 5.30ಕ್ಕೆ ಪ್ರಹಸನ ಮತದಾನ(ಮೋಕ್‌ ಪೋಲಿಂಗ್‌) ಆರಂಭಗೊಳ್ಳಲಿದೆ. (ಮತದಾನಕ್ಕಿಂತ 90 ನಿಮಿಷ ಮುಂಚೆ) 5.30ಕ್ಕೆ ಪೋಲಿಂಗ್‌ ಏಜೆಂಟರೂ ಹಾಜರಾಗುವಂತೆ ಚುನಾವಣೆ ಅ ಧಿಕಾರಿ ತಿಳಿಸಿದ್ದಾರೆ.

ಪ್ರಥಮ ಬಾರಿಗೆ
ಚುನಾವಣೆಗೆ ನೇಮಕಗೊಂಡಿ ರುವ ಸಿಬ್ಬಂದಿಗೆ ಬೇಕಾದ ತರಬೇತಿಯೂ ಈಗಾಗಲೇ ಪೂರ್ಣಗೊಂಡಿದೆ. ರಾಜ್ಯದಲ್ಲೇ ಪ್ರಥಮ ಬಾರಿಗೆ ಅಕ್ರಮ ಮತದಾನ ತಡೆಯುವ ನಿಟ್ಟಿನಲ್ಲಿ ಎಲ್ಲ ಪೋಲಿಂಗ್‌ ಏಜೆಂಟರಿಗೆ ತರಬೇತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರು ತಿಳಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.