ಜಿಲ್ಲೆಯಲ್ಲಿ ಕಣ್ಣು ಮುಚ್ಚಿವೆ 85 ಸಿಸಿ ಟಿವಿ ಕೆಮರಾಗಳು


Team Udayavani, Feb 10, 2018, 10:00 AM IST

CCTV-Camera-2-600.jpg

ಕಾಸರಗೋಡು: ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ  ಕಾಪಾಡಲು ಮತ್ತು ಅಹಿತಕರ ಕೃತ್ಯಗಳನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯು ಸ್ಥಾಪಿಸಿದ ಸಿಸಿ ಟಿವಿ ಕೆಮರಾಗಳು ಕಣ್ಣು ಮುಚ್ಚಿವೆ. ಜತೆಗೆ ತನಗೆ ಕೊಟ್ಟ ಕಣ್ಗಾವಲು ಕೆಲಸವನ್ನು  ನಿರ್ವಹಿಸಲು ಅಸಮರ್ಥವಾಗಿ ಸುಮ್ಮನೆ ಕುಳಿತಿವೆ. ಈ ಮೂಲಕ ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳನ್ನು ಎಸಗು ವವರಿಗೆ ಭಾರೀ ವರದಾನ ಸಿಕ್ಕಂತಾಗಿದೆ.

ಕಾಸರಗೋಡು ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ 95 ಸಿಸಿ ಟಿವಿ ಕೆಮರಾಗಳನ್ನು  ಅಳವಡಿಸಲಾಗಿದ್ದು, ಅವುಗಳಲ್ಲಿ 10 ಕೆಮರಾಗಳು ಮಾತ್ರವೇ ಇದೀಗ ಕಾರ್ಯಾಚರಿಸುತ್ತಿವೆ. ಈ ಮಧ್ಯೆ 81 ಕೆಮರಾಗಳು ಸಮರ್ಪಕವಾಗಿ ಕಾರ್ಯವೆಸಗದೆ ಮೂರು ವರ್ಷಗಳು ಕಳೆದವು. ಕೊಲೆ ಪ್ರಕರಣಗಳು, ದಾಳಿಗಳು, ಕಳ್ಳತನ ಇತ್ಯಾದಿ ನಿರಂತರ ಸುದ್ದಿಯಾಗುತ್ತಿರುವಾಗ ಸಿಸಿ ಟಿವಿ ಕೆಮರಾಗಳು ಕಾರ್ಯವೆಸಗದಿರುವುದು ಪೊಲೀಸ್‌ ತನಿಖೆಗೆ ತೀವ್ರ ಹಿನ್ನಡೆಯಾಗಿ ಪರಿಣಮಿಸಿದೆ.

2015ನೇ ಡಿಸೆಂಬರ್‌ ತಿಂಗಳಲ್ಲಿ  ಕೆಲಸ ಮಾಡದ ಸಿಸಿ ಟಿವಿ ಕೆಮರಾಗಳನ್ನು  ದುರಸ್ತಿಗೊಳಿಸಲು ಕೆಲ್ಟ್ರೋನ್‌ ಸಂಸ್ಥೆಯನ್ನು  ಸಂಪರ್ಕಿಸಿ ಯೋಜನೆ ರೂಪಿಸಲಾಗಿತ್ತಾದರೂ, ಬಳಿಕ ದುರಸ್ತಿಗೆ ಯಾವುದೇ ಕ್ರಮ ಆರಂಭಗೊಂಡಿಲ್ಲ. ಕೆಮರಾಗಳ ದುರಸ್ತಿಗೆ ಕೆಲ್ಟ್ರೋನ್‌ ಕೇಳಿದ 30 ಲಕ್ಷ  ರೂಪಾಯಿ ಹೆಚ್ಚಾಯಿತು ಎಂಬುದು ರಾಜ್ಯ ಸರಕಾರದ ಮತ್ತು ಪೊಲೀಸ್‌ ಇಲಾಖೆಯ ನಿಲುವು.

ಯಾವುದೇ ಅಹಿತಕರ ಘಟನೆಗಳು ನಡೆದರೂ ಸಿಸಿ ಟಿವಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಪೊಲೀಸರು ಹೇಳುತ್ತಾರೆ. ಸ್ವಂತ ಸಿಸಿ ಟಿವಿ ಕೆಮರಾಗಳಿಲ್ಲದೆ ಅಹಿತಕರ ಘಟನೆಗಳು ಸಂಭವಿಸಿದಾಗ ಖಾಸಗಿ ವ್ಯಕ್ತಿಗಳ ಮನೆಗಳಲ್ಲಿ, ಸಂಸ್ಥೆಗಳಲ್ಲಿ  ಸ್ಥಾಪಿಸಿದ ಸಿಸಿ ಟಿವಿ ಕೆಮರಾಗಳು ಚಿತ್ರಿಸಿದ ಫೋಟೋಗಳನ್ನೇ ಆಧಾರವಾಗಿರಿಸಿ ಪೊಲೀಸರು ತಪಾಸಣೆ ನಡೆಸಿ ತನಿಖೆಯನ್ನು ಮುಂದುವರಿಸುತ್ತಾರೆ. ಜಿಲ್ಲೆಯಲ್ಲಿ ದಾಳಿಯ ಘಟನೆಗಳು ಮುಂದುವರಿಯುತ್ತಿರುವಾಗ ಪೊಲೀಸರಿಗೆ ಪ್ರಮುಖವಾಗಿ ನೆರವಿಗೆ ಬರುವ ಸಿಸಿ ಟಿವಿ ಕೆಮರಾಗಳನ್ನು ಮರು ಸ್ಥಾಪಿಸಬೇಕೆಂದು ಸಾರ್ವಜನಿಕ ವಲಯ ಕೂಡ ಆಗ್ರಹಿಸಿದೆ.

2014ರಲ್ಲಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ 2.58 ಕೋಟಿ ರೂ.ಗಳನ್ನು ವಿನಿಯೋಗಿಸಿ ಸಿಸಿ ಟಿವಿ ಕೆಮರಾಗಳನ್ನು ಅಳವಡಿಸಲಾಗಿತ್ತು. ಕೆಲ್ಟ್ರೋನ್‌ಗೆ ಇದರ ಹೊಣೆಗಾರಿಕೆ ಕೊಡಲಾಗಿತ್ತು. ಈ ಪೈಕಿ ಚಂದ್ರಗಿರಿ ರಸ್ತೆಯಲ್ಲಿ  ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದುದರಿಂದ ಆ ರೂಟ್‌ನಲ್ಲಿ ಕೆಮರಾಗಳನ್ನು ಸ್ಥಾಪಿಸಲಾಗಿರಲಿಲ್ಲ.

ಶಾಸಕರ ಪ್ರಾದೇಶಿಕ ನಿಧಿ ಬಳಕೆಗೆ ನಿರ್ಧಾರ ಕಾಸರಗೋಡಿನ ಸೂಕ್ಷ್ಮ ಪರಿಸ್ಥಿತಿಯನ್ನು ಗಮನಿಸಿ ಜಿಲ್ಲಾಡಳಿತ ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರಮುಖರನ್ನು ಒಳಗೊಂಡ ಜಿಲ್ಲಾ ಮಟ್ಟದ ಶಾಂತಿ ಸಮಿತಿಯು ಸಿಸಿ ಟಿವಿ ಕೆಮರಾಗಳನ್ನು ದುರಸ್ತಿಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿತ್ತು. ಈ ತೀರ್ಮಾನದಂತೆ ಮಂಜೇಶ್ವರ, ಕಾಸರಗೋಡು ಮತ್ತು  ಕಾಞಂಗಾಡು ಶಾಸಕರ ಪ್ರಾದೇಶಿಕ ಅಭಿವೃದ್ಧಿ ನಿಧಿಯಿಂದ ತಲಾ ಹತ್ತು ಲಕ್ಷ  ರೂ. ಹಾಗೂ ಕೇರಳ ಸರಕಾರದ 2 ಕೋಟಿ ರೂ. ವಿನಿಯೋಗಿಸಿ ಕೆಲ್ಟ್ರೋನ್‌ ಕಂಪೆನಿಗೆ ಮೂರು ವರ್ಷಗಳ ದುರಸ್ತಿ ಕಾಮಗಾರಿ ಸಹಿತ ಹೊಸ ಕೆಮರಾಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿತ್ತು. ಆದರೆ ಈ ನಿರ್ಧಾರ ಕೂಡ ಇದೀಗ ಮೂಲೆಪಾಲಾಗಿರುವುದು ದುರಂತ.

ಹಲವೆಡೆಗಳಲ್ಲಿ ಸಮಾಜದ್ರೋಹಿಗಳು, ಕಿಡಿಗೇಡಿಗಳು ಕೆಮರಾಗಳನ್ನು ಹಾನಿಗೊಳಿಸಿರುವುದಾಗಿ ಮಾಹಿತಿಯಿದೆ. ಹಾನಿಗೀಡಾದ ಕೆಮರಾಗಳನ್ನು ದುರಸ್ತಿಗೊಳಿಸಲು ಇದುವರೆಗೆ ಒಂದು ರೂಪಾಯಿ ಕೂಡ ಬಿಡುಗಡೆಗೊಳಿಸಿಲ್ಲ  ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಪ್ರಕರಣಗಳ ತನಿಖೆಯಲ್ಲಿ ಸಿಸಿ ಟಿವಿ ಕ್ಯಾಮರಾಗಳು ಅತ್ಯಂತ ಉಪಯುಕ್ತವಾಗುತ್ತಿವೆ ಎಂದು ಪೊಲೀಸರು ಹೇಳುತ್ತಿದ್ದರೂ, ಕೆಮರಾಗಳು ಕೆಟ್ಟುಹೋದಲ್ಲಿ ಪ್ರಮುಖ ಪ್ರಕರಣಗಳ ತನಿಖೆಗೂ ಯಾವುದೇ ಪ್ರಯೋಜನ ಸಿಗುತ್ತಿಲ್ಲ.

ಇದೀಗ ದುರಸ್ತಿ  ಕಾರ್ಯಗಳಿಗೆ ಬೃಹತ್‌ ಮೊತ್ತ ನೀಡಬೇಕಾಗಿದ್ದರೂ, ಕೇವಲ 30 ಲಕ್ಷ  ರೂ. ಗಳನ್ನಾದರೂ ಬಿಡುಗಡೆ ಮಾಡಲು ಕೂಡ ಸರಕಾರ ತಯಾರಾಗುತ್ತಿಲ್ಲ. ಈ ಮೊತ್ತವನ್ನು ನೀಡಿದರೂ ಕ್ಯಾಮರಾಗಳನ್ನು ದುರಸ್ತಿಗೊಳಿಸಲು ಸಾಧ್ಯವಿದೆ. ಆದರೆ ಈ ನಿಟ್ಟಿನಲ್ಲಿ  ಜಿಲ್ಲೆಯ ಪೊಲೀಸ್‌ ಇಲಾಖೆ ಕೂಡ ಯಾಕೋ ಗಂಭೀರ ನಿಲುವು ತಳೆದಂತೆ ಕಂಡುಬರುತ್ತಿಲ್ಲ ಎಂಬುದು ಅಚ್ಚರಿಯ ವಿಷಯವಾಗಿದೆ.

1.5 ಕೋಟಿ ರೂ. ಬಿಡುಗಡೆ
ಕಾಸರಗೋಡು ಜಿಲ್ಲೆಯಲ್ಲಿ ಪದೇ ಪದೇ ಕೊಲೆ, ದರೋಡೆ, ಕಳವು, ಕೋಮು ಗಲಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ರಸ್ತೆ ಮತ್ತು ಜಂಕ್ಷನ್‌ಗಳಲ್ಲಿರುವ ಸಿ.ಸಿ. ಟಿ.ವಿ. ಕೆಮರಾಗಳನ್ನು ನವೀಕರಿಸಲಾಗುವುದೆಂದು ಎಡಿಜಿಪಿ  ರಾಜೇಶ್‌ ದಿವಾನ್‌ ತಿಳಿಸಿದ್ದಾರೆ. ಇದಕ್ಕಾಗಿ ಜಿಲ್ಲೆಗೆ 1.5 ಕೋಟಿ ರೂ. ಸರಕಾರ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ. ಸೈಮನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.