ಕಾಸರಗೋಡು ಜಿಲ್ಲೆಯಾದ್ಯಂತ ಸಂಭ್ರಮದ ಯೋಗ ದಿನ ಆಚರಣೆ

ಅಂತಾರಾಷ್ಟ್ರೀಯ ಯೋಗ ದಿನ

Team Udayavani, Jun 22, 2019, 5:29 AM IST

21KSDE5A

ಕಾಸರಗೋಡು: ಯೋಗವು 5,000 ವರ್ಷಗಳ ಇತಿಹಾಸವುಳ್ಳ ಜ್ಞಾನ ಭಂಡಾರ. ಯೋಗ ಎಂದರೆ ವ್ಯಕ್ತಿಯ ಶಾರೀರಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ಹೊರಹೊಮ್ಮಿಸುವ ಅತ್ಯಂತ ಪ್ರಾಚೀನ ಶಾಸ್ತ್ರ. ಪತಂಜಲಿ ಮಹರ್ಷಿಗಳು ಆರಂಭಿಸಿದ ಯೋಗ ಶಾಸ್ತ್ರವು ಇಂದು ಪ್ರಪಂಚದಾದ್ಯಂತ ಮಾನ್ಯತೆ ಪಡೆದುಕೊಂಡು ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವಿವಿಧೆಡೆ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.

ಶಾರೀರಿಕ, ಮಾನಸಿಕ, ಬೌದ್ಧಿಕ, ಆಧ್ಯಾತ್ಮಿಕ, ಭಾವನಾತ್ಮಕ ಎಂಬ ಪಂಚಮುಖೀ ನೆಲೆಗಳಲ್ಲಿ ವ್ಯಕ್ತಿಯ ಸಕಾರಾತ್ಮಕ ಪರಿವರ್ತನೆಯನ್ನು ತರಬಲ್ಲ, ವೈಜ್ಞಾನಿಕವಾಗಿ ದೃಢೀಕರಿಸಲ್ಪಟ್ಟ ಶಾಸ್ತ್ರವಾಗಿರುವ ಯೋಗ ಶಾಸ್ತ್ರದ ಅಷ್ಟ ಅಂಗಗಳಾದ ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾರಣ, ಧ್ಯಾನ, ಸಮಾಧಿಗಳ ನಿಯಮಿತ ಅಭ್ಯಾಸದಿಂದ ಉದ್ದೇಶಿತ ಪರಿಣಾಮಗಳನ್ನು ಪಡೆದುಕೊಳ್ಳಲು ಸಾಧ್ಯ.

ಯೋಗದ ಮೂಲಕ ವಿಶ್ವವನ್ನು ಜೋಡಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಸರಕಾರದ ಕನಸಿಗೆ ಅಗಾಧ ಬೆಂಬಲ ಸಿಕ್ಕಿದ್ದು, ಶುಕ್ರವಾರ ವಿಶ್ವದಾದ್ಯಂತ ಐದನೇ ಬಾರಿ ಯೋಗ ದಿನವನ್ನು ಆಚರಿಸಲಾಯಿತು.

ಕಾಸರಗೋಡು ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ, ಸಂಘ ಸಂಸ್ಥೆಗಳಲ್ಲಿ, ಮಹಿಳಾ ಸಮಾಜ, ಕಾಲೇಜು ಮೊದಲಾದವುಗಳಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಜಿಲ್ಲೆಯ ಯೋಗಾಸನ ಕೇಂದ್ರಗಳಲ್ಲೂ ವಿಶ್ವ ಯೋಗ ದಿನವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕೆಲವೆಡೆ ಒಂದು ವಾರಗಳ ಕಾಲ ಯೋಗ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದೆ. ಯೋಗದ ಬಗ್ಗೆ ತರಗತಿ, ಪ್ರದರ್ಶನಗಳು ನಡೆದವು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯುಷ್‌ ಇಲಾಖೆ ವತಿಯಿಂದ ಶುಕ್ರವಾರ ಬೆಳಗ್ಗೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆ ವರೆಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಗ ಪ್ರದರ್ಶನ ನಡೆಯಿತು.

ಬದಿಡಯ್ಕದಲ್ಲಿ ಯೋಗ ದಿನ: ಇಲ್ಲಿನ ಕುನಿಲ್ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು. ಆರ್ಟ್‌ ಆಫ್‌ ಲಿವಿಂಗ್‌ ಪತಂಜಲಿ ತರಬೇತಿದಾರ ರೇಜಿ ಶ್ರೀಮಂಗಳಂ ಅವರು ಶಾಲಾ ಮಕ್ಕಳಿಗೆ ಯೋಗ ತರಬೇತಿ ನೀಡಿದರು.

ಸಿ.ಇ.ಒ. ವಿಕ್ರಮ್‌ ದತ್ತ್, ಪ್ರಾಂಶುಪಾಲೆ ಪಿ.ವಿ. ರತಿ, ಸಿಸ್ಟರ್‌ ಜೀವಾ ಚಾಕೋ, ಪಿಇಟಿ ಶಿಕ್ಷಕ ರಾಜು, ಮ್ಯಾನೇಜರ್‌ ಪ್ರಶಾಂತ್‌ ಕೆ.ಪಿ. ಹಾಗೂ ಶಾಲಾ ಸಿಬಂದಿಯೋಗ ತರಬೇತಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.