ಎಲ್ಲೆಲ್ಲೂ ವಲಸೆ ಹಕ್ಕಿಗಳ ನಿನಾದ

ಜಿಲ್ಲೆಯಲ್ಲಿ ಜಲ ಪಕ್ಷಿಗಳ ಗಣತಿ ಆರಂಭ

Team Udayavani, Jan 11, 2020, 11:36 PM IST

23

ಕಾಸರಗೋಡು: ಜಿಲ್ಲೆಯ ಪಕ್ಷಿ ಪ್ರೇಮಿ ತಂಡದಿಂದ ಜಲ ಪಕ್ಷಿಗಳ ಗಣತಿ ಪ್ರಾರಂಭವಾಯಿತು. ಅಂತಾ ರಾಷ್ಟ್ರೀಯ ವಾಟರ್‌ ಬರ್ಡ್‌ ಕೌಂಟ್‌ (ಎಡಬ್ಲ್ಯೂಸಿ) ಕಾರ್ಯಕ್ರಮದ ಭಾಗವಾಗಿರುವ ಗಣತಿಯು ಸಂಪೂರ್ಣ ನಾಗರಿಕ- ವಿಜ್ಞಾನದ ಮೂಲಕ ನೆರವೇರುತ್ತಿದೆ.

ಪ್ರತಿ ವರ್ಷ ಜನವರಿ ತಿಂಗಳಲ್ಲಿ ವಿಶ್ವದಾದ್ಯಂತ ಗದ್ದೆಗಳು, ಕೆರೆ-ಹಳ್ಳಗಳು, ನದಿ – ಸಮುದ್ರಗಳಲ್ಲಿ ಪಕ್ಷಿ ನಿರೀಕ್ಷಣೆ ಮಾಡಿ ಮಾಹಿತಿಗಳನ್ನು ಸಂಗ್ರಹಿಸಿ ಕೊಳ್ಳಲಾಗುತ್ತದೆ. ಇದು ಪಕ್ಷಿಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಪೂರಕವಾಗಿ ನಿಲ್ಲುವ ದಾಖಲೆಯಾಗಿ ಬದಲಾಗುತ್ತದೆ ಜೊತೆಗೆ ನಾಗರಿಕರಿಂದ ಉತ್ತಮ ಬೆಂಬಲವೂ ದೊರಕುತ್ತಿದೆ. ಮೊತ್ತಮೊದಲಾಗಿ ಈ ವರ್ಷ ಕಾಸರಗೋಡು ಜಿಲ್ಲೆಯಲ್ಲಿ ಸರ್ವೇ ಆರಂಭಿಸಲಾಗಿದೆ.

ಕಾಸರಗೋಡು ಬಾನಾಡಿಗಳ ವೈವಿಧ್ಯತೆಯಿಂದ ಸಮೃದ್ಧವಾಗಿದೆ. ಕಾಸರಗೋಡು ಕಡಿಮೆ ಭೂಮಿಯನ್ನು ಹೊಂದಿದ್ದರೂ ನದಿಗಳು, ಗದ್ದೆಗಳು, ವಿಶಾಲವಾದ ಪಾರೆ ಪ್ರದೇಶ, ಹುಲ್ಲು ಗಾವಲು, ಕಾಡು ಭಾಗಗಳಿಂದ ಆವರಿಸಿ ಜೈವ ವೈವಿಧ್ಯತೆಯ ತಾಣವಾಗಿರುವುದು ಬಾನಾಡಿಗಳಿಗೆ ಪೂರಕ ವಾತಾವರಣವನ್ನು ಉಂಟುಮಾಡಿದೆ.

ಜಾಗತಿಕ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಆಯ್ದ ಜಲ ಪ್ರದೇಶಗಳಲ್ಲಿ ಪಕ್ಷಿ ನಿರೀಕ್ಷಣೆ ಹಾಗೂ ದಾಖಲೀಕರಣ ನಡೆಯಲಿದೆ. ಇದಕ್ಕಾಗಿ ಕಾಸರಗೋಡಿನ ಪಕ್ಷಿ ತಜ್ಞರು ಹಲವು ಯೋಜನೆಗಳನ್ನು ಹಾಕಿಕೊಂಡಿದ್ದಾರೆ.

ಜೀವ ವೈವಿಧ್ಯತೆಯ ದೃಷ್ಟಿಯಿಂದ ನೋಡಿದರೆ ಕಾಸರಗೋಡಿನ ಹಲವು ಭಾಗಗಳು ಇನ್ನೂ ಹೊರ ಪ್ರಪಂಚಕ್ಕೆ ತೆರೆದುಕೊಳ್ಳಲಿಲ್ಲ. ಪರಿಸರ ವ್ಯವಸ್ಥೆಗಳ ಬಗ್ಗೆ ಅಧಿಕ ಮಾಹಿತಿಯನ್ನು ಸಂಗ್ರಹಿಸುವಲ್ಲಿ ಪ್ರಕೃತಿ ಪ್ರಿಯರು ಹಾಗೂ ಯುವ ಜನಾಂಗ ತೊಡಗಿಸಿಕೊಳ್ಳಬೇಕು. ಇದರಿಂದ ಸಿಗುವ ಮಾಹಿತಿಗಳನ್ನು ಯಾರು ಹಂಚಿಕೊಳ್ಳುತ್ತಾರೋ ಅವರೆಲ್ಲರೂ ನಾಗರಿಕ ವಿಜ್ಞಾನದ ಭಾಗವಾಗಿರುತ್ತಾರೆ. ಇದುವೇ “ಸಿಟಿಜನ್‌ ಸೈನ್ಸ್‌’.

ಇಂತಹ ಪ್ರಯತ್ನಗಳು ಜಿಲ್ಲೆಯಾದ್ಯಂತ ನಡೆದಾಗ ಗದ್ದೆಗಳು ಮತ್ತು ಪಕ್ಷಿಗಳ ಸ್ಥಿತಿಗತಿಗಳ ಬಗ್ಗೆ ತಿಳಿಯಲು ನಮಗೆ ಸಾಧ್ಯವಿದೆ ಎನ್ನುತ್ತಾರೆ ಪಕ್ಷಿ ವೀಕ್ಷಕರೂ, ಕಾಸರಗೋಡು ಪಕ್ಷಿ ಪ್ರೇಮಿ ತಂಡದ ಸ್ಥಾಪಕ ಅಧ್ಯಕ್ಷರೂ ಆಗಿರುವ ಮ್ಯಾಕ್ಸಿಂ ರೋಡ್ರಿಗಸ್‌ ಕೊಲ್ಲಂಗಾನ, ಪಕ್ಷಿ ವೀಕ್ಷಕರಾದ ಶ್ಯಾಮ್‌ಕುಮಾರ್‌ ಪುರವಂಕರ, ಮ್ಯಾಕ್ಸಿಮ್‌ ಮತ್ತು ಜೆಶ್ಮಾ ನಾರಂಪಾಡಿ ಭಾಗವಹಿಸಿ ಪೆರಲತ್ವಾಯಲ್‌ ಮತ್ತು ಚೆಮ್ಮಟಂವಯಲ್‌ ಗದ್ದೆಗಳಲ್ಲಿ ಸರ್ವೇ ನಡೆಸಿದರು.

ಕಾಸರಗೋಡಿಗೆ ವಿಶೇಷವಾದ ಕೆಂಪು ಕಾಲು ಗೊರವ (ಸ್ಪಾಟೆಡ್‌ ರೆಡ್‌ಶ್ಯಾಂಕ್‌), ಡೇಗೆ (ಓಸ್ಪ್ರೇ) ಪಟ್ಟೆ ಬಾಲದ ಹಿನ್ನೀರ ಗೊರವ (ಬ್ಲ್ಯಾಕ್‌ -ಟೈಲ್ಡ್‌ ಗಾಡ್ವಿಟ್‌), ಬೂದು ತಲೆಯ ಟಿಟ್ಟಿಭ (ಗ್ರೇ ಹೆಡ್ಡೆಡ್‌ ಲ್ಯಾಪಿಂಗ್‌) ಮೊದಲಾದ 85 ಜಾತಿಯ ಪಕ್ಷಿಗಳನ್ನು ಈ ಸಂದರ್ಭದಲ್ಲಿ ಗುರುತಿಸಿತು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.