“ಬದಲಾದ ಜೀವನ ಶೈಲಿ ಬದುಕಿನ ಅಸಮತೋಲನಕ್ಕೆ ಕಾರಣ’


Team Udayavani, Jul 24, 2017, 7:00 AM IST

23ksde16.gif

ಬದಿಯಡ್ಕ: ಭೌಗೋಳಿಕ ಋತುಮಾನಗಳಿಗೆ ಅನುಗುಣವಾಗಿ ಜೀವನ ಶೈಲಿ ರೂಪಿಸುವ ಪರಿಪಾಠ ಇಂದು ಮರೆಯಾಗಿರುವುದು ಅಸಮತೋಲನ ಬದುಕಿಗೆ ಕಾರಣವಾಗಿದೆ. ಹೊಸ ತಲೆಮಾರಿಗೆ ಇದನ್ನು ಪರಿಚಯಿಸುವ ಕ್ರಿಯಾತ್ಮಕ ಕಾರ್ಯಕ್ರಮಗಳ ಚೌಕಟ್ಟು ಅಗತ್ಯವಿದೆ ಎಂದು ಪೆರಡಾಲ ಶಾಲಾ ಶಿಕ್ಷಕ ಕೇಶವ ಭಟ್‌ ಚಾಲ್ತಡ್ಕ ಅಭಿಪ್ರಾಯ ವ್ಯಕ್ತಪಡಿಸಿದರು.

ಆಷಾಢ ಅಮಾವಾಸ್ಯೆ(ಆಟಿ ಅಮಾಸೆ) ಯ ಅಂಗವಾಗಿ ರವಿವಾರ ಬದಿಯಡ್ಕದ ಶ್ರೀನಿಧಿ ಚಿಕಿತ್ಸಾಲಯದಲ್ಲಿ ಹಮ್ಮಿಕೊಂಡಿದ್ದ ಐದನೇ ವರ್ಷದ ಆಟಿ ಹಾಲು (ಹಾಲೆ ಮರದ ಕಷಾಯ) ವಿತರಣೆ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.

ಆಷಾಢದ ಅಮಾವಾಸ್ಯೆಯ ಹಾಲೆ ಕಷಾಯ ಸೇವಿಸುವ ಪದ್ಧತಿಯು ವೈಜ್ಞಾನಿಕವಾಗಿ ಸಮರ್ಪಕ ಆರೋಗ್ಯ ನಿರ್ವ
ಹಣೆಯ ದೃಷ್ಟಿಯಿಂದ ಅಗತ್ಯವಿದ್ದು, ಇಂದಿನ ಯುವ ತಲೆಮಾರಿಗೆ ಇದರ ಮಹತ್ವದ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದ ಅವರು, ಪಾರಂಪರಿಕ ಮತ್ತು ಆಯುರ್ವೇದೀಯ ಚಿಕಿತ್ಸೆಗಳು ದೇಹಸ್ನೇಹಿಯಾಗಿ ಅಡ್ಡಪರಿಣಾಮಗಳಿಲ್ಲದೆ ಉತ್ತಮ ಆರೋಗ್ಯ ನಿರ್ವಹಣೆಗೆ ಪೂರಕ ಎಂದು ತಿಳಿಸಿದರು.

ಶ್ರೀನಿಧಿ ಚಿಕಿತ್ಸಾಲಯದ ಡಾ| ಶ್ರೀನಿಧಿ ಸರಳಾಯ ಅವರ ಪುತ್ರಿ ವೈಭವಿ, ಬದಿಯಡ್ಕದ ಹಿರಿಯ ವ್ಯಾಪಾರಿ ಉಮಾನಾಥ ಕಾಮತ್‌ ಅವರಿಗೆ ಹಾಲೆಮರದ ಕಷಾಯ ಹಸ್ತಾಂತರಿಸಿ ಕಷಾಯ ವಿತರಣೆಗೆ ಚಾಲನೆ ನೀಡಿದರು.

ಬ್ಲಾಕ್‌ ಪಂಚಾಯತ್‌ ಸದಸ್ಯ ಅವಿನಾಶ್‌ ರೈ, ಭಾಸ್ಕರ ಕನಕಪ್ಪಾಡಿ, ಗಂಗಾಧರ ಪಳ್ಳತ್ತಡ್ಕ, ಅಶೋಕ್‌ ನೀರ್ಚಾಲು, ರಮೇಶ್‌ ಅಗಲ್ಪಾಡಿ ಉಪಸ್ಥಿತರಿದ್ದರು. ಈ ಸಂದರ್ಭ 300ಕ್ಕಿಂತಲೂ ಮಿಕ್ಕಿದ ಜನರಿಗೆ ಕಷಾಯ ವಿತರಿಸಲಾಯಿತು. ಡಾ| ಶ್ರೀನಿಧಿ ಸರಳಾಯ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.