ಸ್ವಚ್ಛ ಸಮಾಜ ನಿರ್ಮಾಣ : ಗಾಂಧಿ ಆದರ್ಶ ಪಾಲನೆಯಾಗಲಿ

ಗಾಂಧೀಜಿ ವಿಚಾರಧಾರೆ: ವಿವಿಧ ಸ್ಪರ್ಧೆಗಳಿಗೆ ಚಾಲನೆ

Team Udayavani, Sep 26, 2019, 5:49 AM IST

Z-GANDHI-1

ಮಡಿಕೇರಿ: ಮಹಾತ್ಮಾ ಗಾಂಧೀಜಿಯವರು ತಮ್ಮ ಬದುಕಿನುದ್ದಕ್ಕೂ ಪಾಲಿಸಿದ ಮತ್ತು ಇತರರನ್ನು ಪ್ರೇರೇಪಿಸಿದ್ದ ಸ್ವಚ್ಛತೆಯನ್ನು ಪ್ರತಿ ಮನೆಗಳಲ್ಲಿ,  ಗ್ರಾಮಗಳಲ್ಲಿ ಪರಿಪಾಲಿಸಿದಾಗ ಆರೋಗ್ಯಯುತ ಸಮಾಜದೊಂದಿಗೆ ರಾಷ್ಟ್ರದ ಅಭ್ಯುದಯ ಸಾಧ್ಯವಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ‌ ಜ. ಕೆಂಚಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಸರ್ವೋದಯ ಸಮಿತಿಯ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಗಾಂಧೀಜಿ ವಿಚಾರಧಾರೆಯ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖಾ ಉಪ ನಿರ್ದೇಶಕ ಪಿ.ಎಸ್‌. ಮಚ್ಚಾಡೋ ಮಾತನಾಡಿ, ಗಾಂಧೀಜಿಯವರು ತಮ್ಮ ಬದುಕಿನುದ್ದಕ್ಕೂ ಎದುರಾದ ಸಣ್ಣ ಪುಟ್ಟ ವಿಷಯಗಳಲ್ಲೂ ತೋರಿದ ಪ್ರಾಮಾಣಿಕತೆ, ಕರ್ತವ್ಯಬದ್ಧತೆಗಳಿಂದ ಮಹಾತ್ಮರಾಗಿ ರೂಪುಗೊಂಡರಉ ಎಂದು ತಿಳಿಸಿದರು.

ಗಾಂಧೀ ಭವನ ನಿರ್ಮಾಣ
ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಅವರು ಮಾತನಾಡಿ, ಮಹಾತ್ಮಾ ಗಾಂಧೀಜಿಯವರ ವಿಚಾರಧಾರೆಗಳನ್ನು ಜನ ಸಮೂಹಕ್ಕೆ ತಲುಪಿಸುವುದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ರಾಜ್ಯದ 30 ಜಿಲೆಗಳಲ್ಲಿ ಗಾಂಧೀ ಭವನ ನಿರ್ಮಾಣಕ್ಕೆ ಮುಂದಾಗಿದೆ. ಪ್ರಸ್ತುತ 15 ಜಿಲ್ಲೆಗಳಲ್ಲಿ ಇದರ ಕಾರ್ಯ ಪ್ರಗತಿಯಲ್ಲಿದೆಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ‌ ಕೆ.ಟಿ. ದರ್ಶನ್‌ ಮಡಿಕೇರಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ. ಬೆೇಬಿ ಮ್ಯಾಥು ಮಾತನಾಡಿದರು.
ಲಿಯಾಕತ್‌ ಆಲಿ ಪ್ರಾರ್ಥಿಸಿ, ವಿಲ್ಫೆಡ್‌ ಕ್ರಾಸ್ತಾ ಸ್ವಾಗತಿಸಿದರುಪುದಿಯನೆರವನ ರೇವತಿ ರಮೇಶ್‌ ಕಾರ್ಯಕ್ರಮ ನಿರೂಪಿಸಿದರು. ಕೋಡಿ ಚಂದ್ರಶೇಖರ್‌ ವಂದಿಸಿದರು.

ವಿವಿಧ ಸ್ಪರ್ಧೆ
ಗಾಂಧೀಜಿ ವಿಚಾರಧಾರೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಪ್ರಬಂಧ, ಛದ್ಮವೇಷ, ಭಾಷಣ, ಶಿಕ್ಷಕರಿಗೆ ದೇಶಭಕ್ತಿಗೀತೆ ಸ್ಪರ್ಧೆಗಳು ನಡೆದವು.

ಮಹಾತ್ಮರ ಪ್ರತಿಮೆ
ಸರ್ವೋದಯ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್‌ ಮಾತನಾಡಿ, 1934 ಫೆ.23ಕ್ಕೆ ಕೊಡಗಿಗೆ ಎರಡು ದಿನಗಳ ಕಾಲ ಭೇಟಿ ನೀಡಿದ್ದ ಮಹಾತ್ಮಾಗಾಂಧೀಜಿಯವರು ಮಡಿಕೇರಿಯಲ್ಲಿ ಸಂದೇಶ ನೀಡಿದ ಸ್ಥಳ ಇಂದಿನ ಗಾಂಧೀ ಮಂಟಪ. ಪ್ರಸ್ತುತ ಅಲ್ಲಿರುವ ‌ಪ್ರತಿಮೆ ಶಿಥಿಲವಾಗಿದ್ದು, ಅಮೃತ ಶಿಲೆಯ ಆಳೆತ್ತರದ ಮಹಾತ್ಮರ ಪ್ರತಿಮೆಯನ್ನು ಸ್ಥಾಪಿಸಲು ಸರ್ವೋದಯ ಸಮಿತಿ ನಿರ್ಧಾರವನ್ನು ಕೈಗೊಂಡು, ಜಿಲ್ಲಾಡಳಿತ ಮತ್ತು ದಾನಿಗಳಿಂದ ನೆರವನ್ನು ಕೋರಿದೆ. ಅಮೃತ ಶಿಲೆಯ ಮಹಾತ್ಮರ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಿಸಲು ಚಿಂತನೆ ನಡೆಸಲಾಗಿದ್ದು, ಇದಕ್ಕೆ ಎರಡು ತಿಂಗಳ ಕಾಲಾವಧಿ ಅಗತ್ಯವಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.